ರಾಯಚೂರು: ನೀರಿಲ್ಲದೆ ತತ್ತರಿಸಿದ ಜಾನುವಾರಗಳು!
ರಾಯಚೂರು ಮಾರ್ಚ್ 6: ಈ ವರ್ಷ ಬಿಸಿಲಿನ ತೀವ್ರತೆ ಹೆಚ್ಚಿದೆ. ವಾತಾವರಣದಲ್ಲಿ ಗಾಳಿ ಕಡಿಮೆಯಾಗಿ ಸೆಕೆ ಅತಿಯಾದ ಕಾರಣ ನೆತ್ತಿ ಸುಟ್ಟು ಜನ-ಜಾನುವಾರು ಪರದಾಡುವಂತಾಗಿದೆ. ತಾಪಮಾನ ಏರಿಕೆಯಾಗಿದ್ದರಿಂದ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಮುದಗಲ್, ಕನ್ನಾಪುರಹಟ್ಟಿ, ಉಪ್ಪಾರ ನಂದಿಹಾಳ, ಉಳಿಮೇಶ್ವರ, ಭೋಗಾಪುರ ಸೇರಿ ಇನ್ನಿತರ ಗ್ರಾಮಗಳ ಕೆರೆಗಳಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದೆ. 15 ದಿನಗಳಿಂದ ಬಿಸಿಲಿನ ಝಳ ತೀವ್ರವಾಗಿದೆ. ಬೆಳಿಗ್ಗೆ 8ಕ್ಕೆ ನಿಗಿ ನಿಗಿಯಾಗುವ ಸೂರ್ಯನ ಪ್ರಖರತೆ ಸಂಜೆ 6 ಗಂಟೆಯಾದರೂ ಇಳಿಮುಖವಾಗುತ್ತಿಲ್ಲ.

ಈ ವರ್ಷದ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ವಾಡಿಕೆಯಷ್ಟು ಮಳೆ ಸುರಿದಿಲ್ಲ. ಚಳಿಗಾಲದಲ್ಲೂ ಚಳಿ ಇರಲಿಲ್ಲ. ವಾಡಿಕೆಯಂತೆ ಯುಗಾದಿ ಬಳಿಕ ವಾತಾವರಣದಲ್ಲಿ ತಾಪಮಾನ ಏರಿಕೆಯಾಗುತ್ತಿತ್ತು. ಆದರೆ, ಈ ಬಾರಿ ತೇವಾಂಶ ಕೊರತೆಯಾಗಿ ಈಗಾಗಲೇ ತಾಪಮಾನ ಹೆಚ್ಚಳವಾಗಿದೆ.
ಏಪ್ರಿಲ್, ಮೇ ತಿಂಗಳಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ದಾಖಲಾಗಿತ್ತು. ಈ ವರ್ಷ ಈಗಲೇ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇದೆ. ಜನ ಮಧ್ಯಾಹ್ನ ಮನೆಯಿಂದ ಹೊರಬರಲು ಹಿಂದೇಟು ಹಾಕುವ ಸ್ಥಿತಿ ಎದುರಾಗಿದೆ. ರಾತ್ರಿ ಹಾಗೂ ಬೆಳಿಗ್ಗೆ ತಾಪಮಾನ ಕೊಂಚ ಇಳಿಕೆಯಾದರೂ ಮಧ್ಯಾಹ್ನದ ಬಿಸಿಲು ನೆತ್ತಿ ಸುಡುತ್ತಿದೆ.
ಬೀದಿಬದಿ ವ್ಯಾಪಾರಿಗಳು, ವೃದ್ಧರು ಸೇರಿ ಹಲವರಿಗೆ ಬಿಸಿಲಿನ ಬೇಗೆ ತಟ್ಟಿದೆ. ದಿಢೀರ್ ತಾಪಮಾನ ಏರಿಕೆಯಿಂದ ಜನರು ಫ್ಯಾನ್ ಹಾಗೂ ಹವಾನಿಯಂತ್ರಿತ (ಎ.ಸಿ) ವ್ಯವಸ್ಥೆಯ ಮೊರೆ ಹೋಗುವಂತಾಗಿದೆ.
ಪಟ್ಟಣದ ಮುಖ್ಯ ರಸ್ತೆ ಸೇರಿ ಒಳಭಾಗದ ರಸ್ತೆಯಲ್ಲಿದ್ದ ಮರಗಳನ್ನು ರಸ್ತೆ ವಿಸ್ತರಣೆ ನೆಪದಲ್ಲಿ ಕಡಿದ ಪರಿಣಾಮ ರಸ್ತೆಯಲ್ಲಿ ನೆರಳು ಇಲ್ಲದಾಗಿದೆ. ಇದರಿಂದಾಗಿ ಉಷ್ಣಾಂಶದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.
ತಾಪಮಾನದಿಂದ ಪಾರಾಗಲು ಜನರು ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಎಳನೀರು, ಮಜ್ಜಿಗೆ, ಹಣ್ಣಿನ ಜ್ಯೂಸ್ ಸೇವಿಸುತ್ತಿದ್ದಾರೆ.
'ಕಾಲುವೆಗೆ ನೀರು ಹರಿಸಿ'
'ಸಮೀಪದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದರೂ ಜಾನುವಾರುಗಳಿಗೆ ಕುಡಿಯಲು ರಾಂಪುರ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಕಾಲುವೆಗೆ ನೀರು ಹರಿಸಿ ಎಂದು ವಿವಿಧ ಗ್ರಾಮಸ್ಥರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ' ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಪುತ್ರಗೌಡ ಆರೋಪಿಸಿದರು.
ರಸ್ತೆ ಕಾಮಗಾರಿಗೆ ಪಟ್ಟಣದ ಕೋಟೆ ಮುಂಭಾಗದ ಕಂದಕದಲ್ಲಿನ ನೀರು ತೆಗೆದುಕೊಂಡು ಹೋಗಲಾಗುತ್ತಿದೆ. ಮೇಯಲು ಅಡವಿಗೆ ಹೋದ ಜಾನುವಾರುಗಳು ಕುಡಿಯಲು ನೀರಿಲ್ಲದ ಕಾರಣ ತೊಂದರೆ ಅನುಭವಿಸುತ್ತಿವೆ. ಕುಡಿಯುವುದಕ್ಕಾಗಿ ಕಾಲುವೆಗೆ ನೀರು ಹರಿಸಬೇಕು ಎಂದು ಅವರು ಒತ್ತಾಯಿಸುತ್ತಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications