ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರು : ಸಿಎಂ ವಿರುದ್ಧ ಪ್ರತಿಭಟನೆ, 50 ಜನರ ವಿರುದ್ಧ ಪ್ರಕರಣ

|
Google Oneindia Kannada News

ರಾಯಚೂರು, ಜೂನ್ 30 : ರಾಯಚೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮ ವಾಸ್ತವ್ಯಕ್ಕೆ ತೆರಳುವ ವೇಳೆ ಬಸ್ ತಡೆದು ಪ್ರತಿಭಟನೆ ಮಾಡಲಾಗಿತ್ತು.

ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯಕ್ಕಾಗಿ ರಾಯಚೂರಿನಿಂದ ಸರ್ಕಾರಿ ಬಸ್‌ನಲ್ಲಿ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮಕ್ಕೆ ತೆರಳುತ್ತಿದ್ದರು. ಆಗ ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ಬಸ್ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ್ದರು.

ಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ, ಇಬ್ಬರು ಪೊಲೀಸರ ಅಮಾನತುಗ್ರಾಮ ವಾಸ್ತವ್ಯದ ವೇಳೆ ಪ್ರತಿಭಟನೆ, ಇಬ್ಬರು ಪೊಲೀಸರ ಅಮಾನತು

Protest in the time of grama vastavaiya complaint against 50 people

ಪ್ರತಿಭಟನೆಗೆ ಭದ್ರತಾ ಲೋಪವೇ ಕಾರಣ ಎಂದು ಆರೋಪಿಸಿ ಯುರಗೇರಾ ವೃತ್ತದ ಇನ್ಸ್‌ಪೆಕ್ಟರ್ ದತ್ತಾತ್ರೇಯ ಕಾರ್ನಾಡ ಮತ್ತು ರಾಯಚೂರು ಗ್ರಾಮೀಣ ಠಾಣೆ ಸಬ್ ಇನ್ಸ್‌ಪೆಕ್ಟರ್ ನಿಂಗಪ್ಪ ಅವರನ್ನು ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಅಮಾತನು ಮಾಡಿದ್ದರು.

ಮೋದಿಗೆ ಮತ ಹಾಕ್ತೀರಿ : ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಆಕ್ರೋಶಮೋದಿಗೆ ಮತ ಹಾಕ್ತೀರಿ : ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಆಕ್ರೋಶ

ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರತಿಭಟನೆಗೆ ಸಂಬಂಧಿಸಿದಂತೆ 50 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಟಿಯುಸಿಐ ಅಧ್ಯಕ್ಷ ಆರ್.ಮಾನಸಯ್ಯ, ಕಾರ್ಯದರ್ಶಿ ಜಿ.ಅಮರೇಶ ಸೇರಿದಂತೆ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

ವೋಟು ಮೋದಿಗೆ ಹಾಕ್ತೀರಿ, ಸಮಸ್ಯೆ ನಾನು ಬಗೆಹರಿಸಬೇಕಾ?: ಪ್ರತಿಭಟನಾಕಾರರ ವಿರುದ್ಧ ಸಿಎಂ ಕಿಡಿವೋಟು ಮೋದಿಗೆ ಹಾಕ್ತೀರಿ, ಸಮಸ್ಯೆ ನಾನು ಬಗೆಹರಿಸಬೇಕಾ?: ಪ್ರತಿಭಟನಾಕಾರರ ವಿರುದ್ಧ ಸಿಎಂ ಕಿಡಿ

ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಕಾನೂನು ವಿರುದ್ಧ ಗುಂಪು ರಚನೆ, ದಂಗೆ, ಕಾನೂನು ವಿರುದ್ಧ ಚಟುವಟಿಕೆಯಲ್ಲಿ ಎಲ್ಲರೂ ಭಾಗಿದಾರರು ಹಾಗೂ ಒಬ್ಬ ವ್ಯಕ್ತಿಗೆ ತಡೆಹಾಕಿ ಆರೋಪದಡಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

English summary
Complaint filed against 50 people who protest against Karnataka Chief Minister H.D.Kumaraswamy on the way of Karegudda village of Manvi taluk, Raichur on June 26, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X