ರಾಯಚೂರಿನಲ್ಲಿ ವಸತಿ ಯೋಜನೆಗೆ ಬಿಡದ ಗ್ರಹಣ: ನನಸಾಗದ ಬಡವರ ಮನೆ ಕನಸು
ರಾಯಚೂರು, ಅಕ್ಟೋಬರ್ 04: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅನುಷ್ಠಾನಕ್ಕೆ ಅನುದಾನ ಬಿಡುಗಡೆಯಾಗದ್ದರಿಂದ ಕಳೆದ ಮೂರು-ನಾಲ್ಕು ವರ್ಷಗಳಿಂದ ಬಡವರು ಮನೆ ಹೊಂದುವ ಕನಸು ಕನಸಾಗಿಯೇ ಉಳಿದಿದೆ.
ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾಸಿಸುವ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಆರಂಭಿಸಲಾಗಿದೆ. 2019ರ ನಂತರ ಯೋಜನೆಗೆ ಕೋವಿಡ್ ನೆಪವೊಡ್ಡಿ 2 ವರ್ಷ ಆರ್ಥಿಕ ಸಂಕಷ್ಟ ಎದುರಾಯಿತು.

ಯೋಜನೆಯಡಿ ನಗರ ಮತ್ತು ಸ್ಥಳೀಯ 12 ಸಂಸ್ಥೆಗಳ ವ್ಯಾಪ್ತಿ ಯ ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ 2015 ರಿಂದ 2022 ರ ಅಂತ್ಯದವರೆಗೆ 9,858 ಮನೆಗಳನ್ನು ನಿರ್ಮಿಸುವ ಗುರಿ ಹೊಂದಿ ಮನೆಗಳ ನಿರ್ಮಾಣಕ್ಕೆ ಅನಮೋದನೆ ನೀಡಲಾಗಿತ್ತು .ಆ ಪೈಕಿ 9,421 ಮನೆಗಳನ್ನು ಜಿಯೋ ಟ್ಯಾಗ್ನಲ್ಲೂ ಗುರುತಿಸಲಾಗಿತ್ತು.
ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)ಗೆ 2016 ಜೂನ್ನಿಂದ 2021 ಅಂತ್ಯದವರೆಗೆ ಕೇಂದ್ರ ಸರಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ.ಬುನಾದಿ ಹಂತ ಸೇರಿ ವಿವಿಧ ಹಂತದಲ್ಲಿರುವ ಮನೆಗಳ ಫಲಾನುಭವಿಗಳು ಅತಂತ್ರ ಸ್ಥಿತಿಗೆ ಸಿಲುಕುವಂತಾಗಿದೆ.
ಇನ್ನೂ ನಿರ್ಮಾಣ ಭಾಗ್ಯ ಕಾಣದ 867 ಫಲಾನುಭವಿಗಳ ಮನೆಗಳ ನಿರ್ಮಾಣದ ಭವಿಷ್ಯ ಅತಂತ್ರವಾಗಿದೆ. ಅನ್ಯ ವಸತಿ ಯೋಜನೆಗಳಡಿ ಫಲಾನುಭವಿಗಳಾಗಲೂ ಕೂಡ ತೊಂದರೆಯಾಗಿದೆ. ಹಳೆಯ ವಸತಿ ಯೋಜನೆಯಡಿ ಮನೆಯೂ ನಿರ್ಮಾಣಗೊಳ್ಳದೇ ಫಲಾನುಭವಿಗಳು ಈಗಲೂ ಹರಕು ಮುರುಕು ಗುಡಿಸಲು ,ತಾತ್ಕಾಲಿಕ ಟೆಂಟ್ಗಳಲ್ಲಿ ಬದುಕು ನಡೆಸುವಂತಾಗಿದೆ.
ಫಲಾನುಭವಿಗಳ ಆಯ್ಕೆ , ಅಗತ್ಯ ಮಾಹಿತಿ ಕಲೆ ಹಾಕುವುದು ಜಿಯೋ ಟ್ಯಾಗ್ ಸೇರಿ ನಾನಾ ಪ್ರಕ್ರಿಯೆಗಳ ಹಂತದಲ್ಲೇ ಕಾಲಹರಣ ಮಾಡಿದ್ದು, ಮನೆಗಳ ನಿರ್ಮಾಣಕ್ಕೆ ಚಾಲನೆ ತಡವಾಗಿದೆ. ಇದುವರೆಗೆ 4,798 ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು 1,415 ಮನೆಗಳ ನಿರ್ಮಾಣ ಆರಂಭಗೊಂಡಿಲ್ಲ. 867 ಮನೆಗಳು ಬುನಾದಿ ಹಂತದಲ್ಲಿಯೇ ಉಳಿದಿವೆ. 966 ಮನೆಗಳು ಚಾವಣಿಯ ಹಂತದಲ್ಲಿದ್ದು 839 ಮನೆಗಳು ಗೋಡೆಯ ಹಂತದಲ್ಲಿವೆ.
ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಹಂತ ಹಂತವಾಗಿ ಬಿಡುಗಡೆ ಮಾಡುವ ಅನುದಾನ ಸ್ಥಗಿತಗೊಂಡು ಎರಡು ವರ್ಷಗಳೇ ಕಳೆದಿವೆ. ಕೋವಿಡ್ ಕಾರಣದಿಂದ ನೆನೆಗುದಿಗೆ ಬಿದ್ದಿದ್ದ ಅವಾಸ್ ಯೋಜನೆಗೆ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ಬಳಿ ಮಾತನಾಡಿ ಕೂಡಲೇ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಒಂದು ಸಭೆ ಕರೆದು ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಸಚಿವ ಎನ್.ಎಸ್.ಬೋಸರಾಜು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications