Raichur: ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಸತ್ತ ಮಂಗಗಳು- ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥ!
ರಾಯಚೂರು ಜುಲೈ 4: ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಮಂಗಗಳು ಸತ್ತು, ಮೂರು ದಿನ ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಖಾನಾಪೂರದಲ್ಲಿ ನಡೆದಿದೆ. ಈ ಟ್ಯಾಂಕ್ಗಳಿಂದ ಇಡೀ ಊರಿಗೇ ಕುಡಿಯುವ ನೀರು ಸರಬರಾಜು ಆಗುತ್ತಿತ್ತು. ತೆರೆದ ವಾಟರ್ ಟ್ಯಾಂಕ್ ಆಗಿದ್ದರಿಂದ ಮಂಗಗಳು ನೀರು ಕುಡಿಯಲು ಹೋಗಿ ಇದರಲ್ಲಿ ಬಿದ್ದು ಸಾವನ್ನಪ್ಪಿವೆ.
ಇದು ಅರಿವಿಗೆ ಬಾರದೆ ಗ್ರಾಮಸ್ಥರು ಮೂರು ದಿನಗಳ ಕಾಲ ಇದೇ ನೀರನ್ನು ಕುಡಿದಿದ್ದಾರೆ. ಅಸ್ವಸ್ಥರಾದವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಇದರಿಂದಾಗಿ ಯಮನಾಳ ಗ್ರಾಮ ಪಂಚಾಯಿತಿ ಪಿಡಿಓ ಸೇರಿದಂತೆ ಸಿಬ್ಬಂದಿಗಳ ವಿರುದ್ಧ ಜನರು ಹಿಡಿ ಶಾಪ ಹಾಕಿದ್ದಾರೆ.

ರಾಯಚೂರಿನಲ್ಲಿ ನೀರಿನ ಸಮಸ್ಯೆ ನಿನ್ನೆ ಮೊನ್ನೆಯದ್ದಲ್ಲ. ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ನೀರಿನ ಸಮಸ್ಯೆ ಇದೆ. ಈ ಭಾಗದ ಜನರಿಗೆ ಕುಡಿಯಲು ಯೋಗ್ಯವಾದ ನೀರು ಸಿಗುವುದಿಲ್ಲ. ಇಂದಿಗೂ ಹಲವೆಡೆ ಟ್ರಾಂಕ್ಗಳ ಮೂಲಕವೇ ಗ್ರಾಮಗಳಿಗೆ ನೀರು ಪೂರೈಸಲಾಗುತ್ತದೆ.
ಇದು ಮಾತ್ರವಲ್ಲದೆ ಕಾರ್ಖಾನೆಗಳ ಕೆಮಿಕಲ್ ಕೂಡ ನದಿ ನೀರಿಗೆ ಸೇರುವುದರಿಂದ ನೀರು ವಿಷವಾಗಿ ಹೋಗಿದೆ. ಶಕ್ತಿನಗರ ಬಳಿಯಿರುವ ಕೆಮಿಕಲ್ ಕಾರ್ಖಾನೆಗಳು ಬಿಡುವ ವೇಸ್ಟೇಜ್ ನೀರು ಕೃಷ್ಣಾ ನದಿ ಸೇರುತ್ತಿದ್ದು, ಇಲ್ಲಿಂದಲೇ ರಾಯಚೂರು ನಗರ ಮತ್ತು ರಾಯಚೂರು ಗ್ರಾಮೀಣ ಭಾಗದ ಕೆಲ ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ನದಿ ನೀರಿನಲ್ಲಿ ಕಾರ್ಖಾನೆಗಳ ಕೆಮಿಕಲ್ ಸೇರುವುದರಿಂದ ಜೀವಜಲವೇ ಜನರಿಗೆ ವಿಷವಾಗಿ ಪರಿಣಮಿಸಿದೆ. ಪರಿಸರ ಮಾಲಿನ್ಯ ಹಾಗೂ ನಿಯಂತ್ರಣ ಇಲಾಖೆಯ ತಜ್ಞರು ಈ ಬಗ್ಗೆ ವರದಿ ನೀಡಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ.

ವಿಷಕಾರಿ ಕೆಮಿಕಲ್ ವೇಸ್ಟೇಜ್ ನೀರನ್ನೇ ಕುಡಿಯಲು ಪೂರೈಸಲಾಗುತ್ತಿದ್ದು, ಇದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 30 ರಿಂದ 40ಕ್ಕೂ ಹೆಚ್ಚು ಕೆಮಿಕಲ್ ಕಾರ್ಖಾನೆಗಳು ಅಕ್ರಮವಾಗಿ ಚರಂಡಿಗಳ ಮೂಲಕ ಹಳ್ಳಗಳಿಗೆ ಕೆಮಿಕಲ್ ವೇಸ್ಟೇಜ್ ನೀರು ಬಿಡುತ್ತಿವೆ. ಇದರಿಂದ ಕೃಷ್ಣಾ ನದಿ ನೀರು ಕಲುಷಿತಗೊಳ್ಳುತ್ತಿದೆ. ಇದೇ ನೀರನ್ನೇ ನಗರಸಭೆ ಮತ್ತು ಆಯಾ ಗ್ರಾಮಗಳಿಗೆ ಪಂಚಾಯಿತಿ ಕುಡಿಯಲು ಪೂರೈಸುತ್ತಿದೆ.
ರಾಯಚೂರು ತಾಲೂಕಿನ ವಡ್ಲೂರು ಗ್ರಾಮದ ಸುತ್ತಲಿನ ಕೆಮಿಕಲ್ ಕಾರ್ಖಾನೆಗಳು ಬಿಡುವ ವಿಷಕಾರಿ ವೇಸ್ಟೇಜ್ ನೀರು ಕೃಷ್ಣಾ ನದಿ ಸೇರಲಿದೆ. ತಾಲೂಕಿನ ತೆಲಂಗಾಣ ಗಡಿ ಭಾಗದ ಗುಂಜಳ್ಳಿ, ಹನುಮನದೊಡ್ಡಿ, ವಡ್ಲೂರು ಸೇರಿ ನಾಲ್ಕೈದು ಹಳ್ಳಿಗಳಿಗೆ ಇದೇ ನೀರನ್ನು ಪೂರೈಸಲಾಗುತ್ತದೆ. ಈ ಕುರಿತು ಹಲವು ಬಾರಿ ಜಿಲ್ಲಾಡಳಿತದ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ. ಕೆಮಿಕಲ್ ಮಿಶ್ರಿತ ನೀರು ಸೇವನೆಯಿಂದ ಹಲವರು ಕ್ಯಾನ್ಸರ್, ಟಿಬಿ, ಥೈರಾಯ್ಡ್ ರೋಗಗಳಿಂದ ಬಳಲುತ್ತಿರುವುದು ಕಂಡುಬಂದಿದೆ.
ಕಾರ್ಖಾನೆಗಳು ಹಳ್ಳಕ್ಕೆ ಬಿಡುವ ಕೆಮಿಕಲ್ ವೇಸ್ಟೇಜ್ ನೀರು ಕುಡಿದು ಕೇವಲ ಜನರು ಮಾತ್ರವಲ್ಲದೆ, ಜಾನುವಾರುಗಳು, ಮೀನುಗಳು, ಕುರಿ ಸೇರಿದಂತೆ ಇತರೆ ಪ್ರಾಣಿಗಳು ಸಹ ಸಾವನ್ನಪ್ಪುತ್ತಿವೆ. ಹೊಲಗಳಿಗೂ ಇದೇ ವಿಷಕಾರಿ ನೀರು ಹರಿಯುತ್ತಿದ್ದು, ಇದರಿಂದ ಇಳುವರಿ ಕುಂಠಿತಗೊಂಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications