ರಾಯಚೂರಿನ ಕೆಮಿಕಲ್ ಕಂಪನಿಯಲ್ಲಿ ರಾಸಾಯನಿಕ ಸೋರಿಕೆ; ವ್ಯಕ್ತಿ ಸಾವು
ರಾಯಚೂರು, ಅಕ್ಟೋಬರ್ 21: ರಾಯಚೂರಿನ ವಡ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೊರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ರಾಸಾಯನಿಕವು ಸೋರಿಕೆಯಾಗಿ, ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಮೂರು ಮಂದಿ ಅಸ್ವಸ್ಥರಾಗಿದ್ದಾರೆ.
ಅಕ್ಟೋಬರ್ 20ರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ನೆರೆ ರಾಜ್ಯ ಹೈದರಾಬಾದ್ ನ ಲಿಂಗಮಪಲ್ಲಿ ಮೂಲದ ಲಕ್ಷ್ಮಣ (28) ಎಂಬುವರು ಮೃತಪಟ್ಟಿದ್ದಾರೆ. ಇಂದಪೂರಿನ ಅರವಿಂದ (24), ದೇವಸಗೂರಿನ ಅನಿಲ (25) ಹಾಗೂ ಚಿಕ್ಕಸೂಗೂರಿನ ಮಾರುಫ್ (22) ಎಂಬುವರು ರಾಸಾಯನಿಕದಿಂದಾಗಿ ಅಸ್ವಸ್ಥರಾಗಿದ್ದು, ರಾತ್ರಿಯೇ ಸ್ಥಳೀಯ ಆಸ್ಪತ್ರೆಗೆ ಈ ಮೂವರನ್ನು ದಾಖಲಿಸಲಾಗಿತ್ತು. ಇದರಲ್ಲಿ ಇಬ್ಬರು ಚೇತರಿಸಿಕೊಂಡಿದ್ದಾರೆ. ಒಬ್ಬರು ಇನ್ನೂ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.

ಲ್ಯಾಬೊರೇಟರಿಯಲ್ಲಿ ಸಿಪಿಪಿ ಎಂಬ ರಾಸಾಯನಿಕವನ್ನು ನಿನ್ನೆ ಲೋಡ್ ಮಾಡುವ ಸಂದರ್ಭದಲ್ಲಿ ರಾಸಾಯನಿಕವು ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಈ ಸಂಬಂಧ ಯಾವುದೇ ಪ್ರಕರಣವನ್ನು ದಾಖಲಿಸಲಾಗಿಲ್ಲ.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications