ಸರ್ಕಾರಿ ಶಿಕ್ಷಕಿ ಕೆಲಸ ಪಡೆದ ರಾಯಚೂರಿನ ಪೂಜಾ ಮಂಗಳಮುಖಿಯರಿಗೆ ಮಾದರಿ
ರಾಯಚೂರು, ನವೆಂಬರ್ 24: ಸಮಾಜದಲ್ಲಿ ತೃತೀಯ ಲಿಂಗಿಗಳನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಸರ್ಕಾರವು ಹೆಚ್ಚಿನ ಸೌಲಭ್ಯ ಕಲ್ಪಿಸುವ ಮೂಲಕ ತೃತೀಯ ಲಿಂಗಿಗಳನ್ನು ಮುಖ್ಯವಾಹಿನಿಗೆ ತರಬೇಕು. ಸರ್ಕಾರಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ತಾಲ್ಲೂಕಿನ ನೀರಮಾನ್ವಿ ಗ್ರಾಮದ ತೃತೀಯ ಲಿಂಗಿ ಆಶ್ವತ್ಥಾಮ (ಪೂಜಾ) ಅವರ ಅಭಿಪ್ರಾಯವಿದು.
ರಾಜ್ಯ ಸರ್ಕಾರ ಈಚೆಗೆ ಪ್ರಕಟಿಸಿದ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಯ ಆಯ್ಕೆ ಪಟ್ಟಿಯಲ್ಲಿ ತೃತೀಯ ಲಿಂಗಿಗಳಿಗೆ ಶೇ 1ರಷ್ಟು ಮೀಸಲಾತಿ ಕಲ್ಪಿಸಿದ್ದು, ನೀರಮಾನ್ವಿ ಗ್ರಾಮದ ಆಶ್ವತ್ಥಾಮ (ಪೂಜಾ) ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದಾರೆ.
ನೀರಮಾನ್ವಿ ಗ್ರಾಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಮಾನ್ವಿ ಪಟ್ಟಣದ ಸರ್ಕಾರಿ ಪಿಯು ಕಾಲೇಜು ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ, ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. ರಾಯಚೂರಿನ ನವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ, ಸಿಂಧನೂರಿನ ಸ್ನಾತಕೋತ್ತರ ಕೇಂದ್ರದಲ್ಲಿ ಎಂ.ಎ ಇತಿಹಾಸ ವ್ಯಾಸಂಗ ಪೂರ್ಣಗೊಳಿಸಿದ್ದಾರೆ.

ದೈಹಿಕವಾಗಿ ಗಂಡಾಗಿದ್ದರೂ ವರ್ತನೆಗಳು ಹೆಣ್ಣುಮಕ್ಕಳಂತೆ ಇದ್ದ ಕಾರಣ ಬಾಲ್ಯದಿಂದಲೇ ಸಹಪಾಠಿಗಳು ಹಾಗೂ ಸುತ್ತಮುತ್ತಲಿನ ಜನರ ಚುಚ್ಚು ಮಾತುಗಳಿಂದ ತೀವ್ರ ನೋವು ಅನುಭವಿಸಿದ್ದರಂತೆ. ಕೊನೆಗೆ ಬೆಂಗಳೂರಿಗೆ ತೆರಳಿ ಲಿಂಗ ಪರಿವರ್ತನೆ ಮಾಡಿಸಿಕೊಂಡ ನಂತರ ಸುಮಾರು ಆರು ವರ್ಷಗಳ ಕಾಲ ಇತರ ಮಂಗಳಮುಖಿಯರ ಜತೆ ಭಿಕ್ಷಾಟನೆ ಮಾಡಿ ಜೀವನ ಸಾಗಿಸಿದ್ದಾಗಿ ಪೂಜಾ ನೆನಪಿಸಿಕೊಂಡರು.
ಮಾರ್ಗದರ್ಶನ ನೀಡುವೆ
'ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಶೇ1ರಷ್ಟು ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರ ಸರ್ಕಾರಿ ಉದ್ಯೋಗ ಪಡೆಯಬೇಕೆನ್ನುವ ಛಲ ಮೂಡಿತು. ಕಾರಣ ಕಳೆದ ಮೇ ತಿಂಗಳಲ್ಲಿ ಶಿಕ್ಷಕರ ಹುದ್ದೆಗೆ ಪರೀಕ್ಷೆ ಬರೆದು ಆಯ್ಕೆಯಾಗಿದ್ದೇನೆ. ನನ್ನಂತೆ ಉತ್ತಮ ಶಿಕ್ಷಣ ಪಡೆದಿರುವ ಇತರ ಮಂಗಳಮುಖಿಯರಿಗೆ ಸರ್ಕಾರಿ ಹುದ್ದೆಗಳನ್ನು ಪಡೆಯಲು ಮಾರ್ಗದರ್ಶನ ನೀಡುವೆ' ಎಂದು ಅಶ್ವತ್ಥಾಮ ಹೇಳಿದರು.
ಸರ್ಕಾರಿ ಶಾಲಾ ಶಿಕ್ಷಕನಾಗಬೇಕೆನ್ನುವ ಅಶ್ವತ್ಥಾಮನ ಗುರಿ ಈಡೇರಿರುವುದು ಖುಷಿ ತಂದಿದೆ. ಈ ಸಾಧನೆಗೆ ಅವನ ಕಠಿಣ ಪರಿಶ್ರಮವೇ ಕಾರಣ ಎಂದು ಪೂಜಾಳಾಗಿ ಬದಲಾಗಿರುವ ಅಶ್ವತ್ಥಾಮನ ಯಲ್ಲಮ್ಮ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications