ರಾಯಚೂರು: ವಿಕಲ ಚೇತನರ ಜೀವನ ನಿರ್ವಹಣೆಗೆ ನೆರವಾದ ನರೇಗಾ ಯೋಜನೆ
ರಾಯಚೂರು, ಜುಲೈ 31: ನರೇಗಾ ಯೋಜನೆಯಡಿ ರಾಯಚೂರು ತಾಲೂಕಿನ ಜಂಬಲದಿನ್ನಿ ಗ್ರಾಮ ಪಂಚಾಯಿತಿಯು ವಿಕಲ ಚೇತನರ ಉದ್ಯೋಗ ಚೀಟಿ ವಿತರಿಸುವ ಮೂಲಕ ದುಡಿಯುವ ಕೈಗಳಿಗೆ ಉದ್ಯೋಗ ನೀಡಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ನಲ್ಲಾರೆಡ್ಡಿ, ಟಿ.ಈರೇಶ, ಗೋಕರ್ ಬಾಷಾ, ಯು.ಈರೇಶ, ಸುರೇಶ, ಭೀಮರಾವ, ಉರುಕುಂದಪ್ಪ, ತಿಮ್ಮಪ್ಪ ಹಾಗೂ ಕೊತ್ತದೊಡ್ಡಿ ಗ್ರಾಮದ ನಿವಾಸಿ ಪಲ್ಲಯ್ಯ ಸೇರಿ 8 ಜನ ವಿಕಲ ಚೇತನರು ಕೆಲಸ ನಿರ್ವಹಿಸುತ್ತಿದ್ದಾರೆ.

ಅವರನ್ನು ಯಾರೂ ಹೊಲಗಳ ಕೆಲಸಕ್ಕೆ ಕರೆಯುವುದಿಲ್ಲ. 'ನನಗೆ ಓದಲು ಬರೆಯಲು ಬರುವುದಿಲ್ಲ. ಎಂಟನೇ ವಯಸ್ಸಿನಲ್ಲಿ ನಾನು ಗೆಳೆಯರ ಜೊತೆ ಆಟವಾಡುವಾಗ ಬಿದ್ದು ನನ್ನ ಎಡಗೈ ಕಳೆದುಕೊಂಡಿದ್ದೇನೆ. ಆದರೆ ನನ್ನ ಜೀವನಕ್ಕೆ ನರೇಗಾ ಆಸರೆಯಾಗಿದೆ' ಎಂದು ಪಲ್ಲಯ್ಯ ಭಾವನಾತ್ಮಕವಾಗಿ ಮಾತನಾಡಿದ್ದಾರೆ.
ಇವರಿಗೆ ಮೂವರು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ಕೈ ಕಳೆದುಕೊಂಡ ಪಲ್ಲಯ್ಯ ಕಳೆದ 5 ವರ್ಷಗಳಿಂದ ತಮ್ಮ ಗ್ರಾಮದಲ್ಲಿಯೇ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಚಿಕ್ಕ ವಯಸ್ಸಿನಲ್ಲಿಯೇ ಕೈ ಕಳೆದುಕೊಂಡಿದ್ದರಿಂದ ಕುಟುಂಬ ನಿರ್ವಹಣೆಗೆ ಅರ್ಥಿಕ ಮೂಲ ಇರದ ಕಾರಣ ಇಡೀ ಕುಟುಂಬವು ಕೂಲಿ ಕೆಲಸ ನೆಚ್ಚಿಕೊಂಡಿದೆ.
ಗ್ರಾಮೀಣ ಭಾಗದಲ್ಲಿ ಕೆಲಸವಿಲ್ಲದೆ ಇರುವ ದುರ್ಬಲ ಕುಟುಂಬಕ್ಕೆ ನರೇಗಾ ಯೋಜನೆಯ ಮುಖಾಂತರ ಕೂಲಿ ಕೆಲಸ ನೀಡುವ ಕಾರ್ಯ ಮಾಡಲಾಗುತ್ತಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ ಹೇಳಿದ್ದಾರೆ.
ನರೇಗಾ ಯೋಜನೆಯಡಿ 100 ದಿನಗಳ ಕೆಲಸ ಪಡೆಯಲು ಅವಕಾಶವಿದ್ದು, ಹಲವಾರು ವರ್ಷಗಳಿಂದ ಪಲ್ಲಯ್ಯನ ಕುಟುಂಬವು ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದೆ. ಬದು ನಿರ್ಮಾಣ ಮಾಡುವುದು, ನಾಲಾ, ಹಳ್ಳ ಮತ್ತು ಕೆರೆ ಹೊಳೆತ್ತುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸಿರುತ್ತಾರೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಂಗವಿಕಲರಿಗೂ ಕೆಲಸ ಮಾಡಲು ಅವಕಾಶಗಳು ಕಲ್ಪಿಸಿದ್ದು, ಕೆಲಸದ ಪರಿಮಾಣದಲ್ಲಿ ಶೇ 50ರಷ್ಟು ರಿಯಾಯಿತಿ ನೀಡುವುದರ ಜೊತೆಗೆ ಪೂರ್ಣ ಪ್ರಮಾಣದ ಕೂಲಿ ನೀಡಲಾಗುತ್ತದೆ. ಪಲ್ಲಯ್ಯ ರವರಂತಹ ದುರ್ಬಲ ಕುಟುಂಬಕ್ಕೆ ನರೇಗಾ ಯೋಜನೆಯ ಅವಕಾಶ ವರದಾನವಾಗಿದೆ.
ಪ್ರಸಕ್ತ ವರ್ಷ ಏಪ್ರಿಲ್ನಿಂದ ಜೂನ್ವರೆಗೆ 78 ದಿನ ಕೆಲಸ ಮಾಡಿ ಕೂಲಿ ಹಣ ಪಡೆದು ತಮ್ಮ ಕುಟುಂಬದ ದೈನಂದಿನ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications