ರಾಯಚೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರಿಚಯ
ರಾಯಚೂರು ಮಾರ್ಚ್ 25: ಈ ಬಾರಿ ಬಿಜೆಪಿಯಿಂದ ಪುನರಾಯ್ಕೆ ಬಯಸಿ ಕಣಕ್ಕಿಳಿಯಲಿರುವ ರಾಯಚೂರು ಲೋಕಸಭಾ (ಎಸ್.ಟಿ. ಮೀಸಲು) ಕ್ಷೇತ್ರದ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗುಂತಗೋಳ ಸಂಸ್ಥಾನದ ರಾಜ ಮನೆತನದವರು.
ರಾಜಾ ಅಮರೇಶ್ವರ ನಾಯಕ ಬಿ.ಎ. ಎಲ್ಎಲ್ಬಿ ಪದವಿ ಪಡೆದಿದ್ದಾರೆ. ಮೈಸೂರು ಮತ್ತು ಧಾರವಾಡ ವಿಶ್ವ ವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಆರಂಭದಲ್ಲಿ ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. 1989ರಲ್ಲಿ ಲಿಂಗಸುಗೂರು ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಕಾಂಗ್ರೆಸ್ನಿಂದ ಶಾಸಕರಾಗಿದ್ದರು. ಎರಡನೇ ಬಾರಿಗೆ 1999-2004ರ ವಿಧಾನಸಭೆ ಚುನಾವಣೆಯಲ್ಲಿ ಕಲ್ಮಲಾ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದರು.

1999-2000ರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ, 2002ರಿಂದ 2004ರಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಚುನಾಯಿತರಾದರು.
66 ವರ್ಷದ ರಾಜಾ ಅಮರೇಶ್ವರ ನಾಯಕ ಅವರಿಗೆ ಪತ್ನಿ ರಾಣಿ ಮೋಹನಾಂಬದೇವಿ ಹಾಗೂ ಪುತ್ರ ಇದ್ದಾರೆ.
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಆರ್ ಪಿಐ ಸ್ಪರ್ಧೆ ; ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದಿಂದ(ಆರ್ಪಿಐ) ಲೋಕಸಭಾ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು' ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್.ಮೂರ್ತಿ ಹೇಳಿದರು.
'ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು' ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
'ದೇಶದಲ್ಲಿ ಕೋಮುಗಲಭೆ ಹೆಚ್ಚಾಗುತ್ತಿದೆ. ದುಬಾರಿ ಜಿ.ಎಸ್.ಟಿ, ಬೆಲೆ ಏರಿಕೆಯಿಂದ ನಾಗರಿಕರ ಜೀವನ ದುಸ್ತರವಾಗಿದೆ. ಬಂಡವಾಳಶಾಹಿಗಳು ಮತ್ತು ಭೂಮಾಲೀಕರ ಹಣ ದುಪ್ಪಟ್ಟಾಗಿ ಶ್ರೀಮಂತರು ಮತ್ತು ಬಡವರ ನಡುವಣ ಅಂತರ ಹೆಚ್ಚಾಗಿದೆ. ಕೇಂದ್ರ ಸರ್ಕಾರದಿಂದ ರಾಜಕೀಯ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ದೇಶದಲ್ಲಿನ ಸಣ್ಣ ಉದ್ಯಮ, ಕೈಗಾರಿಕೆಗಳು ನೆಲ ಕಚ್ಚಿವೆ. ಕೃಷಿ ಉತ್ಪನ್ನ ಇಳುವರಿ ಕುಸಿದಿದೆ. ರೈತರು ಕಂಗಾಲಾಗಿದ್ದಾರೆ. ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ನರೇಗಾ ಯೋಜನೆ ಸಮರ್ಪಕ ಜಾರಿಯಾಗದ ಕಾರಣ ಹಳ್ಳಿಯ ಜನರು ಮಹಾನಗರಗಳಿಗೆ ಗುಳೆ ಹೋಗುತ್ತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
'ಚುನಾವಣಾ ಪೂರ್ವ ತಯಾರಿಗಾಗಿ ಈಗಾಗಲೇ ಏಳು ರಾಜ್ಯಗಳಲ್ಲಿ ಪ್ರವಾಸ ಮಾಡಲಾಗಿದೆ. ಸಂವಿಧಾನ ಜಾರಿ ಜನಾಂದೋಲನ ಜಾಥಾವನ್ನು ಮಾರ್ಚ್ 18ರಿಂದ ಆರಂಭವಾಗಿದ್ದು, ಏಪ್ರಿಲ್ 1ರವರೆಗೆ ನಡೆಯಲಿದೆ. ಸ್ವಾತಂತ್ರ್ಯ ದೊರೆತು ಏಳು ದಶಕವಾದರೂ ಆಡಳಿತದ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ಸಂವಿಧಾನದ ಆಶಯಗಳನ್ನು ಜಾರಿಗೊಳಿಸಿಲ್ಲ' ಎಂದು ದೂರಿದರು. ಈ ವೇಳೆ ಪಕ್ಷದ ಮುಖಂಡರಾದ ಎಂ. ಮನೋಹರ, ಬಶೀರ್ ಅಹ್ಮದ್, ಬಸವರಾಜ, ರಂಗಪ್ಪ, ಅಶೋಕ ಉಪಸ್ಥಿತರಿದ್ದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications