Get Updates
Get notified of breaking news, exclusive insights, and must-see stories!

ಬಿಗ್ ನ್ಯೂಸ್‌: ವೃದ್ದಾಪ್ಯ ವೇತನ, ಅಂಗವಿಕಲ ಮಾಸಾಶನ ಹೆಚ್ಚಿಸಿದ ಸಿಎಂ

ರಾಯಚೂರು, ಜೂನ್ 26: ವೃದ್ದಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಈ ಭರವಸೆ ನೀಡಿದ್ದು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.

ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600ಮಾಸಾಶನವನ್ನು‌1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರಬೇಕು ಎಂಬ ದೃಷ್ಟಿಯಿಂದ ಅವರ ಮಾಸಾಶನವನ್ನು 2500ಕ್ಕೆ ಹೆಚ್ಚಿಸಲು ನಿರ್ಧರಿಸಿದ್ದೇನೆ ಎಂದರು.

Old age pension and disable pension hike announcement by CM Kumaraswamy

ಕೃಷಿ ಅಭಿವೃದ್ಧಿಗೆ ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕೃಷಿಕರು ಸುಸ್ಥಿರ ಬದುಕು ರೂಪಿಸಿಕೊಳ್ಳುವುದಕ್ಕೆ ಮುಂದಾಗಬೇಕು ಎಂದ ಅವರು, ಎನ್ ಪಿಎಸ್ ನೌಕಕರ ನೋವು ನನಗೆ ಅರ್ಥವಾಗಿದ್ದು, ಎನ್ ಪಿಎಸ್ ರದ್ದು ಮಾಡಬೇಕೇ ಬೇಡವೇ ಎಂಬುದಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ವರದಿ ಬಂದ ತಕ್ಷಣ ತಮ್ಮನ್ನು ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ಅನಗತ್ಯ ಟೀಕೆ ಮಾಡುವ ಪ್ರತಿಪಕ್ಷಗಳಿಗೆ ತಮ್ಮ ಶೈಲಿಯಲ್ಲಿಯೇ ಚಾಟಿ ಬಿಸಿದ ಸಿಎಂ ಅವರು ರಾಯಚೂರು ಜಿಲ್ಲೆಯಲ್ಲಿ 272.22ಕೋಟಿ ರೂ. ರೈತರ ಸಾಲಮನ್ನಾಗೆ ಇದುವರೆಗೆ ರಾಯಚೂರು ಜಿಲ್ಲೆಗೆ ಸಂದಾಯ ಮಾಡಲಾಗಿದೆ ಎಂದು ಹೇಳಿದರು. ಪ್ರಾಮಾಣಿಕವಾಗಿ ರೈತರ ಸಾಲಮನ್ನಾಗೆ ಹಾಗೂ ರೈತರ ಕಲ್ಯಾಣಕ್ಕೆ ಶ್ರಮಿಸುತ್ತಿರುವುದಾಗಿ ತಿಳಿಸಿದ ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲಮನ್ನಕ್ಕಾಗಿ ಒಂದು ವರ್ಷದಲ್ಲಿಯೇ 25ಸಾವಿರ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+