ಈಶಾನ್ಯ ಪದವೀಧರ ಕ್ಷೇತ್ರ: ಪೈಪೋಟಿ ಕೊಡ್ತಾರಾ ಡಾ.ರಝಾಕ್ ಉಸ್ತಾದ್?
ರಾಯಚೂರು, ಜೂನ್.08 : ರಾಜ್ಯ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯ ಗುಂಗು ಇನ್ನೂ ಬಿಟ್ಟಿಲ್ಲ. ಇದೀಗ ವಿಧಾನ ಪರಿಷತ್ ಚುನಾವಣೆ ಬಂದಿದೆ. ಅದರಲ್ಲೂ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಹೈದ್ರಾಬಾದ್ ಕರ್ನಾಟಕದ ಹೋರಾಟಗಾರ ಡಾ.ರಝಾಕ್ ಉಸ್ತಾದ್ ಕಣದಲ್ಲಿದ್ದು ಕಾಂಗ್ರೆಸ್, ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಒಳಗೊಂಡಿರುವುದು ಈಶಾನ್ಯ ಪದವೀಧರ ಕ್ಷೇತ್ರ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಬಿಎಸ್ಪಿ, ಕನ್ನಡ ಚಳವಳಿ ವಾಟಾಳ್ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಹೈದ್ರಾಬಾದ್ ಕರ್ನಾಟಕ ಆರು ಜಿಲ್ಲೆಯ ಹಾಗೂ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಸೇರಿ 50 ತಾಲೂಕುಗಳು ಬರುತ್ತವೆ. ಒಟ್ಟು 82,054 ಪದವೀಧರರಿದ್ದು ಮತ ಚಲಾಯಿಸಲಿದ್ದಾರೆ.

ಕಾಂಗ್ರೆಸ್ನಿಂದ ಡಾ.ಚಂದ್ರಶೇಖರ್ ಪಾಟೀಲ್, ಬಿಜೆಪಿಯಿಂದ ಕೆ.ಬಿ.ಶ್ರೀನಿವಾಸ್, ಜೆಡಿಎಸ್ನಿಂದ ಎನ್.ಪ್ರತಾಪರೆಡ್ಡಿ, ಬಿಎಸ್ಪಿಯಿಂದ ಡಾ.ರಾಹುಲ್ ತಮ್ಮನ್, ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್, ಪಕ್ಷೇತರ ಅಭ್ಯರ್ಥಿಯಾಗಿ ಕಲಂ 371(ಜೆ)ರ ಸಮರ್ಪಕ ಜಾರಿಗಾಗಿ ಹೋರಾಟಗಳಲ್ಲಿ ಸಕ್ರಿಯರಾಗಿರುವ ರಾಯಚೂರಿನ ಡಾ.ರಝಾಕ್ ಉಸ್ತಾದ್ ಸ್ಪರ್ಧಿಸಿದ್ದಾರೆ.
ಹಲವಾರು ವರ್ಷಗಳಿಂದ ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಡಾ.ರಝಾಕ್ ಉಸ್ತಾದ್ ಪ್ರಮುಖ ಪಕ್ಷಗಳ ಅಭ್ಯರ್ಥಿಗಳಿಗೆ ಪ್ರಬಲ ಪೈಪೋಟಿ ನೀಡುವ ಸಾಧ್ಯತೆಯಿದೆ.
ಕಳೆದ ಅವಧಿಯಲ್ಲಿ ಬಿಜೆಪಿ ಪಾಲಾಗಿದ್ದ ಈಶಾನ್ಯ ಪದವೀಧರರ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಕಾಂಗ್ರೆಸ್, ಬಿಜೆಪಿ ಮಧ್ಯೆ ಪೈಪೋಟಿ ಕಂಡು ಬರುತ್ತಿದ್ದರೂ ಪಕ್ಷೇತರ ಅಭ್ಯರ್ಥಿ ಡಾ.ರಝಾಕ್ ಉಸ್ತಾದ್ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿದೆ.
ವಿದ್ಯಾರ್ಥಿ, ಯುವಜನರು ಸ್ವಯಂಪ್ರೇರಿತವಾಗಿ ಕೆಲಸ ಮಾಡುತ್ತಿದ್ದು, ಹೈದ್ರಾಬಾದ್ ಕರ್ನಾಟಕದ ಬಹುತೇಕ ಸಂಘಟನೆಗಳು ಉಸ್ತಾದ್ ಬೆಂಬಲಕ್ಕಿವೆ. ಪಕ್ಷಾತೀತವಾಗಿಯೂ ಹಲವರು ಕೈ ಜೋಡಿಸುವ ಸಾಧ್ಯತೆಯಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications