Raichur Paddy: ಹಚ್ಚ ಹಸಿರಿನಿಂದ ಕಂಗೊಳಿಸಬೇಕಿದ್ದ ಭತ್ತದ ಗದ್ದೆ, ಹಳದಿ ಬಣ್ಣಕ್ಕೆ ಬದಲು- ರಾಯಚೂರಿನಲ್ಲಿ ರೈತ ಕಂಗಾಲು!
ರಾಯಚೂರು ಫೆಬ್ರವರಿ 7: ಹಚ್ಚ ಹಸಿರಿನಿಂದ ಕಂಗೊಳಿಸಬೇಕಿದ್ದ ಭತ್ತದ ಗದ್ದೆಗಳು ಸಂಪೂರ್ಣ ಒಣಗಿ ಹಳದಿ ಬಣ್ಣಕ್ಕೆ ತಿರುಗಿರುವುದು ರೈತರಲ್ಲಿ ಆತಂಕ ಮೂಡಿಸಿದೆ.
ಕವಿತಾಳ ಸಮೀಪದ ಮಲ್ಲದಗುಡ್ಡ, ಮಲ್ಲದಗುಡ್ಡ ಕ್ಯಾಂಪ್, ಸೂಸೈಟಿ ಕ್ಯಾಂಪ್ ಸೇರಿದಂತೆ ವಿವಿಧೆಡೆ ನೂರಾರು ಎಕರೆ ಪ್ರದೇಶದಲ್ಲಿ ಬೇಸಿಗೆ ಬೆಳೆಗೆ ಕೆರೆ, ಕೃಷಿ ಹೊಂಡ ಮತ್ತಿತರ ನೀರಿನ ಮೂಲ ಬಳಸಿಕೊಂಡು ಭತ್ತ ಬೆಳೆದ ರೈತರಿಗೆ ದಿಕ್ಕು ತೋಚದಂತಾಗಿದೆ.

ಮಳೆ ಕೊರತೆಯಿಂದ ತುಂಗಭದ್ರ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ತುಂಗಭದ್ರ ಎಡದಂಡೆ ಕಾಲುವೆಗೆ ನೀರು ಪೂರೈಕೆ ಸ್ಥಗಿತವಾಗಿದೆ. ರೈತರು ಜಮೀನುಗಳಲ್ಲಿ ನಿರ್ಮಿಸಿಕೊಂಡ ಕೆರೆಗಳಲ್ಲಿ ಸಂಗ್ರಹಿಸಿದ ನೀರು ಬಳಸಿಕೊಂಡು ನೂರಾರು ಎಕರೆ ಜಮೀನುಗಳಲ್ಲಿ ಎರಡು ತಿಂಗಳ ಹಿಂದೆ ಭತ್ತ ನಾಟಿ ಮಾಡಿದ್ದಾರೆ.
ಇನ್ನೂ ಒಂದೂವರೆ ತಿಂಗಳಲ್ಲಿ ಬೆಳೆ ಕೈಸೇರುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ರೈತರಿಗೆ ಇದೀಗ ಬೆಳೆ ಒಣಗುತ್ತಿರುವುದು ಅಚ್ಚರಿಯ ಜತೆಗೆ ಆತಂಕ ಉಂಟು ಮಾಡಿದೆ.
'ಕಳೆದ ಎರಡು ತಿಂಗಳ ಹಿಂದೆ ಕಾವೇರಿ ಸೋನಾ ಭತ್ತದ ಸಸಿ ನಾಟಿ ಮಾಡಿದ್ದೇವೆ. ಸಂಪ್ರದಾಯದಂತೆ ನೀರು ಹಾಯಿಸುವುದು ಮತ್ತು ಎಲ್ಲಾ ರೀತಿಯ ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ, ಕಳೆ ನಾಶಕ ಸೇರಿದಂತೆ ಮಾಮೂಲಿ ಪದ್ದತಿಯಂತೆ ಬೆಳೆ ಆರೈಕೆ ಮಾಡಿದ್ದೇವೆ. ಆದರೆ ಒಂದು ವಾರದಿಂದ ಈಚೆಗೆ ಬೆಳೆ ಒಣಗಲು ಆರಂಭಿಸಿದ್ದು ಸದ್ಯ ಬೆಂಕಿಯಲ್ಲಿ ಸುಟ್ಟಂತೆ ಒಣಗಿ ಕಡ್ಡಿಯಂತೆ ನಿಂತಿವೆ. ಹತ್ತಾರು ವರ್ಷಗಳಿಂದ ಭತ್ತ ಬೆಳೆಯುತ್ತಿದ್ದೇವೆ. ಗದ್ದೆಗಳಲ್ಲಿ ಈ ರೀತಿಯ ದೃಶ್ಯ ಕಂಡುಬಂದಿಲ್ಲ. ಇದು ವಿಚಿತ್ರ ಎನಿಸುತ್ತಿದೆ' ಎಂದು ರೈತರಾದ ಕೆ.ನಾಗೇಶ್ವರರಾವ್, ಸುಬ್ಬರಾವ್, ಬಾಲಾಜಿ, ಗೋಪಾಲಕೃಷ್ಣ ಮತ್ತು ಶಂಕರಗೌಡ ಸೈದಾಪುರ ಹೇಳಿದರು.

'ಈ ಬಗ್ಗೆ ಹಲವು ರೈತರು ಮಾಹಿತಿ ನೀಡುತ್ತಿದ್ದು ಹಿರಿಯ ಅಧಿಕಾರಿಗಳು ಈಗಾಗಲೇ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ, ರೈತರು ಲಿಖಿತ ರೂಪದಲ್ಲಿ ಮಾಹಿತಿ ನೀಡಬೇಕುʼ ಎಂದು ಸಹಾಯಕ ಕೃಷಿ ಅಧಿಕಾರಿ ಮಾರುತಿ ನಾಯಕ ಹೇಳಿದರು.
ಅಂದಾಜು 20 ಎಕರೆ ಜಮೀನಿನಲ್ಲಿ ಭತ್ತ ನಾಟಿ ಮಾಡಿದ್ದೇನೆ. ಪ್ರತಿ ಎಕರೆಗೆ ₹30ರಿಂದ ₹35 ಸಾವಿರ ಖರ್ಚು ತಗುಲಿದೆ. ಈಗ ಬೆಳೆ ಒಣಗಿರುವುದು ನಷ್ಟ ಅನುಭವಿಸುವಂತಾಗಿದೆ ಎಂದು ಮಲ್ಲದಗುಡ ಕ್ಯಾಂಪ್ ರೈತ ಕೆ.ವಾಸು ಆರೋಪ.
ಮಳೆ ಕೊರತೆಯಿಂದ ಮಳೆಗಾಲದ ಬೆಳೆಯ ಇಳುವರಿ ಕಡಿಮೆ ಬಂದಿದೆ. ಈಗ ಬೇಸಿಗೆ ಬೆಳೆ ಕೈಕೊಟ್ಟಿದ್ದು ತೀವ್ರ ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಮಲ್ಲದಗುಡ್ಡ ರೈತ ಬಿ.ವೆಂಕಟೇಶ ಒತ್ತಾಯಿಸಿದರು.
ಈ ಬಾರಿ ಹವಾಮಾನ ವೈಪರೀತ್ಯ, ಬರ ಆತಂಕದ ನೇರ ಪರಿಣಾಮ ಭತ್ತದ ಬೆಳೆ ಮೇಲೆ ಬಿದ್ದಿದೆ. ಒಂದೆಡೆ ವಿಪರೀತ ನೆರೆಯಾದರೆ, ಇನ್ನೊಂದೆಡೆ ಬರದ ಛಾಯೆ ಭತ್ತ ಕೃಷಿಕರನ್ನು ಹೈರಾಣಾಗಿಸಿದೆ. ಇದರಿಂದ ರಾಜ್ಯದಲ್ಲಿ ಅಕ್ಕಿಯ ಉತ್ಪಾದನೆ ಕಡಿಮೆಯಾಗಿ, ದರವೂ ಏರುಮುಖವಾಗಿ ಸಾಗಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications