ಬಿಗ್ ನ್ಯೂಸ್: ವೃದ್ದಾಪ್ಯ ವೇತನ, ಅಂಗವಿಕಲ ಮಾಸಾಶನ ಹೆಚ್ಚಿಸಿದ ಸಿಎಂ
ರಾಯಚೂರು, ಜೂನ್ 26: ವೃದ್ದಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಈ ಭರವಸೆ ನೀಡಿದ್ದು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600ಮಾಸಾಶನವನ್ನು1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರಬೇಕು ಎಂಬ ದೃಷ್ಟಿಯಿಂದ ಅವರ ಮಾಸಾಶನವನ್ನು 2500ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದೇನೆ ಎಂದರು.

ಕೃಷಿ ಅಭಿವೃದ್ಧಿಗೆ ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕೃಷಿಕರು ಸುಸ್ಥಿರ ಬದುಕು ರೂಪಿಸಿಕೊಳ್ಳುವುದಕ್ಕೆ ಮುಂದಾಗಬೇಕು ಎಂದ ಅವರು, ಎನ್ ಪಿಎಸ್ ನೌಕಕರ ನೋವು ನನಗೆ ಅರ್ಥವಾಗಿದ್ದು, ಎನ್ ಪಿಎಸ್ ರದ್ದು ಮಾಡಬೇಕೇ ಬೇಡವೇ ಎಂಬುದಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ವರದಿ ಬಂದ ತಕ್ಷಣ ತಮ್ಮನ್ನು ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಅನಗತ್ಯ ಟೀಕೆ ಮಾಡುವ ಪ್ರತಿಪಕ್ಷಗಳಿಗೆ ತಮ್ಮ ಶೈಲಿಯಲ್ಲಿಯೇ ಚಾಟಿ ಬಿಸಿದ ಸಿಎಂ ಅವರು ರಾಯಚೂರು ಜಿಲ್ಲೆಯಲ್ಲಿ 272.22ಕೋಟಿ ರೂ. ರೈತರ ಸಾಲಮನ್ನಾಗೆ ಇದುವರೆಗೆ ರಾಯಚೂರು ಜಿಲ್ಲೆಗೆ ಸಂದಾಯ ಮಾಡಲಾಗಿದೆ ಎಂದು ಹೇಳಿದರು. ಪ್ರಾಮಾಣಿಕವಾಗಿ ರೈತರ ಸಾಲಮನ್ನಾಗೆ ಹಾಗೂ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿರುವುದಾಗಿ ತಿಳಿಸಿದ ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲಮನ್ನಕ್ಕಾಗಿ ಒಂದು ವರ್ಷದಲ್ಲಿಯೇ 25ಸಾವಿರ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications