ಶಾಸಕಿಗೆ ಮರಳು ದಂಧೆಕೋರರ ಬೆದರಿಕೆ: ರಾತ್ರಿ ಇಡೀ ಧರಣಿ ನಡೆಸಿದ ಕರೆಮ್ಮ
ರಾಯಚೂರು, ಜೂನ್ 24: 'ಮರಳು ಅಕ್ರಮ ಸಾಗಣೆ ಮಾಡುತ್ತಿದ್ದ ವಾಹನಗಳ ಚಾಲಕರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ' ಎಂದು ಆರೋಪಿಸಿ ದೇವದುರ್ಗ ಶಾಸಕಿ ಕರೆಮ್ಮ ನಾಯಕ ವಾಹನಗಳ ಎದುರೇ ಪ್ರತಿಭಟನೆ ನಡೆಸಿದ್ದಾರೆ.
ಜಾಲಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಶಾಸಕಿ ಕರೆಮ್ಮ ನಾಯಕ ಅವರು ದೇವದುರ್ಗಕ್ಕೆ ಬರುತ್ತಿದ್ದರು. ಈ ವೇಳೆ ಮರಳು ಸಾಗಣೆ ವಾಹನಗಳು ಶಾಸಕಿ ಅವರ ವಾಹನಕ್ಕೆ ದಾರಿ ಬಿಡಲಿಲ್ಲ ಎನ್ನಲಾಗಿದೆ.

ಗನ್ಮ್ಯಾನ್ ಜೊತೆಗೆ ವಾಹನದಿಂದ ಹೊರಗೆ ಬಂದ ಶಾಸಕಿ, ದಾರಿ ಬಿಡುವಂತೆ ಕೇಳಿದ್ದಾರೆ. ಈ ವೇಳೆ, 'ನೀವೇ ದಾರಿ ಬಿಡಿ, ಇಲ್ಲದಿದ್ದರೆ ನಿಮ್ಮ ಮೇಲೆಯೇ ಲಾರಿ ಹತ್ತಿಸಿಕೊಂಡು ಹೋಗುತ್ತೇವೆ ಎಂದು ಲಾರಿ ಚಾಲಕರು ನನಗೆ ಬೆದರಿಕೆ ಹಾಕಿದರು' ಎಂದು ಕರೆಮ್ಮ ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಿಂದ ಲೈವ್ ನೀಡಿ, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ, 'ರಕ್ಷಣೆ ನೀಡುವಂತೆ ಜಾಲಹಳ್ಳಿ ಹಾಗೂ ದೇವದುರ್ಗ ಪೊಲೀಸರನ್ನು ಕೇಳಿದಾಗ, 'ನಮ್ಮ ವ್ಯಾಪ್ತಿಗೆ ಬರೋದಿಲ್ಲ' ಎಂದು ಹೇಳಿದರು. ನಾನು ಗೆದ್ದ ನಂತರ ಇದು ನನ್ನ ಮೇಲೆ ನಡೆಯುತ್ತಿರುವ ನಾಲ್ಕನೇ ಹಲ್ಲೆ ಪ್ರಯತ್ನ. ಜನ ಆಶೀರ್ವಾದ ಮಾಡಿದ್ದಾರೆ. ನಾನು ಸಾಯೋದಕ್ಕೂ ಸಿದ್ಧ' ಎಂದರು.

'ಮಾಜಿ ಶಾಸಕರ ಬೆಂಬಲದೊಂದಿಗೆ ಪಿಐ ಹೊಸಕೆರಪ್ಪ ಕೋಳೂರು ಶಾಮೀಲಾಗಿ, ನನ್ನ ಕೊಲೆಗೆ ಅಕ್ರಮ ಮರಳು ದಂಧೆಕೋರರಿಗೆ ಸಹಕರಿಸುತ್ತಿದ್ದಾರೆ. ಇವರಿಗೆ ಬೆಂಬಲವಾಗಿ ದೇವದುರ್ಗ ತಹಶೀಲ್ದಾರ್ ಕೆ.ವೈ. ಬಿದರಿ ಕೂಡ ನಿಂತಿದ್ದಾರೆ. ಕಳೆದ ವಾರ ನಿಲವಂಜಿ ಗ್ರಾಮದಲ್ಲಿ ಛತ್ತೀಸಗಡ ಕಾರ್ಮಿಕರ ಸಾವಿಗೆ ನೇರವಾಗಿ ಇವರೇ ಕಾರಣ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ಹಲವು ಬಾರಿ ತಂದರೂ ಪ್ರಯೋಜನವಾಗಿಲ್ಲ.
ನಾನು ಹೆದರುವುದಿಲ್ಲ. ಅಹೋರಾತ್ರಿ ಇಲ್ಲೇ ಪ್ರತಿಭಟಿಸುತ್ತೇನೆ' ಎಂದು ತಿಳಿಸಿದರು. ಶಾಸಕಿ ಕರೆಮ್ಮ ಕರೆ ಮಾಡಿ ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕೆ ಪೊಲೀಸರನ್ನು ಕಳುಹಿಸಿ ಕೊಟ್ಟಿದ್ದೇವೆ. ಅವರ ದೂರನ್ನು ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ ಎಂದು ಎಸ್ಪಿ ಬಿ.ನಿಖಿಲ್ ಹೇಳಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications