Get Updates
Get notified of breaking news, exclusive insights, and must-see stories!

ರಾಯಚೂರಿನ ಕೆಮಿಕಲ್ ಕಂಪನಿಯಲ್ಲಿ ರಾಸಾಯನಿಕ ಸೋರಿಕೆ; ವ್ಯಕ್ತಿ ಸಾವು

ರಾಯಚೂರು, ಅಕ್ಟೋಬರ್ 21: ರಾಯಚೂರಿನ ವಡ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೊರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ರಾಸಾಯನಿಕವು ಸೋರಿಕೆಯಾಗಿ, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಮೂರು ಮಂದಿ ಅಸ್ವಸ್ಥರಾಗಿದ್ದಾರೆ.

ಅಕ್ಟೋಬರ್ 20ರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ನೆರೆ ರಾಜ್ಯ ಹೈದರಾಬಾದ್ ನ ಲಿಂಗಮಪಲ್ಲಿ ಮೂಲದ ಲಕ್ಷ್ಮಣ (28) ಎಂಬುವರು ಮೃತಪಟ್ಟಿದ್ದಾರೆ. ಇಂದಪೂರಿನ ಅರವಿಂದ (24), ದೇವಸಗೂರಿನ ಅನಿಲ (25) ಹಾಗೂ ಚಿಕ್ಕಸೂಗೂರಿನ ಮಾರುಫ್ (22) ಎಂಬುವರು ರಾಸಾಯನಿಕದಿಂದಾಗಿ ಅಸ್ವಸ್ಥರಾಗಿದ್ದು, ರಾತ್ರಿಯೇ ಸ್ಥಳೀಯ ಆಸ್ಪತ್ರೆಗೆ ಈ ಮೂವರನ್ನು ದಾಖಲಿಸಲಾಗಿತ್ತು. ಇದರಲ್ಲಿ ಇಬ್ಬರು ಚೇತರಿಸಿಕೊಂಡಿದ್ದಾರೆ. ಒಬ್ಬರು ಇನ್ನೂ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.

Raichur: One Person Dies And 3 Fell Ill After Chemical Leak

ಲ್ಯಾಬೊರೇಟರಿಯಲ್ಲಿ ಸಿಪಿಪಿ ಎಂಬ ರಾಸಾಯನಿಕವನ್ನು ನಿನ್ನೆ ಲೋಡ್ ಮಾಡುವ ಸಂದರ್ಭದಲ್ಲಿ ರಾಸಾಯನಿಕವು ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಈ ಸಂಬಂಧ ಯಾವುದೇ ಪ್ರಕರಣವನ್ನು ದಾಖಲಿಸಲಾಗಿಲ್ಲ.

Recommended Video

      ಮೋದಿ ಕೊಟ್ರು ವಿಶೇಷ ಸಲಹೆ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+