World AIDS Day: ಎಚ್ಐವಿ ಸೋಂಕಿತರ ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ಹಣ: ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ವೈದ್ಯರ ಹಿಂದೇಟು!
ರಾಯಚೂರು ಡಿಸೆಂಬರ್ 01- ಎಚ್ಐವಿ ಸೋಂಕಿತರ ಆರೋಗ್ಯ ರಕ್ಷಣೆಗೆ ಸರ್ಕಾರ ಪ್ರತಿವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದೆ. ಸೋಂಕಿನಿಂದ ಬಳಲುತ್ತಿರುವವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ತುದಿಗಾಲ ಮೇಲೆ ನಿಂತರೂ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಶಸ್ತ್ರಚಿಕಿತ್ಸೆಗೆ ಹಿಂದೇಟು ಹಾಕುತ್ತಿದ್ದಾರೆ.
ವೈದ್ಯರು ನೆಪ ಹೇಳುತ್ತ ಶಸ್ತ್ರಚಿಕಿತ್ಸೆಯನ್ನು ಮುಂದೂಡುತ್ತ ದಿನ ಕಳೆಯುತ್ತಿದ್ದಾರೆ. ಕೊನೆಗೆ ಕಾಯಿಲೆ ಗಂಭೀರ ಸ್ವರೂಪ ಪಡೆಯುತ್ತಲೇ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಶಿಫಾರಸು ಮಾಡುತ್ತಿದ್ದಾರೆ. ಹೀಗಾಗಿ ಬಡವರು ತೊಂದರೆ ಅನುಭವಿಸುತ್ತಿದ್ದಾರೆ.

ಎಚ್ಐವಿ, ಏಡ್ಸ್ ತಡೆ ಮತ್ತು ನಿಯಂತ್ರಣ ಕಾಯ್ದೆ (2017) ಜಾರಿಯಾಗಿದೆ.
ಎಚ್ಐವಿ ಸೋಂಕಿತರಿಗೆ ಮಾಡುವ ಯಾವುದೇ ರೀತಿಯ ಕಳಂಕ, ತಾರತಮ್ಯ ಶಿಕ್ಷಾರ್ಹವಾಗಿದೆ. ₹1 ಲಕ್ಷ ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಹೀಗಾಗಿ ವೈದ್ಯರು ನಿರಾಕ ರಣೆಯನ್ನೂ ಮಾಡದೇ ಶಸ್ತ್ರಚಿಕಿತ್ಸೆಯನ್ನೂ ಕೈಗೊಳ್ಳದೆ ತಾಂತ್ರಿಕ ಕಾರಣ ತೋರಿಸಿ ದಿನ ಕಳೆಯುತ್ತಿದ್ದಾರೆ.
'ಸಾಮಾನ್ಯ ಕುಟುಂಬದ ವ್ಯಕ್ತಿಗಳು ಸಾಲ ಮಾಡಿ ಹಣ ಹೊಂದಿಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲವಾಗಿರುವ ಸೋಂಕಿತರು ನಿತ್ಯ ರಿಮ್ಸ್ ಆಸ್ಪತ್ರೆಗೆ ಅಲೆದಾಡಿ ಸುಸ್ತಾಗಿದ್ದಾರೆ' ಎಂದು ಎಚ್ಐವಿ ಸೋಂಕಿತ ವ್ಯಕ್ತಿಯೊಬ್ಬರು ಅಳಲು ತೋಡಿಕೊಂಡರು.
'ಕೆಲ ಸೋಂಕಿತರು ಮಾಂಸಗಡ್ಡೆ, ಗರ್ಭಚೀಲ ಇನ್ನಿತರ ತೊಂದರೆಯಿಂದ ಬಳಲುತ್ತಿದ್ದಾರೆ. ರಿಮ್ಸ್ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ದಿನ ಕಳೆಯುತ್ತ ಸಾಗಿದ್ದಾರೆ. ಎಚ್ಐವಿ ಸೋಂಕಿತರು ಹಲವು ಬಾರಿ ನಮ್ಮ ಸಂಸ್ಥೆಗೆ ಬಂದು ಅಳಲು ತೋಡಿಕೊಂಡಿದ್ದಾರೆ. ಚಿಕಿತ್ಸೆ ನೀಡಬೇಕಾದ ವೈದ್ಯರೇ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿರುವುದು ಬೇಸರ ಉಂಟು ಮಾಡಿದೆ' ಎಂದು ಹೊಸ ಬೆಳಕು ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ದೇವರಾಜ ಹೇಳುತ್ತಾರೆ.
'ಸರ್ಕಾರಿ ಆಸ್ಪತ್ರೆ ಯಲ್ಲಿ ಶಸ್ತ್ರಚಿಕಿತ್ಸೆ ಮಾಡದ ಕಾರಣ ಸೋಂಕಿತರಿಂದಲೇ ₹5 ಸಾವಿರ ಬೆಲೆಯ ಕಿಟ್ ತರಿಸಿಕೊಂಡು ಖಾಸಗಿ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ತಾರತಮ್ಯ ನಿಲ್ಲಬೇಕು. ಸೋಂಕಿತರಿಗೆ ಮಾನವೀಯ ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡುವಂತೆ ಆಗಬೇಕು' ಎನ್ನುತ್ತಾರೆ ಅವರು.
'ಎಚ್ಐವಿ ಸೋಂಕಿತ ಮಹಿಳೆಯರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಗಳು ಆಗುತ್ತಿವೆ. ಕೆಲವು ಪ್ರಕರಣಗಳಲ್ಲಿ ಸಿಸೇರಿಯನ್ ಸಹ ಮಾಡಲಾಗಿದೆ. ಇತರ ಕಾಯಿಲೆಗಳ ಶಸ್ತಚಿಕಿತ್ಸೆ ಮಾಡಲು ವೈದ್ಯರು ನಿರಾಕರಿಸಿರುವುದು ಹಾಗೂ ಅನಗತ್ಯವಾಗಿ ಸಮಯ ಮುಂದೂಡಿದ್ದರ ಮಾಹಿತಿ ಇಲ್ಲ. ಲಿಖಿತ ದೂರು ಕೊಟ್ಟರೆ ಡಿಎಚ್ಒ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಹೇಳುತ್ತಾರೆ.
ವಿಶ್ವ ಏಡ್ಸ್ ದಿನ
ಡಿಸೆಂಬರ್ 1 ವಿಶ್ವ ಏಡ್ಸ್ ದಿನ. ವಿಶ್ವ ಆರೋಗ್ಯ ಸಂಸ್ಥೆ (WHO) 1988 ರಲ್ಲಿ ಜಗತ್ತಿನಾದ್ಯಂತ ಈ ಸಾಂಕ್ರಾಮಿಕ ರೋಗದ ಬಗ್ಗೆ ಜನರಲ್ಲಿ ಮಾಹಿತಿ ವಿನಿಮಯವನ್ನು ಸುಲಭಗೊಳಿಸಲು ದಿನವನ್ನು ಸ್ಥಾಪಿಸಿತು. ಸುಮಾರು 180 ವಿಶ್ವ ದೇಶಗಳು ಈಗ ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸುತ್ತವೆ.
ಡಿಸೆಂಬರ್ 1, 1988 ರಂದು ಜಗತ್ತು ಮೊಟ್ಟಮೊದಲ ಆರೋಗ್ಯ ದಿನವನ್ನು ಆಚರಿಸಿತು. ಈ ಸೋಂಕನ್ನು 1984 ರಲ್ಲಿ ಗುರುತಿಸಲಾಗಿದ್ದರೂ, 35 ಮಿಲಿಯನ್ಗಿಂತಲೂ ಹೆಚ್ಚು ಜನರು ಎಚ್ಐವಿ ಅಥವಾ ಏಡ್ಸ್-ಸಂಬಂಧಿತ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications