Lok Sabha Election 2024 Result: ರಾಯಚೂರಿನಲ್ಲಿ ಬಿಜೆಪಿ ಮುನ್ನಡೆ
ರಾಯಚೂರು ಜೂನ್ 04: ರಾಯಚೂರು ಎಸ್.ಟಿ.ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಿಧಾನವಾಗಿ ಸಾಗಿದೆ.
ಮೊದಲನೇ ಸುತ್ತಿನಲ್ಲಿ ಕಾಂಗ್ರೆಸ್ನ ಅಭ್ಯರ್ಥಿ ಕುಮಾರ ನಾಯಕ 3844 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ 3429 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ 415 ಮತಗಳ ಅಂತರದಿಂದ ಮುನ್ನಡೆ ಸಾಧಿಸಿತ್ತು.

ಎರಡನೇ ಸುತ್ತಿನಲ್ಲೂ ಕಾಂಗ್ರೆಸ್ನ ಜಿ.ಕುಮಾರ ನಾಯಕ 17,854 ಮತಗಳನ್ನು ಪಡೆಯುವ ಮೂಲಕ ಹಿನ್ನೆಡೆ ಸಾಧಿಸಿದ್ದು, ಬಿಜೆಪಿಯ ರಾಜಾ ಅಮರೇಶ್ವರ ನಾಯಕ 19,008 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ 1154 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ.
ಇನ್ನೂ ಮೂರನೇ ಸುತ್ತಲ್ಲಿ ಕಾಂಗ್ರೆಸ್ನ ಜಿ.ಕುಮಾರ ನಾಯಕ 22,669 ಮತಗಳಿಂದ ಹಿನ್ನಡೆ ಸಾಧಿಸಿದ್ದು ಬಿಜೆಪಿಯ ರಾಜಾ ಅಮರೇಶ್ವರ ನಾಯಕ 22,794 ಮತಗಳನ್ನು ಪಡೆಯುವ ಮೂಲಕ ಮುನ್ನಡೆ ಸಾಧಿಸಿದ್ದಾರೆ. ಅಂದರೆ ಬಿಜೆಪಿ 1125 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ.
ಆರಂಭದಲ್ಲಿ ಖರ್ಚಿ ಕೊರತೆಯಿಂದಾಗಿ ರಾಯಚೂರಿನಲ್ಲಿ ಮತ ಎಣಿಕೆ ವಿಳಂಬವಾಯಿಯಿತು. ಮತಗಟ್ಟೆಗೆ ಆಗಮಿಸಿದ ಸಿಬ್ಬಂದಿಗಳಿಗೆ ಖುರ್ಚಿ ಕೊರತೆ ಕಾರಣ ಮತ ಎಣಿಕೆ ಕಾರ್ಯ ತಡವಾಗಿ ಆರಂಭವಾಯಿತು.
ರಾಯಚೂರು ಲೋಕಸಭಾ ಚುನಾವಣೆ ಹಾದಿ:
ರಾಯಚೂರು ಲೋಕಸಭಾ ಚುನಾವಣೆ 1957 ಹಾಗೂ 1962 ಕಾಂಗ್ರೆಸ್ ಜಯ ಸಾಧಿಸಿತ್ತು. 1967ರಲ್ಲಿ ಸ್ವತಂತ್ರ ಪಕ್ಷ ಅಧಿಕಾರಕ್ಕೆ ಬಂದರೆ, 1971, 1977, 1980, 1984, 1986, 1989, 1091ರಲ್ಲಿ ಸತತ ಏಳು ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂತು.
1996ರಲ್ಲಿ ಜನತಾ ದಳ, 1998, 1999, 2004ರಲ್ಲಿ ಕಾಂಗ್ರೆಸ್, 2009ರಲ್ಲಿ ಬಿಜೆಪಿ, 2014ರಲ್ಲಿ ಕಾಂಗ್ರೆಸ್, 2019ರಲ್ಲಿ ಬಿಜೆಪಿ ಅಧಿಕಾರ ಪಡೆದುಕೊಂಡಿತು.
ಕಾಂಗ್ರೆಸ್ ಭದ್ರಕೋಟೆ:
ರಾಯಚೂರು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಮಾಜಿ ಸಂಸದ ಎ.ವೆಂಕಟೇಶ ನಾಯಕ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ ಏಕೈಕ ಸಂಸದರಾಗಿದ್ದರು. ವೆಂಕಟೇಶ ನಾಯಕ ಅವರ ಪುತ್ರ ಬಿ.ವಿ.ನಾಯಕ 2014ರಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದರು. ಹಾಗಾಗಿ ಈ ಕ್ಷೇತ್ರದಲ್ಲಿ ತಂದೆಯ ಬಳಿಕ ಪುತ್ರನೂ ಸಂಸದರಾಗಿರುವುದನ್ನು ಗಮನಿಸಬಹುದು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications