Raichur: ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿ- ಲೋಕ ಟಿಕೆಟ್‌ಗೆ ಲಾಬಿ

ರಾಯಚೂರು ಡಿಸೆಂಬರ್ 28: ಲೋಕಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಮೊದಲೇ ಪ್ರಮುಖ ರಾಜಕೀಯ ಪಕ್ಷಗಳ ಟಿಕೆಟ್‌ಗೆ ಆಕಾಂಕ್ಷಿಗಳು ತೆರೆಮರೆಯಲ್ಲಿ ಭಾರಿ ಲಾಬಿ ನಡೆಸಿದ್ದಾರೆ.

ಆಕಾಂಕ್ಷಿಗಳು ಪಕ್ಷಗಳ ಮುಖಂಡರನ್ನು ಭೇಟಿ ಮಾಡುವುದು, ತಮ್ಮ ಅಭಿಮಾನಿಗಳ ಮೂಲಕ ಒತ್ತಾಯ ಹೇರುವುದು, ಸಂಸ್ಥೆಗಳ ಮೂಲಕ ಸೇವಾ ಕಾರ್ಯ ಹಮ್ಮಿಕೊಳ್ಳುವುದು, ಮಾಧ್ಯಮಗಳ ಮುಂದೆ ಬಹಿರಂಗವಾಗಿ ಆಕಾಂಕ್ಷಿಗಳು ಎಂದು ಹೇಳಿಕೊಳ್ಳುವ ಪರಿಪಾಠ ಸದ್ದಿಲ್ಲದೇ ಮುನ್ನೆಲೆಗೆ ಬಂದಿದೆ.

Raichur: List of Congress aspirants - Lobby for Lok Sabha ticket

ರಾಯಚೂರು ಲೋಕಸಭಾ ಕ್ಷೇತ್ರ ಎಸ್‌.ಟಿ. ಮೀಸಲು ಕ್ಷೇತ್ರವಾಗಿದೆ. ಕ್ಷೇತ್ರ ವ್ಯಾಪ್ತಿಗೆ ರಾಯಚೂರು ಜಿಲ್ಲೆಯ ಐದು ಹಾಗೂ ಯಾದಗಿರಿ ಜಿಲ್ಲೆಯ ಮೂರು ಸೇರಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತಮ್ಮ ಪ್ರಭಾವ ಬಳಸಿ ಪಕ್ಷದ ಮುಖಂಡರಿಗೆ ಮನದಿಂಗಿತ ಮುಟ್ಟಿಸುತ್ತಿದ್ದಾರೆ.

ಬಿಜೆಪಿಯಲ್ಲಿ ಕೆಲವರು ಈಗಾಗಲೇ ಮಾಧ್ಯಮಗಳ ಮೂಲಕ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ಹಾಲಿ ಸಂಸದರಿಗೆ ಟಿಕೆಟ್‌ ಇಲ್ಲ ಎನ್ನುವ ಗುಮಾನಿ ಹರಡುತ್ತಿದ್ದಂತೆ, ಉಳಿದವರು ಹೆಚ್ಚು ಉತ್ಸುಕರಾಗಿದ್ದಾರೆ. ಕಾಂಗ್ರೆಸ್‌ನಲ್ಲೂ ಹಲವು ಆಕಾಂಕ್ಷಿಗಳು ಹೊಸ ವರ್ಷದ ಶುಭಾಶಯ ಕೋರುವ ನೆಪದಲ್ಲಿ ದಾಂಗುಡಿ ಇಟ್ಟಿದ್ದಾರೆ.

ರವಿ ಪಾಟೀಲ್‌, ದೇವಣ್ಣ ವಕೀಲ , ಮಾಜಿ ಸಂಸದ ದಿ.ವೆಂಕಟೇಶ ನಾಯಕ ಅವರ ಕುಟುಂಬದ ಸೊಸೆಯಂದಿರು ಅಭ್ಯರ್ಥಿಯಾಗುವ ಇಂಗಿತ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದ ಮೂಲಕ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಈ ಮಧ್ಯೆ ಕುಮಾರ್‌ ನಾಯಕ್‌ ಅವರ ಹೆಸರು ಕೂಡ ಕೇಳಿಬಂದಿದೆ.

Raichur: List of Congress aspirants - Lobby for Lok Sabha ticket

ಬೇರೆ ಜಿಲ್ಲೆಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತಂತ್ರವೂ ಪಕ್ಷದಲ್ಲಿ ನಡೆದಿದೆ. ಮತ್ತೊಂದೆಡೆ ರಾಯಚೂರು ಗ್ರಾಮೀಣ ಕ್ಷೇತ್ರದ ಹಾಲಿ ಶಾಸಕ ಬಸವನಗೌಡ ದದ್ದಲ್‌ ಅವರ ಹೆಸರು ಕೂಡ ಚಾಲ್ತಿಯಲ್ಲಿದ್ದು, ಕ್ಲೀನ್‌ ಇಮೇಜ್‌ ಹೊಂದಿರುವುದರಿಂದ ಅವರಿಗೆ ಟಿಕೆಟ್‌ ನೀಡಬೇಕು ಎಂದು ಆ ಪಕ್ಷದ ಒಂದು ಬಣದ ಕೂಗಾಗಿದೆ.

ಸದ್ಯ ಬಿಜೆಪಿ ತೆಕ್ಕೆಯಲ್ಲಿರುವ ರಾಯಚೂರು ಲೋಕಸಭಾ ಕ್ಷೇತ್ರವನ್ನು ಶತಾಯ ಗತಾಯ ಉಳಿಸಿಕೊಳ್ಳಲು ಆ ಪಕ್ಷದ ಮುಖಂಡರು ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಹಾಲಿ ಸಂಸದ ರಾಜಾ ಅಮರೇಶ್ವರ್‌ ನಾಯಕ್‌ ಅವರಿಗೆ ಟಿಕೆಟ್‌ ಸಿಗುವುದೋ? ಇಲ್ಲವೋ? ಎಂಬ ಅನುಮಾನ ಕಾಡುತ್ತಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಬಿ.ವಿ ನಾಯಕ ಅವರಿಗೆ ಟಿಕೆಟ್‌ ನೀಡಬೇಕೆಂಬ ಕೂಗು ಬಿಜೆಪಿ ಕಾರ್ಯಕರ್ತರಿಂದಲೇ ಕೇಳಿ ಬಂದಿದೆ. ಒಂದು ವೇಳೆ ಟಿಕೆಟ್‌ ನೀಡದಿದ್ದರೆ ಅವರು ಮರಳಿ ಕಾಂಗ್ರೆಸ್‌ ಬಾಗಿಲು ತಟ್ಟುವುದರಲ್ಲಿ ಅನುಮಾನವಿಲ್ಲ ಎನ್ನುವ ಮಾತುಗಳು ಕೇಳಿಬಂದಿವೆ.

ಮತ್ತೊಂದೆಡೆ ಸುರಪುರ ಮಾಜಿ ಶಾಸಕ ರಾಜುಗೌಡ, ರಾಯಚೂರು ಗ್ರಾಮೀಣ ಕ್ಷೇತ್ರದ ಪರಾಜಿತ ಅಭ್ಯರ್ಥಿ ತಿಪ್ಪರಾಜು ಹವಲ್ದಾರ್‌ ಕೂಡ ಟಿಕೆಟ್‌ಗೆ ಪೈಪೋಟಿ ನಡೆಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಳ್ಳಾರಿಯ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಸುರಕ್ಷಿತ ನೆಲೆಗಾಗಿ ಹುಡುಕಾಡುತ್ತಿದ್ದಾರೆ. ಅವರಿಗೆ ರಾಯಚೂರು ಕ್ಷೇತ್ರದಿಂದ ಟೀಕೆಟ್‌ ನೀಡಿದರೂ ಅಚ್ಚರಿಯೇನಲ್ಲ ಎನ್ನಲಾಗುತ್ತಿದೆ.

ಬಿಜೆಪಿ ಮುಖಂಡರನ್ನು ಒಗ್ಗಟ್ಟಿನಲ್ಲಿ ಕರೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿರುವ ಜತೆಗೆ ಅವರು ವಾಲ್ಮೀಕಿ ಸಮುದಾಯದ ಪ್ರಭಾವಿ ಮುಖಂಡರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಮಬಲದೊಂದಿಗೆ ಕಣಕ್ಕಿಳಿಯಲು ಬಿಜೆಪಿ ಆಕಾಂಕ್ಷಿಗಳು ಇನ್ನಿಲ್ಲದ ಉತ್ಸಾಹ ತೋರುತ್ತಿದ್ದಾರೆ. ಆದರೆ, ಅಂತಿಮವಾಗಿ ಯಾರಿಗೆ, ಯಾವ ಪಕ್ಷದ ಟಿಕೆಟ್‌ ಒಲಿಯಲಿದೆ ಎಂಬ ಕುತೂಹಲ ತಣಿಯಲು ಇನ್ನಷ್ಟು ದಿನ ಕಾಯಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+