Raichur: ನಗರಸಭೆ, ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜಯಭೇರಿ
ರಾಯಚೂರು ಡಿಸೆಂಬರ್ 30: ರಾಯಚೂರು ನಗರಸಭೆ, ಸಿಂಧನೂರು ನಗರಸಭೆ ಹಾಗೂ ದೇವದುರ್ಗ ಪುರಸಭೆಯ ತಲಾ ಒಂದೊಂದು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳ ಮಧ್ಯೆಯೇ ನೇರ ಸ್ಪರ್ಧೆ ನಡೆದಿದೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಪಟ್ಟಿದೆ. ರಾಯಚೂರು ನಗರಸಭೆಯ ವಾರ್ಡ್ ನಂಬರ್ 12ಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಪವನ್ ಕುಮಾರ ಭಾರಿ ಬಹುಮತದಿಂದ ಗೆಲುವಿನ ನಗೆ ಬೀರಿದ್ದಾರೆ.

ಪವನ್ ಕುಮಾರ 2,627 ಮತಗಳನ್ನು ಪಡೆದಿದ್ದು, ಪ್ರತಿ ಸ್ಪರ್ಧಿಗಳಾದ ಜೆಡಿಎಸ್ ಅಭ್ಯರ್ಥಿ ಮೀರ್ ಅಬ್ದುಲ್ ರಹೀಂ 359 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿ ನೂರ್ ಪಾಷಾ 140 ಮತಗಳನ್ನು ಪಡೆದಿದ್ದಾರೆ. ಉಳಿದಂತೆ 18 ಮತಗಳು ನೋಟಾಗೆ ಚಲಾವಣೆಯಾಗಿದೆ.
ವಾರ್ಡ್ ನಂಬರ್ 12ರ ಮಂಗಳವಾರಪೇಟೆಯ ಸದಸ್ಯರಾಗಿ, ನಗರಸಭೆಯ ಅಧ್ಯಕ್ಷರೂ ಆಗಿದ್ದ ವಿನಯಕುಮಾರ ಅವರು ವಿಧಾನಸಭಾ ಚುನಾವಣೆಯಲ್ಲಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.
ಸಿಂಧನೂರು-ಕಾಂಗ್ರೆಸ್ ವಿಜಯಪತಾಕೆ
ಸಿಂಧನೂರು ನಗರಸಭೆಯ ವಾರ್ಡ್ ನಂ-22ಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬೇದಾಬೇಗಂ ಗಂ. ಮುನೀರ್ಪಾಷಾ ಗೆಲುವು ಸಾಧಿಸಿದ್ದಾರೆ.

ಮುನೀರ್ಪಾಷಾ ನಿಧನದಿಂದಾಗಿ ಖಾಲಿಯಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಬೇದಾಬೇಗಂ ಮುನೀರಪಾಷಾ 744, ಮಲ್ಲಿಕಾರ್ಜುನ ಕಾಟಗಲ್ 105, ಎಂ.ಮೆಹಬೂಬ 266 ಹಾಗೂ ಅಬ್ದುಲ್ ರಿಯಾಜ್ ಬುಡ್ಡಣ್ಣಿ 29 ಮತಗಳನ್ನು ಪಡೆದಿದ್ದಾರೆ. 6 ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಅಬೇದಾಬೇಗಂ ಅವರು 478 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಾಮದಾಸ ತಿಳಿಸಿದ್ದಾರೆ.
ಜೆಡಿಎಸ್ ಭದ್ರ ಕೋಟೆಯಲ್ಲಿ ಕಾಂಗ್ರೆಸ್ಗೆ ಜಯ
ದೇವದುರ್ಗ ಪುರಸಭೆ ವಾರ್ಡ್ ಸಂಖ್ಯೆ 5ಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಂಕೋಬ 125 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 387 ಮತ ಪಡೆದರೆ, ಆಡಳಿತ ಜೆಡಿಎಸ್ ಪಕ್ಷ ಅಭ್ಯರ್ಥಿ ಪ್ರಭು 262 ಮತ ಪಡೆದು ಮುಖಭಂಗ ಅನುಭವಿಸಿದ್ದಾರೆ. 133 ಮತ ಪಡೆದ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications