ಮಂತ್ರಾಲಯದಲ್ಲಿ ಉರುಳು ಸೇವೆ ಸಲ್ಲಿಸಿದ ರಾಘವೇಂದ್ರ ರಾಜಕುಮಾರ್
ರಾಯಚೂರು, ಜೂನ್ 13 : ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠಕ್ಕೆ ಡಾ.ರಾಜಕುಮಾರ್ ಕುಟುಂಬ ಭೇಟಿ ನೀಡಿತು. ಈ ವೇಳೆ ಉರುಳು ಸೇವೆ ಮಾಡಿ, ರಾಯರ ದರ್ಶನ ಪಡೆದರು ರಾಘವೇಂದ್ರ ರಾಜಕುಮಾರ್.
ರಾಘವೇಂದ್ರ ರಾಜಕುಮಾರ್ ಹಾಗೂ ವಿನಯ್ ರಾಜಕುಮಾರ್ ಮಠಕ್ಕೆ ಬಂದಿದ್ದರು. ರಾಯರ ದರ್ಶನದ ಬಳಿಕ ರಾಘವೇಂದ್ರ ರಾಜಕುಮಾರ್ ಮಾತನಾಡಿ, ರಾಘವೇಂದ್ರ ಸ್ವಾಮಿ ದರ್ಶನದಿಂದ ನನ್ನ ಆರೋಗ್ಯ ಸುಧಾರಿಸಿದೆ. ಕಳೆದ ಬಾರಿ ಮಠಕ್ಕೆ ಬಂದಾಗ ನನ್ನಿಂದ ನಡೆಯಲು ಆಗುತ್ತಿರಲಿಲ್ಲ. ಆದರೆ ಈ ಬಾರಿ ರಾಯರ ದರ್ಶನದಿಂದ ಉರುಳು ಸೇವೆ ಮಾಡಿದ್ದೇನೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮಠದ ಅಂಗಳದಲ್ಲಿ ನಾನು ಓಡಾಡುತ್ತೇನೆ. ರಾಯರ ಆಶೀರ್ವಾದದಿಂದ ನಮ್ಮ ಕುಟುಂಬ ಬೆಳೆದಿದೆ. ತಂದೆಯವರ ಮಾರ್ಗದರ್ಶನದಂತೆಯೇ ನಾವು ಮಠಕ್ಕೆ ಪ್ರತಿ ವರ್ಷ ಬರುತ್ತೇವೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಾವು ಬೇಡಿಕೊಂಡಿದ್ದೇವೆ. ಹೊಸ ಕಾರ್ಯ ಆರಂಭಿಸುವಾಗ ಮಠಕ್ಕೆ ನಾವು ಬರುತ್ತೇವೆ ಎಂದರು.

ಪುನೀತ್ ರಾಜಕುಮಾರ್ ಕಾರು ಅಪಘಾತ ವಿಚಾರದ ಬಗ್ಗೆ ಮಾತನಾಡಿದ ವಿನಯ್, ಘಟನೆಯಲ್ಲಿ ಯಾರಿಗೂ ಏನೂ ಆಗಿಲ್ಲ. ಸಣ್ಣ ಅಪಘಾತ ನಡೆದಿದೆ. ಅಪ್ಪುಗೆ ಕಾರು ಅಪಘಾತದಲ್ಲಿ ಏನೂ ಆಗಿಲ್ಲ, ಚೆನ್ನಾಗಿದ್ದಾರೆ. ನೂತನ ಸಿನಿಮಾ ಸ್ಕ್ರಿಪ್ಟ್ ಪೂಜೆಗಾಗಿ ಮಂತ್ರಾಲಯಕ್ಕೆ ಬಂದಿದ್ದೇವೆ. ಪುನೀತ್ ಜೊತೆ ನಟಿಸುವ ಆಸೆಯಿದೆ, ಉತ್ತಮ ಕಥೆಗೆ ನಟಿಸುತ್ತೇವೆ ಎಂದು ಹೇಳಿದರು.
ನೂತನ ಸಿನಿಮಾ ಗ್ರಾಮಾಯಣ ಆಗಸ್ಟ್ ತಿಂಗಳಲ್ಲಿ ಸೆಟ್ಟೇರಲಿದೆ. ಹೀಗಾಗಿ ನಾಳೆ ಸಿನಿಮಾ ಸ್ಕ್ರಿಪ್ಟ್ ಪೂಜಾ ಕಾರ್ಯಕ್ರಮ ನಡೆಯಲಿದೆ. ಉತ್ತಮ ಕಥೆಗಳು ಸಿಕ್ಕಾಗ ನಟಿಸುವೆ, ಸದ್ಯ ಹೆಚ್ಚಿನ ಪ್ರಾಜಕ್ಟ್ ಗಳು ಇಲ್ಲ ಎಂದು ವಿನಯ್ ರಾಜಕುಮಾರ್ ಹೇಳಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications