Get Updates
Get notified of breaking news, exclusive insights, and must-see stories!

ಅನ್ನಭಾಗ್ಯ ಯೋಜನೆಯಡಿ ಸಿಗದ ಪಡಿತರ ಹಣ: ಪ್ರತಿನಿತ್ಯ ತಪ್ಪದ ಅಲೆದಾಟ

ರಾಯಚೂರು, ಆಗಸ್ಟ್‌ 13: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಪಡಿತರ ಹಣ ಜಮಾ ಆಗದ ಕಾರಣ ನೂರಾರು ಜನರು ಬ್ಯಾಂಕ್, ಆಹಾರ ಇಲಾಖೆಯ ಕಚೇರಿಗೆ ನಿತ್ಯ ಅಲೆದಾಡುವಂತಾಗಿದೆ.

ಅನ್ನಭಾಗ್ಯ ಯೋಜನೆಯಡಿ ನೀಡುವ 10 ಕೆ.ಜಿ ಅಕ್ಕಿಯಲ್ಲಿ 5 ಕೆ.ಜಿ ಅಕ್ಕಿಯ ಬದಲು ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವುದಾಗಿ ಸರ್ಕಾರ ಹೇಳಿದೆ. ಅದರಂತೆ ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಜೂನ್‌ನಲ್ಲಿ ತಲಾ 5 ಕೆ.ಜಿ ಅಕ್ಕಿ ಕೊಡಲಾಗಿದೆ. ಉಳಿದ 5 ಕೆ.ಜಿಯ ತಲಾ ₹170( ಪ್ರತಿ ಸದಸ್ಯರಿಗೆ) ನಗದು ಹಣ ಇನ್ನೂ 1 ಲಕ್ಷ ಪಡಿತರ ಚೀಟಿದಾರರಿಗೆ ಹಣ ಜಮಾ ಆಗಿಲ್ಲ.

People Daily Rushed To Bank For Anna Bhagya Scheme

ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ 4,53,425 ಆದ್ಯತಾ ಪಡಿತರ ಚೀಟಿಗಳಲ್ಲಿ (ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ) 4,03,920 ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗಳು ಸಕ್ರಿಯವಾಗಿವೆ. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿವೆ. ಬ್ಯಾಂಕ್ ಖಾತೆ ಜೋಡಣೆಯಾಗಿರುವ ಪಡಿತರ ಚೀಟಿದಾರರಲ್ಲಿ ಜೂನ್‌ನಲ್ಲಿ ಆಹಾರ ಧಾನ್ಯ ಪಡೆದ ಕುಟುಂಬಗಳಿಗೆ ಜುಲೈನಲ್ಲಿ ನಗದು ವರ್ಗಾವಣೆಗೆ ಪರಿಗಣಿಸಿಲಾಗಿತ್ತು.

3,37,652 ಪಡಿತರ ಚೀಟಿದಾರರಿಗೆ ನಗದು ಜಮಾ ಮಾಡಲಾಗಿದೆ. 1,14,000 ಪಡಿತರ ಚೀಟಿದಾರರಿಗೆ ಹಣ ಜಮಾ ಆಗಿಲ್ಲ ಈ ಪೈಕಿ 61 ಸಾವಿರ ಪಡಿತರ ಚೀಟಿದಾರರು ಬ್ಯಾಂಕ್ ಖಾತೆ ಹೊಂದಿಲ್ಲದವರು, ಬ್ಯಾಂಕ್ ಕೆವೈಸಿ ಮಾಡದ ಹಾಗೂ 3 ತಿಂಗಳ ಕಾಲ ನಿರಂತರವಾಗಿ ಪಡಿತರ ಧಾನ್ಯ ಪಡೆಯದ ಅನೇಕ ಪಡಿತರ ಚೀಟಿ ತಾತ್ಕಾಲಿಕ ಸ್ಥಗಿತವಾದ ಕಾರಣ ಹಣ ಜಮಾ ಆಗಿಲ್ಲ. ಅಲ್ಲದೇ ಇದರಲ್ಲಿ 3 ಸದಸ್ಯರಿಗಿಂತ ಕಡಿಮೆ ಇರುವ ಪಡಿತದಾರರಿಗೂ ಹಣ ಜಮಾ ಆಗುವುದಿಲ್ಲ ಎಂದು ಹೇಳಲಾಗಿದೆ.

ಈ ಮೊದಲಿನಂತೆಯೇ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಕೊಡಬೇಕು. ಯಾವುದೇ ಷರತ್ತುಗಳಿಲ್ಲದೇ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಿಯಾತಲಾಬ್ ಬಡಾವಣೆಯ ನಿವಾಸಿ ತಸ್ಲೀಂ ಬಾನು ಮನವಿ ಮಾಡಿದ್ದಾರೆ.

People Daily Rushed To Bank For Anna Bhagya Scheme

ಷರತ್ತುಗಳೇ ಮುಳುವು

ಜಿಲ್ಲೆಯಲ್ಲಿ ಅನೇಕರು ಪ್ರಧಾನಮಂತ್ರಿ ಜನಧನ್ ಯೋಜನೆಯಡಿ ಉಚಿತ ಬ್ಯಾಂಕ್ ಖಾತೆ ತೆರೆದಿದ್ದರು. ಆದರೆ ಖಾತೆ ತೆರೆದ ನಂತರ ಯಾವುದೇ ವ್ಯವಹಾರ ನಡೆಸದ ಕಾರಣ ಆರ್‌ಬಿಐ ನಿಯಮ ಅನ್ವಯ ಎರಡು ವರ್ಷದ ಅವಧಿಯವರೆಗೆ ಬ್ಯಾಂಕ್ ವ್ಯವಹಾರ ನಡೆಸದಿದ್ದರೆ ಖಾತೆ ನಿಷ್ಕ್ರಿಯವಾಗಿದೆ ಎಂದು ಅನೇಕರಿಗೆ ತಿಳಿದಿಲ್ಲ. ಹೀಗಾಗಿ ಸಮಸ್ಯೆಯಾಗಿದೆ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಕೆವೈಸಿ ಮಾಡದ ಕಾರಣ ಕೆಲವು ಖಾತೆಗಳು ನಿಷ್ಕ್ರಿಯವಾಗಿದೆ. ಕೆಲವರ ಆಧಾರ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆ ಇಲ್ಲ, ನಮೂದಿಲ್ಲ, ಮೊಬೈಲ್ ಸಂಖ್ಯೆ ಬದಲು, ಇತರೆ ತಾಂತ್ರಿಕ ಸಮಸ್ಯೆಗಳಿಂದಲೂ ಆಧಾರ್‌ ಲಿಂಕ್‌ ಆಗದೇ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗಿಲ್ಲ ಎನ್ನುವುದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವಿವರಣೆ.

ಕೆಲವರು ದುಡಿಯಲು ಮಹಾನಗರಗಳಿಗೆ ಗುಳೆ ಹೋಗಿದ್ದಾರೆ. ಅವರು ಮೂರು ತಿಂಗಳ ಕಾಲ ಪಡಿತರ ಪಡೆಯದ ಕಾರಣ ತಾತ್ಕಾಲಿಕವಾಗಿ ರದ್ದಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭಿಗಳಿಗೆ ಹಣ ವರ್ಗಾವಣೆ ಮಾಡಲು ಎನ್ಐಸಿಯಿಂದ ನಮಗೆ ಸಿಕ್ಕ ಡಾಟಾ ಪ್ರಕಾರ ಹಣ ಜಮಾ ಮಾಡಲಾಗಿದೆ.

ಇಲಾಖೆಯ ನಿಯಮದ ಪ್ರಕಾರ ಕೇವಲ 1 ಸಾವಿರ ಪಡಿತರ ಚೀಟಿದಾರರಿಗೆ ಮಾತ್ರ ಹಣ ವರ್ಗಾವಣೆ ಬಾಕಿಯಿದೆ. ಉಳಿದ ಫಲಾನುಭವಿಗಳಿಗೂ ಶೀಘ್ರ ಹಣ ಜಮಾ ಮಾಡಲಾಗುವುದು ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+