ಆರ್ಟಿಪಿಎಸ್ ಹಾರುಬೂದಿ ಧೂಳು: ಹೆಚ್ಚುತ್ತಲೇ ಇದೆ ರಾಯಚೂರು ಜನರ ಗೋಳು
ರಾಯಚೂರು ಅಕ್ಟೋಬರ್ 10: ಆರ್ಟಿಪಿಎಸ್ ಹಾರುಬೂದಿ ಧೂಳಿನಿಂದ ಜನರು ತತ್ತರಿಸಿದ್ದಾರೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಣ್ಣಿಗೆ ಕಾಣುತ್ತಿಲ್ಲ. ಲಾರಿ, ಟಿಪ್ಪರ್ ಮತ್ತು ಟ್ಯಾಂಕರ್ ಮೂಲಕ ಆರ್ಟಿಪಿಎಸ್ನ ಬೂದಿಯನ್ನು ಒಯ್ಯುವಾಗ ಬೂದಿ ರಸ್ತೆಗಳಲ್ಲಿ ಬೀಳುತ್ತಿದೆ. ಭಾರಿ ವಾಹನಗಳ ಓಡಾಟದಿಂದ ಇನ್ನಷ್ಟು ದೂಳೆದ್ದು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ಶಕ್ತಿನಗರದ ಒಂದನೇ ಮತ್ತು ಎರಡನೇ ಕ್ರಾಸ್ ರಸ್ತೆಗಳಲ್ಲಿ ಶೇಖರಣೆ ಆಗಿರುವುದು ಸಾಮಾನ್ಯ ಧೂಳಲ್ಲ. ಬೂದಿ ಮೆತ್ತಿಕೊಂಡು ರಸ್ತೆಗಳೆಲ್ಲ ಕೆಸರಾಗಿ ಸಣ್ಣ ಕಸಕಡ್ಡಿಗಳು ಸಹ ಅದರಲ್ಲಿ ಕೊಳೆತು ಬೆರತು ಹೋಗಿದೆ. ಇದೀಗ ಅದೇ ಕಸ ಒಣಗಿದ್ದು ಮೇಣದಂತಾಗಿದೆ. ಭಾರಿ ವಾಹನಗಳು ಸಂಚರಿಸುತ್ತಲೇ ಗಟ್ಟಿಯಾದ ಬೂದಿ ಛಿದ್ರಗೊಂಡು ಮೇಲೆತ್ತರಕ್ಕೆ ಹಾರುತ್ತಿದೆ.

ದಿನವಿಡೀ ಓಡಾಡುವ ಬೂದಿ ತುಂಬಿದ ವಾಹನಗಳಿಂದ ರಸ್ತೆಯ ಮೇಲೆ ಬೂದಿ ಬೀಳುತ್ತಲೇ ಇದೆ. ಬೂದಿ ತುಂಬಿದ ವಾಹನಗಳ ಮೇಲೆ ಭದ್ರವಾದ ಚೀಲ ಹಾಕಿ ಕಟ್ಟಬೇಕು. ಬೂದಿ ಹಾರಿ ಹೋಗದಂತೆ ಎಚ್ಚರ ವಹಿಸಿ ಬೇರೆ ಕಡೆಗೆ ಸಾಗಬೇಕು. ಆದರೆ, ಇಲ್ಲಿ ಯಾವುದೂ ನಡೆಯುತ್ತಿಲ್ಲ.
ವಾಹನಗಳು ಸಾಲು ಸಾಲಾಗಿ ಸಂಚರಿಸಿಗಾಗ ಧೂಳು ದಟ್ಟ ಅಲೆಯಾಗಿ ಮೇಲೆದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಚದುರುತ್ತಿದೆ. ರಸ್ತೆ ಸಂಪೂರ್ಣ ದೂಳಾಗಿದೆ. ಧೂಳಿನಲ್ಲಿ ರಸ್ತೆ ಹುಡುಕವಂಥ ಸ್ಥಿತಿ ನಿರ್ಮಾಣವಾಗಿದೆ.
ವಾಹನ ಸವಾರರು, ಆರ್ಟಿಪಿಎಸ್ ಸುತ್ತಮುತ್ತ ಇರುವ ಗ್ರಾಮಗಳ ಜನರು ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಿಂದ ರೈಸ್ ಮಿಲ್, ಎಪಿಎಂಸಿ ಹಾಗೂ ಕಚೇರಿ ಕೆಲಸಕ್ಕೆ ಬರುವ ಜನ ನಿತ್ಯ ಕಿರಿಕಿರಿ ಅನುಭವಿಸಬೇಕಾಗಿದೆ. ಧೂಳು ವಾಹನ ಸವಾರರ ಕಣ್ಣು, ಮೂಗು, ಕಿವಿಯೊಳಗೆ ಸೇರುತ್ತಿದೆ. ಗಂಟಲಿಗೆ ಇಳಿದು ಶ್ವಾಸಕೋಶಕ್ಕೂ ಹಾನಿ ಉಂಟು ಮಾಡುತ್ತಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಇದೆಲ್ಲ ಗೊತ್ತಿದ್ದರೂ ಲಾರಿ ಮಾಲೀಕರಿಗೆ ಮಾಮೂಲು ಪಡೆದು ಮೌನಕ್ಕೆ ಶರಣಾಗಿದ್ದಾರೆ ಎನ್ನುವ ಆರೋಪ ಇದೆ. ರಸ್ತೆ ಸುರಕ್ಷತಾ ಸಮಿತಿ ಸಭೆಗಳು ನಡೆಯುತ್ತಲೇ ಇಲ್ಲ. ಸಭೆಯ ದಿನಾಂಕ ನಿಗದಿಪಡಿಸಿ ಅಧಿಕಾರಿಗಳ ಸಹಿ ಮಾಡಿ ಸಭೆ ನಡೆಸಿರುವ ದಾಖಲೆ ಇಟ್ಟುಕೊಂಡಿದ್ದಾರೆ.
ಸಭೆ ಇರುವುದನ್ನು ಸಂಘ ಸಂಸ್ಥೆಗಳು ಹಾಗೂ ಮಾಧ್ಯಮಗಳಿಗೂ ಗೊತ್ತು ಮಾಡುವುದಿಲ್ಲ. ಇದರಿಂದ ಸಮಸ್ಯೆಗಳು ಮತ್ತಷ್ಟು ಉಲ್ಬಣಗೊಂಡಿವೆ. ಸರ್ಕಾರ ಜನರ ಹಿತಕ್ಕಾಗಿ ರೂಪಿಸಿದ ಯೋಜನೆಗಳು ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಬರುತ್ತಿಲ್ಲ ಎಂದು ಶಕ್ತಿನಗರದ ಕಾರ್ಮಿಕರು ಹಾಗೂ ರೈತರು ಬಹಿರಂಗವಾಗಿಯೇ ಆಡಿಕೊಳ್ಳುತ್ತಿದ್ದಾರೆ.
ಧೂಳಿನಿಂದಾಗಿ ಅನೇಕ ಜನರು ಅಸ್ತಮಾ, ಕಾಮಲೆ, ಕಣ್ಣಿನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಗಂಟಲು ಕೆರೆತದಂತಹ ಸಮಸ್ಯೆ ಹಲವರಲ್ಲಿ ಕಾಣಿಸಿಕೊಳ್ಳುತ್ತಲೇ ಇದೆ. ಧೂಳಿನಿಂದಾಗಿ ರಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ಹೋಗುವವರ ಸಂಖ್ಯೆಯೂ ಹೆಚ್ಚಾಗಿದೆ.

'ಅಪಾರ ಧೂಳಿನಿಂದಾಗಿ ಎದುರಿಗೆ ಬರುವ ವಾಹನಗಳು ಕಾಣುತ್ತಿಲ್ಲ. ಅಪಘಾತಗಳೂ ಸಂಭವಿಸುತ್ತಿವೆ. ಅಸುರಕ್ಷಿತವಾಗಿ ಲಾರಿಗಳನ್ನು ಹಾರೂಬೂದಿ ಸಾಗಿಸುವ ಚಾಲಕರು ಹಾಗೂ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುರಕ್ಷತೆ ಮರೆತ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಶಿಸ್ತು ಕ್ರಮ ಜರುಗಿಸಬೇಕು' ಎಂದು ಶಕ್ತಿನಗರ ಶೇಖರ ಶರ್ಮಾ ಒತ್ತಾಯಿಸಿದ್ದಾರೆ.
'ಹಾರೂಬೂದಿಯ ಧೂಳುನಿಂದ ಶಕ್ತಿನಗರದ ಎರಡನೇ ಕ್ರಾಸ್ ರಸ್ತೆಯ ಪಕ್ಕದಲ್ಲಿ ವ್ಯಾಪಾರ ಮಾಡುವ ವ್ಯಾಪರಸ್ಥರಿಗೆ ತೊಂದರೆಯಾಗುತ್ತಿದೆ. ಧೂಳಿನಿಂದಾಗಿ ವ್ಯಾಪಾರ ಮಾಡಲು ಆಗುತ್ತಿಲ್ಲ. ಇಲ್ಲಿನ ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದ್ದ ಜಿಲ್ಲಾಡಳಿತ ನಿಯಮ ಉಲ್ಲಂಘಿಸುವ ಲಾರಿ ಮಾಲೀಕರ ಪರ ನಿಂತಿರುವುದು ಬೇಸರ ಉಂಟು ಮಾಡಿದೆ' ಎಂದು ವ್ಯಾಪಾರಿ ಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ಧೂಳು ವಾಹನ ಸವಾರರ ಕಣ್ಣು, ಮೂಗು, ಕಿವಿಯೊಳಗೆ ಸೇರುತ್ತಿದೆ. ಹಲವು ಮಾರಕ ರೋಗಕ್ಕೂ ಕಾರಣವಾಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಪರಿಸರ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ಹಲವು ಸಮಸ್ಯೆಗಳಿಗೆ ದಾರಿ ಮಾಡಿಕೊಟ್ಟಿದೆ. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಇಲ್ಲಿ ಅನಿರೀಕ್ಷಿತ ಭೇಟಿಕೊಟ್ಟು ಸಮಸ್ಯೆ ನಿವಾರಿಸಬೇಕು. ಜನರು ಅನುಭವಿಸುತ್ತಿರುವ ನರಕಯಾತನೆ ತಪ್ಪಿಸಬೇಕು' ಎಂದು ಮೆಡಿಕಲ್ ಶಾಪ್ ಮಾಲೀಕ ವೀರೇಶ್ ಮನವಿ ಮಾಡಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications