Love Kesari : ರಾಯಚೂರು ಶ್ರೀರಾಮ ಸೇನೆ ಕಾರ್ಯಕರ್ತ ರಾಜಾಚಂದ್ರ ವಿರುದ್ಧ ಎಫ್ಐಆರ್
ರಾಯಚೂರು, ಏಪ್ರಿಲ್ 12: ಲವ್ ಜಿಹಾದ್ ಮತ್ತು ಲವ್ ಕೇಸರಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ರಾಜಾಚಂದ್ರ ರಾಮನಗೌಡ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಯಚೂರಿನ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ಮಂಜುನಾಥ್ ವಿರುದ್ಧವೂ ಕೇಸ್ ದಾಖಲಿಸಿಕೊಳ್ಳಲಾಗಿದೆ.
ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ರಾಜಾಚಂದ್ರ ರಾಮನಗೌಡ ಮತ್ತು ಮಂಜುನಾಥ್ ವಿರುದ್ಧ ಐಪಿಸಿ ಸೆಕ್ಷನ್ 153ರ ಗಲಭೆ ಸೃಷ್ಟಿಗೆ ಪ್ರಚೋದನೆ ನೀಡುವುದು, 153ಎ ಅಡಿ ಎರಡು ಕೋಮುಗಳ ನಡುವೆ ವೈರತ್ವ ಸೃಷ್ಟಿಸುವುದು, 295 ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಏಪ್ರಿಲ್ 10ರಂದು ರಾಯಚೂರಿನಲ್ಲಿ ಆಯೋಜಿಸಿದ್ದ ಶ್ರೀರಾಮ ನವಮಿ ಕಾರ್ಯಕ್ರಮದಲ್ಲಿ ಅನ್ಯಧರ್ಮದ ಕುರಿತು ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ರಾಜಾಚಂದ್ರ ರಾಮನಗೌಡ ವಿರುದ್ಧ ಆರೋಪಿಸಲಾಗಿದೆ.

ಮುಸ್ಲಿಂ ಯುವತಿಯರನ್ನು ಮದುವೆಯಾಗಲು ಕರೆ:
ಮುಸ್ಲಿಂ ಯುವಕರು ನಮ್ಮ ಹಿಂದೂ ಯುವತಿಯನ್ನು ಮದುವೆಯಾಗುತ್ತಾರೆ. ಅದೇ ರೀತಿ ನಮ್ಮ ಹಿಂದೂ ಹುಡುಗರು ಮುಸ್ಲಿಂ ಯುವತಿಯರನ್ನು ಮದುವೆಯಾಗಿ ಪ್ರತೀಕಾರ ತೀರಿಸಿಕೊಳ್ಳಬೇಕು ಎಂಬ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಲವ್ ಕೇಸರಿ ಬಗ್ಗೆ ಖಾಕಿ ಹದ್ದಿನ ಕಣ್ಣು:
ಲವ್ ಜಿಹಾದ್ ಪ್ರತೀಕಾರವಾಗಿ ಲವ್ ಕೇಸರಿ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತ ರಾಜಾಚಂದ್ರ ರಾಮನಗೌಡ ನೀಡಿರುವ ಹೇಳಿಕೆ ಬೆನ್ನಲ್ಲೇ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಸಮುದಾಯದ ಮುಖಂಡರ ಹೇಳಿಕೆ ಬಗ್ಗೆ ಖಾಕಿ ಪಡೆ ನಿಗಾ ವಹಿಸಿದೆ. ಲವ್ ಕೇಸರಿ ಹೇಳಿಕೆ ಬಗ್ಗೆ ಕೇಸರಿ ಪಡೆಯು ಮೌನಕ್ಕೆ ಶರಣಾಗಿದೆ. ಇನ್ನು, ಲವ್ ಕೇಸರಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡುವುದಕ್ಕೆ ಮುಸ್ಲಿಂ ಮುಖಂಡರು ನಿರಾಕರಿಸಿದ್ದಾರೆ.
ಒಂದು ಕಡೆ ಸತ್ಕಾರ, ಇನ್ನೊಂದೆಡೆ ಧಿಕ್ಕಾರ:
ಕಳೆದ ಏಪ್ರಿಲ್ 10ರಂದು ರಾಯಚೂರಿನಲ್ಲಿ ಎರಡು ರೀತಿಯ ಬೆಳವಣಿಗೆಗಳು ನಡೆದವು. ಒಂದು ಕಡೆಯಲ್ಲಿ ಲವ್ ಜಿಹಾದ್ ಬದಲಿಗೆ ಲವ್ ಕೇಸರಿ ಕ್ಯಾಂಪೇನ್ ನಡೆಸುವಂತೆ ಕರೆ ನೀಡಲಾಗಿತ್ತು. ಅದೇ ರೀತಿ ಇನ್ನೊಂದು ಕಡೆಯಲ್ಲಿ ಹಿಂದೂ-ಮುಸ್ಲಿಂ ಯುವಕರು ಭಾವೈಕ್ಯತೆ ಮೆರೆದಿದ್ದರು. ಶ್ರೀರಾಮ ನವಮಿ ಯಾತ್ರಿಕರಿಗೆ ಮುಸ್ಲಿಂ ಯುವಕರು ಸತ್ಕಾರ ಮಾಡಿದರು. ಅದರಂತೆ ರಂಜಾನ್ ಉಪವಾಸವನ್ನು ಬಿಡುವ ವೇಳೆಯಲ್ಲಿ ಹಿಂದೂ ಯುವಕರು ಮುಸ್ಲಿಂ ಬಾಂಧವರಿಗೆ ಸತ್ಕಾರ ಮಾಡಿದರು.
Recommended Video
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications