ಆರ್ಟಿಪಿಎಸ್ ಹಾರುಬೂದಿ ಧೂಳು: ಹೆಚ್ಚುತ್ತಲೇ ಇದೆ ರಾಯಚೂರು ಜನರ ಗೋಳು
ರಾಯಚೂರು ಅಕ್ಟೋಬರ್ 10: ಆರ್ಟಿಪಿಎಸ್ ಹಾರುಬೂದಿ ಧೂಳಿನಿಂದ ಜನರು ತತ್ತರಿಸಿದ್ದಾರೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಣ್ಣಿಗೆ ಕಾಣುತ್ತಿಲ್ಲ. ಲಾರಿ, ಟಿಪ್ಪರ್ ಮತ್ತು ಟ್ಯಾಂಕರ್ ಮೂಲಕ ಆರ್ಟಿಪಿಎಸ್ನ ಬೂದಿಯನ್ನು ಒಯ್ಯುವಾಗ ಬೂದಿ ರಸ್ತೆಗಳಲ್ಲಿ ಬೀಳುತ್ತಿದೆ. ಭಾರಿ ವಾಹನಗಳ ಓಡಾಟದಿಂದ ಇನ್ನಷ್ಟು ದೂಳೆದ್ದು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಶಕ್ತಿನಗರದ ಒಂದನೇ ಮತ್ತು ಎರಡನೇ ಕ್ರಾಸ್ ರಸ್ತೆಗಳಲ್ಲಿ ಶೇಖರಣೆ ಆಗಿರುವುದು ಸಾಮಾನ್ಯ ಧೂಳಲ್ಲ. ಬೂದಿ ಮೆತ್ತಿಕೊಂಡು ರಸ್ತೆಗಳೆಲ್ಲ ಕೆಸರಾಗಿ ಸಣ್ಣ ಕಸಕಡ್ಡಿಗಳು ಸಹ ಅದರಲ್ಲಿ ಕೊಳೆತು ಬೆರತು ಹೋಗಿದೆ. ಇದೀಗ ಅದೇ ಕಸ ಒಣಗಿದ್ದು ಮೇಣದಂತಾಗಿದೆ. ಭಾರಿ ವಾಹನಗಳು ಸಂಚರಿಸುತ್ತಲೇ ಗಟ್ಟಿಯಾದ ಬೂದಿ ಛಿದ್ರಗೊಂಡು ಮೇಲೆತ್ತರಕ್ಕೆ ಹಾರುತ್ತಿದೆ.

ದಿನವಿಡೀ ಓಡಾಡುವ ಬೂದಿ ತುಂಬಿದ ವಾಹನಗಳಿಂದ ರಸ್ತೆಯ ಮೇಲೆ ಬೂದಿ ಬೀಳುತ್ತಲೇ ಇದೆ. ಬೂದಿ ತುಂಬಿದ ವಾಹನಗಳ ಮೇಲೆ ಭದ್ರವಾದ ಚೀಲ ಹಾಕಿ ಕಟ್ಟಬೇಕು. ಬೂದಿ ಹಾರಿ ಹೋಗದಂತೆ ಎಚ್ಚರ ವಹಿಸಿ ಬೇರೆ ಕಡೆಗೆ ಸಾಗಬೇಕು. ಆದರೆ, ಇಲ್ಲಿ ಯಾವುದೂ ನಡೆಯುತ್ತಿಲ್ಲ.
ವಾಹನಗಳು ಸಾಲು ಸಾಲಾಗಿ ಸಂಚರಿಸಿಗಾಗ ಧೂಳು ದಟ್ಟ ಅಲೆಯಾಗಿ ಮೇಲೆದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಚದುರುತ್ತಿದೆ. ರಸ್ತೆ ಸಂಪೂರ್ಣ ದೂಳಾಗಿದೆ. ಧೂಳಿನಲ್ಲಿ ರಸ್ತೆ ಹುಡುಕವಂಥ ಸ್ಥಿತಿ ನಿರ್ಮಾಣವಾಗಿದೆ.
ವಾಹನ ಸವಾರರು, ಆರ್ಟಿಪಿಎಸ್ ಸುತ್ತಮುತ್ತ ಇರುವ ಗ್ರಾಮಗಳ ಜನರು ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಿಂದ ರೈಸ್ ಮಿಲ್, ಎಪಿಎಂಸಿ ಹಾಗೂ ಕಚೇರಿ ಕೆಲಸಕ್ಕೆ ಬರುವ ಜನ ನಿತ್ಯ ಕಿರಿಕಿರಿ ಅನುಭವಿಸಬೇಕಾಗಿದೆ. ಧೂಳು ವಾಹನ ಸವಾರರ ಕಣ್ಣು, ಮೂಗು, ಕಿವಿಯೊಳಗೆ ಸೇರುತ್ತಿದೆ. ಗಂಟಲಿಗೆ ಇಳಿದು ಶ್ವಾಸಕೋಶಕ್ಕೂ ಹಾನಿ ಉಂಟು ಮಾಡುತ್ತಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಇದೆಲ್ಲ ಗೊತ್ತಿದ್ದರೂ ಲಾರಿ ಮಾಲೀಕರಿಗೆ ಮಾಮೂಲು ಪಡೆದು ಮೌನಕ್ಕೆ ಶರಣಾಗಿದ್ದಾರೆ ಎನ್ನುವ ಆರೋಪ ಇದೆ. ರಸ್ತೆ ಸುರಕ್ಷತಾ ಸಮಿತಿ ಸಭೆಗಳು ನಡೆಯುತ್ತಲೇ ಇಲ್ಲ. ಸಭೆಯ ದಿನಾಂಕ ನಿಗದಿಪಡಿಸಿ ಅಧಿಕಾರಿಗಳ ಸಹಿ ಮಾಡಿ ಸಭೆ ನಡೆಸಿರುವ ದಾಖಲೆ ಇಟ್ಟುಕೊಂಡಿದ್ದಾರೆ.
ಸಭೆ ಇರುವುದನ್ನು ಸಂಘ ಸಂಸ್ಥೆಗಳು ಹಾಗೂ ಮಾಧ್ಯಮಗಳಿಗೂ ಗೊತ್ತು ಮಾಡುವುದಿಲ್ಲ. ಇದರಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಂಡಿವೆ. ಸರ್ಕಾರ ಜನರ ಹಿತಕ್ಕಾಗಿ ರೂಪಿಸಿದ ಯೋಜನೆಗಳು ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಬರುತ್ತಿಲ್ಲ ಎಂದು ಶಕ್ತಿನಗರದ ಕಾರ್ಮಿಕರು ಹಾಗೂ ರೈತರು ಬಹಿರಂಗವಾಗಿಯೇ ಆಡಿಕೊಳ್ಳುತ್ತಿದ್ದಾರೆ.
ಧೂಳಿನಿಂದಾಗಿ ಅನೇಕ ಜನರು ಅಸ್ತಮಾ, ಕಾಮಲೆ, ಕಣ್ಣಿನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗಂಟಲು ಕೆರೆತದಂತಹ ಸಮಸ್ಯೆ ಹಲವರಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಧೂಳಿನಿಂದಾಗಿ ರಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ಹೋಗುವವರ ಸಂಖ್ಯೆಯೂ ಹೆಚ್ಚಾಗಿದೆ.

'ಅಪಾರ ಧೂಳಿನಿಂದಾಗಿ ಎದುರಿಗೆ ಬರುವ ವಾಹನಗಳು ಕಾಣುತ್ತಿಲ್ಲ. ಅಪಘಾತಗಳೂ ಸಂಭವಿಸುತ್ತಿವೆ. ಅಸುರಕ್ಷಿತವಾಗಿ ಲಾರಿಗಳನ್ನು ಹಾರೂಬೂದಿ ಸಾಗಿಸುವ ಚಾಲಕರು ಹಾಗೂ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುರಕ್ಷತೆ ಮರೆತ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಜರುಗಿಸಬೇಕು' ಎಂದು ಶಕ್ತಿನಗರ ಶೇಖರ ಶರ್ಮಾ ಒತ್ತಾಯಿಸಿದ್ದಾರೆ.
'ಹಾರೂಬೂದಿಯ ಧೂಳುನಿಂದ ಶಕ್ತಿನಗರದ ಎರಡನೇ ಕ್ರಾಸ್ ರಸ್ತೆಯ ಪಕ್ಕದಲ್ಲಿ ವ್ಯಾಪಾರ ಮಾಡುವ ವ್ಯಾಪರಸ್ಥರಿಗೆ ತೊಂದರೆಯಾಗುತ್ತಿದೆ. ಧೂಳಿನಿಂದಾಗಿ ವ್ಯಾಪಾರ ಮಾಡಲು ಆಗುತ್ತಿಲ್ಲ. ಇಲ್ಲಿನ ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದ್ದ ಜಿಲ್ಲಾಡಳಿತ ನಿಯಮ ಉಲ್ಲಂಘಿಸುವ ಲಾರಿ ಮಾಲೀಕರ ಪರ ನಿಂತಿರುವುದು ಬೇಸರ ಉಂಟು ಮಾಡಿದೆ' ಎಂದು ವ್ಯಾಪಾರಿ ಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ಧೂಳು ವಾಹನ ಸವಾರರ ಕಣ್ಣು, ಮೂಗು, ಕಿವಿಯೊಳಗೆ ಸೇರುತ್ತಿದೆ. ಹಲವು ಮಾರಕ ರೋಗಕ್ಕೂ ಕಾರಣವಾಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಪರಿಸರ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಟ್ಟಿದೆ. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಇಲ್ಲಿ ಅನಿರೀಕ್ಷಿತ ಭೇಟಿಕೊಟ್ಟು ಸಮಸ್ಯೆ ನಿವಾರಿಸಬೇಕು. ಜನರು ಅನುಭವಿಸುತ್ತಿರುವ ನರಕಯಾತನೆ ತಪ್ಪಿಸಬೇಕು' ಎಂದು ಮೆಡಿಕಲ್ ಶಾಪ್ ಮಾಲೀಕ ವೀರೇಶ್ ಮನವಿ ಮಾಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications