ಪ್ರವಾಹದಲ್ಲಿ ಆಂಬುಲೆನ್ಸ್ಗೆ ದಾರಿ ತೋರಿ ಸಾಹಸ ಮೆರೆದ ಬಾಲಕ
ರಾಯಚೂರು, ಆಗಸ್ಟ್ 15: ರಾಯಚೂರಿನ ಪ್ರವಾಹ ಪರಿಸ್ಥಿತಿಯಲ್ಲಿ ಆಂಬುಲೆನ್ಸ್ ಒಂದಕ್ಕೆ ದಾರಿ ತೋರಿಸುವ ಮೂಲಕ ಅಪ್ರತಿಮ ಸಾಹಸ ಮೆರೆದಿದ್ದ ಅರನೇ ತರಗತಿ ಬಾಲಕನಿಗೆ ರಾಯಚೂರು ಜಿಲ್ಲಾಡಳಿತ ಸಾಹಸ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ.
ರಾಯಚೂರಿನ ದೇವದುರ್ಗದಲ್ಲಿ ಕೃಷ್ಣಾ ನದಿಯ ಪ್ರವಾಹದಿಂದ ಹಿರೇರಾಯಕುಂಪೆ-ಗೂಗಲ್ ನಡುವೆ ಸಂಪರ್ಕ ಕಲ್ಪಿಸುವ ಮಚನೂರ್ ಸೇತುವೆ ಮುಳುಗಿತ್ತು. ಅಲ್ಲಿ ಸೇತುವೆ ಎಲ್ಲಿದೆ, ಅದರ ಮೇಲೆ ಎಷ್ಟು ನೀರಿದೆ ಎನ್ನುವುದೇ ತಿಳಿಯುತ್ತಿರಲಿಲ್ಲ. ಅಲ್ಲಿಗೆ ಬಂದಿದ್ದ ಆಂಬುಲೆನ್ಸ್ನಲ್ಲಿ ಚಾಲಕ ದಿಕ್ಕೆಟ್ಟು ವಾಹನ ನಿಲ್ಲಿಸಿಕೊಂಡಿದ್ದರು.
ಸೇತುವೆಯ ಎರಡೂ ಕಡೆ ಅನೇಕ ಜನರು ನೆರೆದಿದ್ದರೂ ಅವರು ಅಸಹಾಯಕರಂತೆ ನಿಂತಿದ್ದರು. ಈ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕನ ನೆರವಿಗೆ ಬಂದಿದ್ದು 12 ವರ್ಷ ವೆಂಕಟೇಶ್. 'ನಾನು ಮುಂದೆ ನಡೆದುಕೊಂಡು ಹೋಗುತ್ತೇನೆ. ನನ್ನ ಹಿಂದೆ ನಿಧಾನವಾಗಿ ಬನ್ನಿ. ಸೇತುವೆಯ ಮೇಲೆ ಎಷ್ಟು ನೀರು ಇದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ' ಎಂದು ಚಾಲಕನಿಗೆ ಧೈರ್ಯ ತುಂಬಿದ ಬಾಲಕ, ಸುಮಾರು 100 ಮೀಟರ್ ಉದ್ದದ ಸೇತುವೆ ಮೇಲೆ ನೀರು ತುಂಬಿದ್ದರೂ ದೃತಿಗೆಡದ ಬಾಲಕ ನಡೆದುಕೊಂಡು ಮುಂದೆ ಸಾಗಿದ್ದ.

ಒಂದು ಭಾಗದಲ್ಲಿ ಬಾಲಕನ ಎದೆಮಟ್ಟದವರೆಗೂ ನೀರು ಬಂದಿತ್ತು. ಒಮ್ಮೆ ಭಯವಾದರೂ ಈಜು ಕಲಿತಿದ್ದರಿಂದ ಇನ್ನೊಂದು ದಡ ಸೇರುವ ವಿಶ್ವಾಸ ಇತ್ತು ಎಂದು ಆತ ಹೇಳಿಕೊಂಡಿದ್ದಾನೆ.
ಬಾಲಕನ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಆತ ತೋರಿದ ಧೈರ್ಯದ ವಿಡಿಯೋ ವೈರಲ್ ಆಗಿದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿಯ ಸಾಹಸವನ್ನು ಮೆಚ್ಚಿದ್ದ ಸರ್ಕಾರದ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ. ಅವರು, ಪ್ರಸಕ್ತ ಸಾಲಿನ ಶೌರ್ಯ ಪ್ರಶಸ್ತಿಗಳ ಪಟ್ಟಿಯಲ್ಲಿ ವೆಂಕಟೇಶ್ ಹೆಸರನ್ನೂ ಸೇರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದು ಶಿಫಾರಸು ಮಾಡಿದ್ದರು.

ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶರತ್ ಅವರು ಬಾಲಕನ ಸಾಹಸವನ್ನು ಮೆಚ್ಚಿ ಸಾಹಸ ಸೇವಾ ಪ್ರಶಸ್ತಿ ನೀಡಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications