ರಾಯಚೂರು: ನೆನೆಗುದಿಗೆ ಬಿದ್ದ ಗಣಿ ಕಾಮಗಾರಿ, ಭುಗಿಲೆದ್ದ ಆಕ್ರೋಶ
ರಾಯಚೂರು, ಡಿಸೆಂಬರ್, 29: ಹಟ್ಟಿಚಿನ್ನದಗಣಿ ಕಂಪನಿಯ ಮಲ್ಲಪ್ಪ ಶಾಪ್ಟ್ ಬಳಿಯಲ್ಲಿ ಸಜ್ಜುಗೊಳ್ಳುತ್ತಿರುವ 6 ಮೀಟರ್ ಸುತ್ತಳತೆಯ, 960 ಮೀಟರ್ ಆಳದ ನ್ಯೂ ಸರ್ಕ್ಯೂಲರ್ ಶಾಪ್ಟ್ ಕಾಮಗಾರಿಯ ಕೆಲಸ ಆಮೆಗತಿಯಲ್ಲಿ ಸಾಗುತ್ತಿದೆ.
ಭೂಮೀಯ ಕೆಳಮೈಯಲ್ಲಿ ಮೂರು ಶಾಪ್ಟ್ಗಳಿಗೆ ಸಂಪರ್ಕ ಕಲ್ಪಿಸಿ, ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಚೆನ್ನೈ ಮೂಲದ ಶ್ರೀರಾಮ ಇಪಿಸಿ ಕಂಪನಿಗೆ ಅಂದಾಜು 232 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯನ್ನು ಟೆಂಡರ್ ನೀಡಲಾಗಿದೆ. 2013ರ ಜನವರಿಯಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಅಲ್ಲಿಂದ 36 ತಿಂಗಳೊಳಗೆ ಅಂದರೆ 2016ರ ಜನವರಿಗೆ ಕಾಮಗಾರಿ ಮುಗಿಯಬೇಕಾಗಿತ್ತು. ಅವಧಿ ಮುಗಿದು ಆರು ವರ್ಷ ಕಳೆಯುತ್ತಾ ಬಂದರೂ ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ ಎಂದು ಕಾರ್ಮಿಕರು ಆರೋಪ ಮಾಡಿದ್ದಾರೆ.
ನೆನೆಗುದಿಗೆ ಬಿದ್ದ ಕಾಮಗಾರಿ, ಆಕ್ರೋಶ
960 ಮೀಟರ್ ಆಳದವರೆಗೆ ಶಾಫ್ಟ್ ಅನೇಕ ತಂತ್ರಜ್ಞಾನ ಅಳವಡಿಸುವ ಕೆಲಸಗಳು ನಡೆಯಬೇಕಿದೆ. ಈ ಎಲ್ಲಾ ಕಾಮಗಾರಿಗಳು ಟೆಂಡರ್ ಅವಧಿಯೊಳಗೆ ಮುಗಿಸಬೇಕಾಗಿತ್ತು. ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಉತ್ಪಾದನೆ ಮಾಡಬೇಕಾಗಿದ್ದ ಶಾಷ್ಟ್ ಇನ್ನು ಕಾಮಗಾರಿ ಮುಗಿಯುವ ಹಂತದಲ್ಲಿ ಇದೆ.

ಗಣಿ ಕಂಪನಿಯ ಚಿನ್ನದ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ 6 ಮೀಟರ್ ಸುತ್ತಳತೆಯ ಬೃಹತ್ ಪ್ರಮಾಣದ ಶಾಫ್ಟ್ ನಿರ್ಮಾಣಕ್ಕೆ ಮುಂದಾಗಿದೆ. ಭೂ ಕೆಳಮೈಯಲ್ಲಿ ಒಂದೆ ಬಾರಿಗೆ 100 ಕಾರ್ಮಿಕರು ಹೋಗಿ ಬರಲು ಹಾಗೂ ಅಧಿಕ ಪ್ರಮಾಣ ಚಿನ್ನದ ಅದಿರನ್ನು ಹೊರತರಲು ಇದು ಸಹಾಯಕವಾಗಲಿದೆ. ಈ ಕಾರಣದಿಂದ ವಿವಿಧ ದೇಶಗಳ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಕೆ ಮಾಡಿ ನ್ಯೂ ಸರ್ಕ್ಯೂಲರ್ ಶಾಪ್ಟ್ ನಿರ್ಮಾಣಕ್ಕೆ ಗಣಿ ಆಡಳಿತ ಮುಂದಾಗಿದೆ. ಮತ್ತೊಂದೆಡೆ ಕಾಮಗಾರಿ ಮಾತ್ರ ನನೆಗುದಿಗೆ ಬಿದ್ದಿದೆ ಎಂದು ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶೀಘ್ರದಲ್ಲೇ ಉತ್ಪಾದನೆಗೆ ಸಜ್ಜುಗೊಳಿಸಲು ಕ್ರಮ
ಗಣಿ ಆಡಳಿತ ಮಂಡಳಿ ಕಾಮಗಾರಿಯನ್ನು ತ್ವರಿತಗೊಳಿಸಿ, ನೂತನ ಶಾಷ್ಟ್ ಕಾಮಗಾರಿಯನ್ನು ಪೂರ್ಣಗೊಳಿಸಿ ಕಾರ್ಮಿಕರಿಗೆ ಅನುಕೂಲ ಮಾಡಿಕೋಡಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. 'ಗಣಿ ಕಂಪನಿಯಲ್ಲಿ ಚಿನ್ನ ಉತ್ಪಾದನೆ ಹೆಚ್ಚಿಸುವ ದೃಷ್ಟಿಯಿಂದ ಸರ್ಕ್ಯೂಲರ್ ಶಾಫ್ಟ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಉತ್ಪಾದನೆಗೆ ಸಜ್ಜುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಶೆಟ್ಟಣ್ಣನವರ ಹೇಳಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications