Hatti Gold Mines: ಆಗಸ್ಟ್ನಲ್ಲಿ 100 ಕೆ.ಜಿ.ಗಿಂತ ಹೆಚ್ಚು ಚಿನ್ನ ಉತ್ಪಾದನೆ, ಹಟ್ಟಿ ಚಿನ್ನದ ಗಣಿಯ ವಿಶೇಷ ಸಾಧನೆ ಇದು
ರಾಯಚೂರು, ಸೆಪ್ಟೆಂಬರ್, 09: ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಸರ್ಕಾರಿ ಸ್ವಾಮ್ಯದ ಹಟ್ಟಿಚಿನ್ನದ ಕಂಪನಿ ಪ್ರಸಕ್ತ ವರ್ಷದ ಆಗಸ್ಟ್ ತಿಂಗಳಿನಲ್ಲಿ 100 ಕೆ.ಜಿ.ಗಿಂತ ಹೆಚ್ಚು ಚಿನ್ನ ಉತ್ಪಾದನೆ ಮಾಡುವ ಮೂಲಕ ವಿಶೇಷ ಸಾಧನೆ ದಾಖಲಿಸಿದೆ.
ಆಗಸ್ಟ್ ತಿಂಗಳೊಂದರಲ್ಲಿ 48,914 ಮೆಟ್ರಿಕ್ ಟನ್ ಅದಿರು ಸಂಸ್ಕರಿಸಿ, 110.600 ಕೆ.ಜಿ.ಚಿನ್ನ ಉತ್ಪಾದಿಸಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ನಿಂದ ಜುಲೈವರೆಗೆ ಮಾಸಿಕ ಸರಾಸರಿ ಚಿನ್ನ ಉತ್ಪಾದನೆ 100 ಕೆ.ಜಿ.ದಾಟಿರಲಿಲ್ಲ. ಏಪ್ರಿಲ್ನಲ್ಲಿ 98 ಕೆ.ಜಿ., ಮೇ ನಲ್ಲಿ 94 ಕೆ.ಜಿ., ಜೂನ್ನಲ್ಲಿ 98 ಕೆ.ಜಿ. ಹಾಗೂ ಜುಲೈನಲ್ಲಿ 99 ಕೆ.ಜಿ. ಚಿನ್ನ ಉತ್ಪಾದಿಸಲಾಗಿತ್ತು.

2023-24ನೇ ಸಾಲಿನಲ್ಲಿ 1,800 ಕೆ.ಜಿ. ಚಿನ್ನ ಉತ್ಪಾದನೆ ಗುರಿಯಿದ್ದು, 5 ತಿಂಗಳಲ್ಲಿ 501.865 ಕೆ.ಜಿ. ಉತ್ಪಾದನೆ ಸಾಧಿಸಲಾಗಿದೆ. ಉತ್ಪಾದನೆ ಹೆಚ್ಚಿಸಲು ಗಣಿ ಕಂಪನಿ ನಾನಾ ಅಭಿವೃದ್ಧಿ, ಆಧುನಿಕ ಸಲಕರಣೆಗಳ ಅಳವಡಿಕೆಗೆ ಮುಂದಾಗಿದೆ. 6 ಮೀಟರ್ ಸುತ್ತಳತೆ ಹಾಗೂ 900 ಮೀಟರ್ ಆಳದ ನ್ಯೂ ಸರ್ಕ್ಯೂಲರ್ ಶಾಫ್ಟ್ ಹೊಸ ಭರವಸೆ ಮೂಡಿಸಿದೆ.
ಶಾಫ್ಟ್ನ ಕೇಜ್ ಮೂಲಕ ಒಂದೇ ಸಲಕ್ಕೆ ನೂರು ಕಾರ್ಮಿಕರು ಗಣಿಯ ಒಳಗಡೆ ಹೋಗಿ ಬರಲು ಅನುಕೂಲವಾಗಿದೆ. ಹೆಚ್ಚೆಚ್ಚು ಅದಿರು ಹೊರ ತೆಗೆಯಲು ಉಪಯುಕ್ತವಾಗಿದೆ. ಅದಿರು ಸಂಸ್ಕರಣೆಯ ಹೊಸ ಸಾಣ್ ಮತ್ತು ಬಾಲ್ ಮಿಲ್ ಸಂಸ್ಕರಣೆಗೆ ಸಿದ್ಧವಾಗಿದೆ. ಸದ್ಯ ಟ್ರಯಲ್ ನಡೆಯುತ್ತಿದೆ.
ಅಕ್ಟೋಬರ್ನಿಂದ ಪೂರ್ಣ ಪ್ರಮಾಣದಲ್ಲಿ ಅದಿರು ಸಂಸ್ಕರಣೆ ನಡೆಯಲಿದೆ. ನಿತ್ಯ 3 ಸಾವಿರ ಮೆಟ್ರಿಕ್ ಟನ್ ಅದಿರು ಸಂಸ್ಕರಿಸುವುದರಿಂದ ಚಿನ್ನ ಉತ್ಪಾದನೆಯಲ್ಲಿ ಹೆಚ್ಚಳವಾಗಲಿದೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ ಬಹದ್ದೂರ್ ಹೇಳಿದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications