ನಾರಾಯಣಪುರ ಬಲದಂಡೆ ಕಾಲುವೆ ಅಪೂರ್ಣ ಕಾಮಗಾರಿ: ಸಗಮಕುಂಟ ರೈತರಿಗೆ ಸಂಕಷ್ಟ
ರಾಯಚೂರು ಆಗಸ್ಟ್ 1: ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ನಿಗದಿತ ಅವಧಿಯಲ್ಲಿ ನಿಯಮಾನುಸಾರ ಪೂರ್ಣಗೊಳಿಸುತ್ತಿಲ್ಲ. ಬಹುತೇಕ ಕಡೆಗಳಲ್ಲಿ ಅಲ್ಲಲ್ಲಿ ಕಾಮಗಾರಿ ಅಪೂರ್ಣವಸ್ಥೆಯಲ್ಲಿದ್ದು ಬಿಟ್ಟಿದ್ದು ಜಮೀನಿಗೆ ನೀರು ಹರಿಸಿಕೊಳ್ಳಲಾಗದೆ ಸಂಕಷ್ಟ ತಂದಿದೆ ಎನ್ನುವುದು ರೈತರ ಸಾಮೂಹಿಕ ಆರೋಪವಾಗಿದೆ.
ನಾರಾಯಣಪುರ ಬಲದಂಡೆ ಕಾಲುವೆ ವಿಭಾಗದ ಸಂಖ್ಯೆ 6 ಕಾಲುವೆ ಕಾಮಗಾರಿ 2019ರಿಂದ ದೇವದುರ್ಗ ತಾಲೂಕಿನ ಚಿಕ್ಕವಣ್ಣು ಕುಣಿದಿಂದ ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದ ಸರ್ವೆ ನಂಬರ್ 63/3 ರವರೆಗೆ ಕಾಲುವೆ ನಿರ್ಮಿಸಲಾಗಿದೆ. ಸುಮಾರು 200 ಮೀಟರ್ ವರೆಗಿನ ಕಾಲುವೆ ಕಾಮಗಾರಿ ಆರಂಭದ ದಿನಗಳಿಂದ ಒಂದಿಲ್ಲೊಂದು ಸಮಸ್ಯೆಗಳ ಸುಳಿಯಲ್ಲಿ ಸಿಲಕುತ್ತ ಸಾಗಿದೆ. ಹಲವು ವರ್ಷಗಳಿಂದ ಕಾಲುವೆ ಕಾಮಗಾರಿ ನಿಲ್ಲಿಸಿದ್ದಾರೆ.

ಇದರಿಂದಾಗಿ 2019 ರಿಂದ ಪ್ರತಿ ವರ್ಷವೂ ಮಳೆ ಬಂದು ರೈತರ ಜಮೀನುಗಳಲ್ಲಿ ಕಾಲುವೆ ಒಡೆದು ಬಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಪರಿಣಾಮ, ರೈತರು ಜಮೀನುಗಳಲ್ಲಿ ಬೆಳೆಯುತ್ತಿರುವ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿವೆ. ಸುತ್ತಮುತ್ತ ರೈತರ ಜಮೀನು ಬೆಳೆ ಹಾಳಾಗಿದ್ದರೂ ಕೂಡ ಇಂದಿಗೂ ದುರಸ್ತಿಗೊಳಿಸಿಲ್ಲ.
ರೈತರಿಗೆ ಪರಿಹಾರ ನೀಡುವವರಾರು ಎಂಬ ಗೊಂದಲದಲ್ಲಿ ರೈತರು ಪರದಾಡುತ್ತಿದ್ದಾರೆ. ಇದಕ್ಕೆ ಕಾಲುವೆಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಯಾವುದೇ ಪರಿಹಾರ ನೀಡುತ್ತಿಲ್ಲ ಎಂದು ರೈತರಾದ ಸುರೇಶ ಬಡಿಗೇರ ಹಾಗೂ ರಂಗಪ್ಪ ಆರೋಪಿಸಿದರು.
ಕಾಮಗಾರಿ ಗುಣಮಟ್ಟ ಬಗ್ಗೆ ತಮಗೆ ಏನೂ ತಿಳಿಯದು. ಕೆಲವಡೆ ಕಾಮಗಾರಿ ಪೂರ್ಣಗೊಳಿಸದೆ ಹೋಗಿದ್ದಾರೆ. ಆಧುನೀಕರಣ ಕಾಮಗಾರಿ ಪೂರ್ಣಗೊಳ್ಳುವ ಅವಧಿಗೆ ಮುಂಚೆಯೇ ಕೆಲವಡೆ ಹೂಳು ತುಂಬಿದೆ. ಮುಳ್ಳುಕಂಟಿ ಬೆಳೆದು ಕಾಲುವೆ ಮುಚ್ಚಿ ಹೋಗಿವೆ. ಪ್ರತಿವರ್ಷ ಬೆಳೆ ಬೆಳೆದು ಕಾಲುವೆ ನೀರಿನ ಕಾರಣದಿಂದ ಬೆಳೆ ನಾಶ ಮಾಡಿಕೊಳ್ಳುತ್ತಿದ್ದೇವೆ. ಮಣ್ಣು ಕೊಚ್ಚಿಕೊಂಡು ಹೋಗಿ ಜಮೀನುಗಳು ಹಾಳಾಗುತ್ತಿದೆ.

ಈ ಕುರಿತು ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಪತ್ರ ಮೂಲಕ ಗಮನಕ್ಕೆ ತಂದರೂ ಕಾಲುವೆ ದುರಸ್ತಿಗೆ ಮುಂದಾಗುತ್ತಿಲ್ಲ. ಸಗಮಕುಂಟ ಗ್ರಾಮದಲ್ಲಿ ನಿರ್ಮಾಣ ಹಂತದ ಕಾಲುವೆ ಒಡೆದು ರೈತರು ಜಮೀನುಗಳಲ್ಲಿ ಬೆಳೆದ ಬೆಳೆಗಳು ಹಾಳಾಗಿವೆ. ನಷ್ಟದ ಪರಿಹಾರ ಮತ್ತು ಅಲ್ಲಲ್ಲಿ ಕಾಮಗಾರಿ ಅಪೂರ್ಣವಸ್ಥೆಯಲ್ಲಿದ್ದು ಕಾಲುವೆ ಕಾಮಗಾರಿ ಪೂರ್ಣಗೊಳಿಸುವಂತೆ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ರೈತರಾದ ಈರೇಶ , ರುಕ್ಕಮ್ಮ, ರಾಮಪ್ಪ ನಾಯಕ, ಕೃಷ್ಣಪ್ಪ ಯಾದವ ಅವರು ಅಳಲು ತೋಡಿಕೊಂಡಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications