ಅನ್ನಭಾಗ್ಯ ಯೋಜನೆಯಡಿ ಸಿಗದ ಪಡಿತರ ಹಣ: ಪ್ರತಿನಿತ್ಯ ತಪ್ಪದ ಅಲೆದಾಟ
ರಾಯಚೂರು, ಆಗಸ್ಟ್ 13: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಪಡಿತರ ಹಣ ಜಮಾ ಆಗದ ಕಾರಣ ನೂರಾರು ಜನರು ಬ್ಯಾಂಕ್, ಆಹಾರ ಇಲಾಖೆಯ ಕಚೇರಿಗೆ ನಿತ್ಯ ಅಲೆದಾಡುವಂತಾಗಿದೆ.
ಅನ್ನಭಾಗ್ಯ ಯೋಜನೆಯಡಿ ನೀಡುವ 10 ಕೆ.ಜಿ ಅಕ್ಕಿಯಲ್ಲಿ 5 ಕೆ.ಜಿ ಅಕ್ಕಿಯ ಬದಲು ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವುದಾಗಿ ಸರ್ಕಾರ ಹೇಳಿದೆ. ಅದರಂತೆ ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಜೂನ್ನಲ್ಲಿ ತಲಾ 5 ಕೆ.ಜಿ ಅಕ್ಕಿ ಕೊಡಲಾಗಿದೆ. ಉಳಿದ 5 ಕೆ.ಜಿಯ ತಲಾ ₹170( ಪ್ರತಿ ಸದಸ್ಯರಿಗೆ) ನಗದು ಹಣ ಇನ್ನೂ 1 ಲಕ್ಷ ಪಡಿತರ ಚೀಟಿದಾರರಿಗೆ ಹಣ ಜಮಾ ಆಗಿಲ್ಲ.

ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ 4,53,425 ಆದ್ಯತಾ ಪಡಿತರ ಚೀಟಿಗಳಲ್ಲಿ (ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ) 4,03,920 ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗಳು ಸಕ್ರಿಯವಾಗಿವೆ. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿವೆ. ಬ್ಯಾಂಕ್ ಖಾತೆ ಜೋಡಣೆಯಾಗಿರುವ ಪಡಿತರ ಚೀಟಿದಾರರಲ್ಲಿ ಜೂನ್ನಲ್ಲಿ ಆಹಾರ ಧಾನ್ಯ ಪಡೆದ ಕುಟುಂಬಗಳಿಗೆ ಜುಲೈನಲ್ಲಿ ನಗದು ವರ್ಗಾವಣೆಗೆ ಪರಿಗಣಿಸಿಲಾಗಿತ್ತು.
3,37,652 ಪಡಿತರ ಚೀಟಿದಾರರಿಗೆ ನಗದು ಜಮಾ ಮಾಡಲಾಗಿದೆ. 1,14,000 ಪಡಿತರ ಚೀಟಿದಾರರಿಗೆ ಹಣ ಜಮಾ ಆಗಿಲ್ಲ ಈ ಪೈಕಿ 61 ಸಾವಿರ ಪಡಿತರ ಚೀಟಿದಾರರು ಬ್ಯಾಂಕ್ ಖಾತೆ ಹೊಂದಿಲ್ಲದವರು, ಬ್ಯಾಂಕ್ ಕೆವೈಸಿ ಮಾಡದ ಹಾಗೂ 3 ತಿಂಗಳ ಕಾಲ ನಿರಂತರವಾಗಿ ಪಡಿತರ ಧಾನ್ಯ ಪಡೆಯದ ಅನೇಕ ಪಡಿತರ ಚೀಟಿ ತಾತ್ಕಾಲಿಕ ಸ್ಥಗಿತವಾದ ಕಾರಣ ಹಣ ಜಮಾ ಆಗಿಲ್ಲ. ಅಲ್ಲದೇ ಇದರಲ್ಲಿ 3 ಸದಸ್ಯರಿಗಿಂತ ಕಡಿಮೆ ಇರುವ ಪಡಿತದಾರರಿಗೂ ಹಣ ಜಮಾ ಆಗುವುದಿಲ್ಲ ಎಂದು ಹೇಳಲಾಗಿದೆ.
ಈ ಮೊದಲಿನಂತೆಯೇ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಕೊಡಬೇಕು. ಯಾವುದೇ ಷರತ್ತುಗಳಿಲ್ಲದೇ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ ಮಾಡಬೇಕು ಎಂದು ಸಿಯಾತಲಾಬ್ ಬಡಾವಣೆಯ ನಿವಾಸಿ ತಸ್ಲೀಂ ಬಾನು ಮನವಿ ಮಾಡಿದ್ದಾರೆ.

ಷರತ್ತುಗಳೇ ಮುಳುವು
ಜಿಲ್ಲೆಯಲ್ಲಿ ಅನೇಕರು ಪ್ರಧಾನಮಂತ್ರಿ ಜನಧನ್ ಯೋಜನೆಯಡಿ ಉಚಿತ ಬ್ಯಾಂಕ್ ಖಾತೆ ತೆರೆದಿದ್ದರು. ಆದರೆ ಖಾತೆ ತೆರೆದ ನಂತರ ಯಾವುದೇ ವ್ಯವಹಾರ ನಡೆಸದ ಕಾರಣ ಆರ್ಬಿಐ ನಿಯಮ ಅನ್ವಯ ಎರಡು ವರ್ಷದ ಅವಧಿಯವರೆಗೆ ಬ್ಯಾಂಕ್ ವ್ಯವಹಾರ ನಡೆಸದಿದ್ದರೆ ಖಾತೆ ನಿಷ್ಕ್ರಿಯವಾಗಿದೆ ಎಂದು ಅನೇಕರಿಗೆ ತಿಳಿದಿಲ್ಲ. ಹೀಗಾಗಿ ಸಮಸ್ಯೆಯಾಗಿದೆ.
ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಕೆವೈಸಿ ಮಾಡದ ಕಾರಣ ಕೆಲವು ಖಾತೆಗಳು ನಿಷ್ಕ್ರಿಯವಾಗಿದೆ. ಕೆಲವರ ಆಧಾರ ಕಾರ್ಡ್ನಲ್ಲಿ ಮೊಬೈಲ್ ಸಂಖ್ಯೆ ಇಲ್ಲ, ನಮೂದಿಲ್ಲ, ಮೊಬೈಲ್ ಸಂಖ್ಯೆ ಬದಲು, ಇತರೆ ತಾಂತ್ರಿಕ ಸಮಸ್ಯೆಗಳಿಂದಲೂ ಆಧಾರ್ ಲಿಂಕ್ ಆಗದೇ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗಿಲ್ಲ ಎನ್ನುವುದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವಿವರಣೆ.
ಕೆಲವರು ದುಡಿಯಲು ಮಹಾನಗರಗಳಿಗೆ ಗುಳೆ ಹೋಗಿದ್ದಾರೆ. ಅವರು ಮೂರು ತಿಂಗಳ ಕಾಲ ಪಡಿತರ ಪಡೆಯದ ಕಾರಣ ತಾತ್ಕಾಲಿಕವಾಗಿ ರದ್ದಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭಿಗಳಿಗೆ ಹಣ ವರ್ಗಾವಣೆ ಮಾಡಲು ಎನ್ಐಸಿಯಿಂದ ನಮಗೆ ಸಿಕ್ಕ ಡಾಟಾ ಪ್ರಕಾರ ಹಣ ಜಮಾ ಮಾಡಲಾಗಿದೆ.
ಇಲಾಖೆಯ ನಿಯಮದ ಪ್ರಕಾರ ಕೇವಲ 1 ಸಾವಿರ ಪಡಿತರ ಚೀಟಿದಾರರಿಗೆ ಮಾತ್ರ ಹಣ ವರ್ಗಾವಣೆ ಬಾಕಿಯಿದೆ. ಉಳಿದ ಫಲಾನುಭವಿಗಳಿಗೂ ಶೀಘ್ರ ಹಣ ಜಮಾ ಮಾಡಲಾಗುವುದು ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications