PM Modi Helicopter: ಕೆಸರು ಗದ್ದೆಯಲ್ಲಿ ಸಿಲುಕಿದ ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಹೆಲಿಕಾಪ್ಟರ್; ಮೇಲೆತ್ತಲು ಹರಸಾಹಸ
ರಾಯಚೂರು, ಮೇ 2: ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಹೆಲಿಕಾಪ್ಟರ್ ಕೆಸರು ಗದ್ದೆಯಲ್ಲಿ ಸಿಲುಕಿದ್ದು, ಮೇಲೆತ್ತಲು ಹರಸಾಹಸ ಪಡಬೇಕಾಯಿತು. ಭದ್ರತಾ ಸಿಬ್ಬಂದಿ ಮಾಡಿದ ಎಡವಟ್ಟಿನಿಂದಾಗಿ ಬೆಂಗಾವಲು ಹೆಲಿಕಾಪ್ಟರ್ ಸಿಲುಕಬೇಕಾಯಿತು.
ಸಿಂಧನೂರಿನ ಹೊಸಳ್ಳಿ ಕ್ಯಾಂಪನ್ ಹೆಲಿಪ್ಯಾಡ್ನಲ್ಲಿ ಸಿಲುಕಿರುವ ಹೆಲಿಕಾಪ್ಟರ್ ಮೇಲೆತ್ತಲು 100ಕ್ಕೂ ಹೆಚ್ಚು ಜನರು ಮತ್ತು ಜೆಸಿಬಿಯಿಂದ ಪ್ರಯತ್ನಪಡುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹೆಲಿಪ್ಯಾಡ್ ಅನ್ನು ಭತ್ತದ ಗದ್ದೆಯಲ್ಲಿ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಹೆಲಿಕಾಪ್ಟರ್ ಅನ್ನು ಲ್ಯಾಂಡಿಂಗ್ ಮಾಡಲಾಗಿತ್ತು. ನೆಲದ ಕೆಳಗೆ ಇನ್ನು ಹಸಿಯಾಗಿರುವುದು ಮತ್ತು ಹೆಚ್ಚಿನ ಭಾರದ ಕಾರಣದಿಂದ ಹೆಲಿಕಾಪ್ಟರ್ ನೆಲದೊಳಗೆ ಕುಸಿದಿದೆ.
ನರೇಂದ್ರ ಮೋದಿ ಅವರು ಸಿಂಧನೂರಿನ ಸಮಾವೇಶ ಮುಗಿಸಿ ಕಲಬುರಗಿಗೆ ತೆರಳಬೇಕಿತ್ತು. ಆಗ ಬೆಂಗಾವಲು ಹೆಲಿಕಾಪ್ಟರ್ ಟೇಕ್ ಆಫ್ ಆಗದೆ ಕೆಸರು ಗದ್ದೆಯಲ್ಲಿ ಮತ್ತು ಸಿಲುಕಿತು. ಆಗ ಆ ಹೆಲಿಕಾಪ್ಟರ್ ಅಲ್ಲೇ ಬಿಟ್ಟು ನರೇಂದ್ರ ಮೋದಿ ಇನ್ನೊಂದು ಬೆಂಗಾವಲು ಹೆಲಿಕಾಪ್ಟರ್ ಜೊತೆಗೆ ಕಲಬುರಗಿಗೆ ತೆರಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಲ್ಲಿ ಬಿಜೆಪಿ ಪರ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಮೋದಿ ಮೇನಿಯಾ ಸೃಷ್ಟಿಯಾಗಿದ್ದು, ಮತದಾರರನ್ನು ಬಿಜೆಪಿಯತ್ತ ಸೆಳೆಯುತ್ತಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications