Raichur: ರಾಯಚೂರಿನ ಎಸ್ಪಿ ಕಚೇರಿ ಮುಂದೆ ಶಾಸಕರ ಪ್ರತಿಭಟನೆ: ಇಬ್ಬರು ಪೊಲೀಸರ ಅಮಾನತು
ರಾಯಚೂರು ಏಪ್ರಿಲ್ 2: ಪೊಲೀಸರ ಥಳಿತದಿಂದ ಯುವಕನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಚೂರಿನ ಎಸ್ಪಿ ಕಚೇರಿ ಮುಂದೆ ಶಾಸಕರು ಪ್ರತಿಭಟನೆ ಮಾಡಿದ್ದಾರೆ. ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಕಳೆದ ದಿನ ರಾತ್ರಿ ಪ್ರತಿಭಟನೆ ಮಾಡಲಾಗಿದ್ದು, ಪಶ್ಚಿಮ ಠಾಣೆ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು ಒತ್ತಾಯ ಹೇರಲಾಗಿದೆ. ಸೂಕ್ತ ಕ್ರಮದ ಭರವಸೆ ನೀಡಿದ ಹಿನ್ನಲೆಯಲ್ಲಿ ಶಾಸಕರು ಹೋರಾಟ ಕೈ ಬಿಟ್ಟಿದ್ದಾರೆ. ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೆಲ ಪೊಲೀಸರನ್ನು ಅಮಾನತ್ತು ಮಾಡಲಾಗಿದೆ.
ಹೌದು ಕೌಟುಂಬಿಕ ಕಲಹ ಕಾರಣಕ್ಕೆ ಪತ್ನಿ ಮತ್ತು ಪತ್ನಿ ಮನೆಯವರ ಯುವಕ ವೀರೇಶ್ ವಿರುದ್ಧ ದೂರು ನೀಡಿದ್ದರು. ದೂರಿನ ಮೇರೆಗೆ ಯುವಕನ ವಿಚಾರಣೆಗೆ ಪೊಲೀಸರು ಕರೆದೊಯ್ದಿದ್ದರು. ವಿಚಾರಣೆ ವೇಳೆ ಯುವಕ ವೀರೇಶ್ನನ್ನು ಚೆನ್ನಾಗಿ ಥಳಿಸಿದ ಆರೋಪ ಮಾಡಲಾಗಿದೆ. ಈ ವೇಳೆ ಯುವಕ ಸಾವನ್ನಪ್ಪಿದ್ದಾನೆ. ಪೊಲೀಸರ ಥಳಿತದಿಂದಲೇ ಯುವಕ ವೀರೇಶ್ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಲಾಕ್ ಅಪ್ ಡೆತ್ ಆಗಿದೆ. ಇದೊಂದು ಕೊಲೆ ಎಂದು ಆಕ್ರೋಶ ಹೊರಹಾಕಲಾಗಿದೆ. ಠಾಣೆಯಿಂದ ಮನೆಗೆ ಬಂದು ಆಸ್ಪತ್ರೆಗೆ ತೆರಳಿದ್ದಾಗ ವೀರೇಶ್ ಸಾವನ್ನಪ್ಪಿದ್ದಾರೆ. ಹೀಗಾಗಿ ಇದೊಂದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕರು ಪ್ರತಿಭಟನೆ ಮಾಡಿದ್ದಾರೆ.
ಶಾಸಕರ ಬೆಂಬಲಿಗರು ಹಾಗೂ ಕುಟುಂಬಸ್ಥರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದ್ದಾರೆ. ಇನ್ನೂ ಇಂದು ಯುವಕನ ಪೋಸ್ಟ್ ಮಾರ್ಟಮ್ ವರದಿಯಲ್ಲಿ ಎಲ್ಲಾ ಬಯಲಾಗಲಿದೆ. ಈ ಬಗ್ಗೆ ಮಾತನಾಡಿದ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್, 'ಇಂದು (ಏಪ್ರಿಲ್ 1) ನಡೆದ ಘಟನೆಗೆ ಸಂಬಂಧಪಟ್ಟಂತೆ ಸೂಕ್ರ ಕ್ರಮದ ಭರವಸೆಯನ್ನು ನೀಡಿದ್ದಾರೆ. ಆ ಯುವಕನ ಮಕ್ಕಳು ತುಂಬಾ ಚಿಕ್ಕ ಮಕ್ಕಳು. ಆ ಮಕ್ಕಳಿಗೆ ಮುಂದೆ ಉದ್ಯೋಗ ನೀಡುವ ಭರವಸೆ ನೀಡಬೇಕು. ಜೊತೆಗೆ ಅವರಿಗೆ ಆರ್ಥಿಕ ಸಹಾಯ ಮಾಡಬೇಕು ಎಂದು ನಾವು ಮನವಿ ಮಾಡಿದ್ದೇವೆ. ನಾವೂ ಕೂಡ ಪರಿಹಾರ ನೀಡುವಂತಹ ಕೆಲಸ ಮಾಡುತ್ತೇವೆ. ನಾನು ಒಬ್ಬ ವೈದ್ಯನಾಗಿ ಆ ಪೋಸ್ಟ್ ಮಾರ್ಟಮ್ ನಲ್ಲಿ ಭಾಗವಹಿಸುತ್ತೇನೆ. ಮಧ್ಯಾಹ್ನದ ವೇಳೆಗೆ ಎಲ್ಲಾ ವರದಿ ಬರಲಿದೆ' ಎಂದಿದ್ದಾರೆ.
ಐಬಿ ರಸ್ತೆ ಈಶ್ವರನಗರದ ನಿವಾಸಿ 27 ವರ್ಷದ ವೀರೇಶ್ ನಾಯಕ್ ಮೃತ ದುರ್ದೈವಿ. ಈತನನ್ನು ಮಹಿಳಾ ಠಾಣೆ, ಸದರ್ ಬಜಾರ್ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಹೊಡೆಯಲಾಗಿದೆ. ಗಂಭೀರವಾಗಿ ಗಾಯಗೊಂಡ ಬಳಿಕ ಆತನನ್ನು ಮನೆಗೆ ಕಳುಹಿಸಲಾಗಿದೆ. ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಯುವಕನ ಪ್ರಾಣ ಹೋಗಿದೆ ಎಂದು ಆರೋಪಿಸಲಾಗಿದೆ. ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಡೆಸಬೇಕು. ಅವರ ಕುಟುಂಬಕ್ಕೆ 2ಕೋಟಿ ಪರಿಹಾರ ಕೊಡಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಪ್ರತಿಭಟನೆ ಬಳಿಕ ಸಿಪಿಐ ನಾಗರಾಜ್ ಮೇಕ್, ಮಂಜುನಾಥ್ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ಶಾಸಕ ಶಿವರಾಜ ಪಾಟೀಲ ಹೇಳಿದ್ದಾರೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications