ರಾಯಚೂರು ಲೋಕಸಭಾ ಕ್ಷೇತ್ರ: ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ಆಯ್ಕೆಯೇ ಕುತೂಹಲ
ರಾಯಚೂರು ಮಾರ್ಚ್ 22: ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಗೊಂಡರೂ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿಲ್ಲ. ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯೇ ಕುತುಹೂಲ ಮೂಡಿಸಿದೆ.
ರಾಯಚೂರಿನಲ್ಲಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಅವರ ಬದಲು ಮಾಜಿ ಸಂಸದ ಬಿ.ವಿ.ನಾಯಕ ಅವರಿಗೆ ಟಿಕೆಟ್ ದೊರೆಯಲಿದೆ ಎನ್ನುವ ಚರ್ಚೆಗಳು ರಾಜಕೀಯ ವಲಯದಲ್ಲಿ ನಡೆದಿವೆ. ಬಿಜೆಪಿಯ ಟಿಕೆಟ್ ಸಿಗದಿದ್ದರೆ ರಾಜಾ ಅಮರೇಶ್ವರ ನಾಯಕ ಕಾಂಗ್ರೆಸ್ ಮೊರೆ ಹೋದರೂ ಅಚ್ಚರಿ ಇಲ್ಲ ಎಂದು ಉಭಯ ಪಕ್ಷಗಳ ನಾಯಕರು ಆಡಿಕೊಳ್ಳುತ್ತಿದ್ದಾರೆ.

ಬಿಜೆಪಿಯಲ್ಲಿ ಬಿ.ವಿ.ನಾಯಕ ಹಾಗೂ ರಾಜಾ ಅಮರೇಶ್ವರ ನಾಯಕ ಎರಡೇ ಹೆಸರುಗಳು ಕೇಳಿ ಬರುತ್ತಿವೆ. ಒಂದು ವರ್ಷದಿಂದ ತಣ್ಣಗೆ ಇದ್ದ ರಾಜಾ ಅಮರೇಶ್ವರ ನಾಯಕ ಇದೀಗ ಪಕ್ಷದ ವೇದಿಕೆ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 'ಐದು ವರ್ಷ ಉತ್ತಮವಾಗಿ ಕೆಲಸ ಮಾಡಿರುವ ಕಾರಣ ಪಕ್ಷದ ಟಿಕೆಟ್ ನನಗೆ ಸಿಗಲಿದೆ' ಎನ್ನುವ ವಿಶ್ವಾಸದಲ್ಲಿ ರಾಜಾ ಅಮರೇಶ್ವರ ಇದ್ದಾರೆ. ಬಿಜೆಪಿ ಕಾರ್ಯಕರ್ತರು ಮಾತ್ರ ಬೇರೆ ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡುವುದು ಸೂಕ್ತ ಎಂದು ಪಕ್ಷದ ಮುಖಂಡರಿಗೆ ಸಲಹೆ ಕೊಡುತ್ತಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಅಧಿಕ ಇದೆ. ಕಾಂಗ್ರೆಸ್ನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ ನಾಯಕ ಹೆಸರು ಮುಂಚೂಣಿಯಲ್ಲಿದೆ. ಕುಮಾರ ನಾಯಕ ಅವರು ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಸಂಪರ್ಕಿಸಿ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ. ನಗರದ ಹೋಟೆಲೊಂದರಲ್ಲಿ ರೂಮ್ ಮಾಡಿಕೊಂಡು ರಾಜಕೀಯ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ. ಆಪ್ತ ವಲಯದವರೂ ಸಹ ಚುನಾವಣೆಯಲ್ಲಿ ಸಹಾಯ ಮಾಡುವ ಭರವಸೆ ನೀಡಿ ಜಿ.ಕುಮಾರ ನಾಯಕ ಅವರನ್ನು ಹುರಿದುಂಬಿಸುತ್ತಿದ್ದಾರೆ.

ಸಚಿವ ಸತೀಶ ಜಾರಕಿಹೊಳಿ ಅವರ ಅಳಿಯ ರವಿ ಪಾಟೀಲ ಸಹ ತಾನು ರಾಯಚೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವೆ ಎಂದು ಬಹಿರಂಗವಾಗಿಯೇ ಹೇಳಿಕೊಳ್ಳುತ್ತಿದ್ದಾರೆ. ಪಕ್ಷದ ಕಾರ್ಯಕ್ರಮ ಹಾಗೂ ಚಟುವಟಿಕೆಗಳಲ್ಲೂ ಕ್ರಿಯಾಶೀಲವಾಗಿ ಓಡಾಡುತ್ತಿದ್ದಾರೆ.
ನಂತರದ ಸ್ಥಾನದಲ್ಲಿ ಬಿ.ವಿ.ನಾಯಕ ಹೆಸರೂ ಕೇಳಿ ಬರುತ್ತಿದೆ. ಬಿಜೆಪಿಯ ಟಿಕೆಟ್ ಸಿಗದಿದ್ದರೆ ಇವರು ಕಾಂಗ್ರೆಸ್ಗೆ ಬರಬಹುದು ಎನ್ನುವ ಲೆಕ್ಕಾಚಾರ ಇದೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ, ರಾಯಪ್ಪ ನಾಯಕ, ದೇವಣ್ಣ ನಾಯಕ ಅವರ ಹೆಸರುಗಳೂ ಚರ್ಚೆಯಲ್ಲಿವೆ. ಸುರಪುರ ಕ್ಷೇತ್ರದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಅಂತಿಮವಾಗಿತ್ತು. ಆದರೆ, ಅವರ ಅಕಾಲಿಕ ನಿಧನದ ಕಾರಣ ಚುನಾವಣಾ ರಾಜಕೀಯದ ಮೇಲೂ ಪರಿಣಾಮ ಬೀರಿದೆ. ಇದರ ನಡುವೆಯೇ ಕಲ್ಯಾಣ ಕರ್ನಾಟಕದಲ್ಲಿ ಒಬ್ಬ ಮಹಿಳೆಗೂ ಟಿಕೆಟ್ ಕೊಟ್ಟಿಲ್ಲ. ರಾಯಚೂರು ಕ್ಷೇತ್ರದ ಟಿಕೆಟ್ ಅನ್ನು ಮಹಿಳೆಗೆ ಕೊಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ನಾಗವೇಣಿ ಪಾಟೀಲ ಒತ್ತಾಯಿಸಿದ್ದಾರೆ.
ಬಿಜೆಪಿ ಜೊತೆಗಿನ ಮೈತ್ರಿಯಿಂದಾಗಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ನ ದೊಡ್ಡ ಪಡೆಯೇ ಇದೆ. ಬಿಜೆಪಿ ವರಿಷ್ಠರು ಜೆಡಿಎಸ್ಗೆ ಕ್ಷೇತ್ರವನ್ನು ಬಿಟ್ಟುಕೊಡಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿರೂಪಾಕ್ಷಿ ಆಗ್ರಹಿಸಿದ್ದಾರೆ.
ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಆಯ್ಕೆ ಸ್ವಲ್ಪ ತಡವಾಗಲಿದೆ. ಅಳೆದು ತೂಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಪಕ್ಷಗಳ ಮುಖಂಡರು ವಿಶ್ಲೇಷಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಒಂದು ಪಕ್ಷದಲ್ಲಿರುವ ಮುಖಂಡರೇ ಇನ್ನೊಂದು ಪಕ್ಷದಿಂದ ಕಣ್ಣಕ್ಕೆ ಇಳಿದ ನಿದರ್ಶನಗಳು ಅನೇಕ ಇವೆ. ಈ ಬಾರಿ ಒಳ ಹೊಂದಾಣಿಕೆಯು ರಾಜಕೀಯ ಫಲಿತಾಂಶವನ್ನೇ ಬುಡ ಮೇಲು ಮಾಡುವ ಸ್ಥಿತಿ ಇದೆ. ಹೀಗಾಗಿ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಎಚ್ಚರ ವಹಿಸುತ್ತಿರುವುದು ಕಂಡುಬರುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications