ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಯಚೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಬಂಧಿಸಿದ್ದ ಯುವಕ ಸಾವು; ಪಿಎಸ್ ಐ ಅಮಾನತು

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಸೆಪ್ಟೆಂಬರ್ 16: ಗಣೇಶ ವಿಸರ್ಜನೆ ಸಂದರ್ಭ ಬಂಧಿಸಲಾಗಿದ್ದ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈ ಸಂಬಂಧ ರಾಯಚೂರು ಜಿಲ್ಲೆಯ ಗಬ್ಬೂರು ಪೊಲೀಸ್ ಠಾಣೆ ಪಿಎಸ್ ಐ ಮುದ್ದುರಂಗಸ್ವಾಮಿ ಹಾಗೂ ಇಬ್ಬರು ಕಾನ್‌ ಸ್ಟೆಬಲ್ ಗಳನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು: ಠಾಣೆಯ ವಿರುದ್ಧ ದೂರುಪೊಲೀಸ್ ವಶದಲ್ಲಿದ್ದ ಮಗ ತಾಯಿಯ ಎದುರೇ ಸಾವು: ಠಾಣೆಯ ವಿರುದ್ಧ ದೂರು

ಗಣೇಶ ವಿಸರ್ಜನೆ ಸಂದರ್ಭ ಅತಿರೇಕ ವರ್ತನೆ ತೋರಿದ್ದ ಎಂಬ ಕಾರಣಕ್ಕೆ ಶಿವು ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಆತನನ್ನು ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಪಿಎಸ್ ಐ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶಿವು ಸಾವನ್ನಪ್ಪಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PSI Suspended For Lockup Death Of Youth In Gabbur

ಶಿವು ಸಾವಿನಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆ ಮೇಲೆ, ಪಿಎಸ್ ಐ, ಸಿಪಿಐ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಿದ್ದರು. ಇದೀಗ ಪಿಎಸ್ ಐ ಮುದ್ದುರಂಗಸ್ವಾಮಿ ಹಾಗೂ ಕಾನ್‌ ಸ್ಟೆಬಲ್ ಗಳಾದ ಬಾಲಪ್ಪ ಮತ್ತು ಪಂಚಮುಖಿ ಎಂಬವರನ್ನು ಅಮಾನತುಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಡಾ.ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.

PSI Suspended For Lockup Death Of Youth In Gabbur
English summary
Psi and two constable suspended in regard to the death of youth, who was arrested in the time of Ganesha procession in raichur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X