ಅನ್ನಭಾಗ್ಯ ಅಕ್ಕಿ ಬದಲು ಹಣ: ಆಧಾರ್ ಜೋಡಣೆ, ಬ್ಯಾಂಕ್ ಖಾತೆ ತೆರೆಯಲು ಡೆಡ್ಲೈನ್ ನೀಡಿದ ಜಿಲ್ಲಾಡಳಿತ
ರಾಯಚೂರು, ಜುಲೈ 17: ಗ್ಯಾರೆಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಬ್ಯಾಂಕ್ ಖಾತೆಗೆ ತಲಾ 170 ರೂಪಾಯಿ ನಗದು ವರ್ಗಾವಣೆ ಮಾಡುವ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ ಬೆನ್ನಲ್ಲೇ ಜಿಲ್ಲೆಯಾದ್ಯಂತ ಸಾರ್ವಜನಿಕರು ಬ್ಯಾಂಕ್ ಖಾತೆಗೆ ಆಧಾರ್ ಸೇರಿದಂತೆ ಇ-ಕೆವೈಸಿ ಮಾಡಲು ಅಂಚೆ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕುಗಳ ಮೊರೆ ಹೋಗುತ್ತಿದ್ದಾರೆ.
5ಕೆ.ಜಿ ಅಕ್ಕಿ ಬದಲು ಹಣ ಪಡೆಯಲು ಸರ್ಕಾರ ಜುಲೈ 20ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಿದ್ದು ಪಡಿತರ ಚೀಟಿದಾರರು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಜೊತೆಗೆ ಇ-ಕೆವೈಸಿ ಮಾಡಿಸಿರುವವರಿಗೆ ನಗದು ವರ್ಗಾವಣೆ ಮಾಡಲಾಗಿದ್ದು ಅದರಂತೆ ಜಿಲ್ಲೆಯಲ್ಲಿ 4.53 ಲಕ್ಷ ಆದ್ಯತಾ ಪಡಿತರ ಚೀಟಿಗಳ ಪೈಕಿ 3.37 ಲಕ್ಷ ಪಡಿತರ ಚೀಟಿದಾರರಿಗೆ 19.72 ಕೋಟಿ ರೂಪಾಯಿ ನಗದು ವರ್ಗಾವಣೆ ಮಾಡಲಾಗಿದೆ.

ಪಡಿತರ ಚೀಟಿದಾರರಿಗೆ ಬ್ಯಾಂಕ್ ಖಾತೆ ಸಕ್ರಿಯ , ಆಧಾರ ಜೋಡಣೆ ಇ-ಕೆವೈಸಿ ಮಾಡಿಸಲು ಅಂಚೆ ಇಲಾಖೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಪರಿಹಾರ ಮಾಡಲು ನ್ಯಾಯಬೆಲೆ ಅಂಗಡಿ ಮಾಲೀಕರು ಸಭೆ ನಡೆಸಿ ಬ್ಯಾಂಕ್ ಖಾತೆ ಇಲ್ಲದ ಪಡಿತರದಾರರಿಗೆ ಬ್ಯಾಂಕ್ ಖಾತೆ ಇಲ್ಲದ ಪಡಿತರದಾರರಿಗೆ ಬ್ಯಾಂಕ್ ಖಾತೆ ಮಾಡಿಸಲು ಹಾಗೂ ಆಧಾರ್ ಜೋಡಣೆ ಮಾಡಿಸುವಂತೆ ಸೂಚನೆ ನೀಡಿದ್ದಾರೆ. ಅಂತಹ ಪಡಿತರ ಚೀಟಿದಾರರ ಪಟ್ಟಿಯನ್ನು ನ್ಯಾಯಬೆಲೆ ಅಂಗಡಿ ಮುಂದೆ ಲಗತ್ತಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ಆಧಾರ್ ಜೋಡಣೆಯಾಗದೆ ಇರುವುದರಿಂದ ಜಿಲ್ಲೆಯ ಪಡಿತರದಾರರಿಗೆ ಸಮಸ್ಯೆ ಎದುರಾಗಿದ್ದು, ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಪೈಕಿ 40,925 ಕುಟುಂಬದವರು ಬ್ಯಾಂಕ್ ಖಾತೆ ಹೊಂದಿಲ್ಲ. 8,353 ಜನರ ಬ್ಯಾಂಕ್ ಖಾತೆಗಳು ಸಕ್ರಿಯವಾಗಿಲ್ಲ . 227 ಪಡಿತರದಾರರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿಲ್ಲ. ಇದರಿಂದಾಗಿ 49,505 ಪಡಿತರದಾರರಿಗೆ ನಗದು ವರ್ಗಾವಣೆ ಮಾಡಲು ಸಮಸ್ಯೆಯಾಗಿದೆ.

ನಗದು ವರ್ಗಾವಣೆಗಾಗಿ ಬ್ಯಾಂಕ್ ಖಾತೆ ಹೊಂದಿರದ ಪಡಿತರ ಚೀಟಿದಾರರು ಬ್ಯಾಂಕ್ ಖಾತೆ ತೆರೆಯಲು ಅನುಕೂಲವಾಗುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಅಂಚೆ ಇಲಾಖೆ ಸಹಯೋಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶಿಬಿರಗಳನ್ನು ಆಯೋಜಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಖಾತೆ ತೆಗೆಯುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನ್ಯಾಯಬೆಲೆ ಅಂಗಡಿ ಮಾಲೀಕರ ನೆರವಿನೊಂದಿಗೆ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾತೆ ತೆರೆಯಲು ಪಡಿತರ ಚೀಟಿದಾರರಿಗೆ ಮಾಹಿತಿ ನೀಡುವ ಕೆಲಸ ಜೋರಾಗಿ ಸಾಗಿದೆ. ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಡಂಗೂರ ಸಾರಿ ಜಾಗೃತಿ ಮೂಡಿಸುವ ಕಾರ್ಯ ಚುರುಕುಗೊಂಡಿದೆ.
ದೇವದುರ್ಗ ತಾಲೂಕಿನನಲ್ಲಿ 5,199 ಪಡಿತರದಾರರು ಬ್ಯಾಂಕ್ ಖಾತೆ ಹೊಂದಿಲ್ಲ. 1,135 ಪಡಿತರದಾರರ ಖಾತೆಗಳು ಸಕ್ರಿಯವಾಗಿಲ್ಲ. ಲಿಂಗಸೂಗೂರು ತಾಲೂಕಿನಲ್ಲಿ 10,593 ಪಡಿತರದಾರರು ಬ್ಯಾಂಕ್ ಖಾತೆ ಹೊಂದಿಲ್ಲ. 1,675 ಜನರ ಬ್ಯಾಂಕ್ ಖಾತೆಗಳು ಸಕ್ರಿಯವಾಗಿಲ್ಲ. ಮಾನ್ವಿ ತಾಲೂಕಿನಲ್ಲಿ 6,524 ಪಡಿತರದಾರರು ಬ್ಯಾಂಕ್ ಖಾತೆ ಹೊಂದಿಲ್ಲ. 1,452 ಖಾತೆಗಳು ಸಕ್ರಿಯವಾಗಿಲ್ಲ. ರಾಯಚೂರು ತಾಲೂಕಿನಲ್ಲಿ 10,947 ಪಡಿತರದಾರರು ಬ್ಯಾಂಕ್ ಖಾತೆ ಹೊಂದಿಲ್ಲ. 2,350 ಖಾತೆಗಳು ಸಕ್ರಿಯವಾಗಿಲ್ಲ. ಸಿಂಧನೂರು ತಾಲೂಕಿನಲ್ಲಿ 6,662 ಪಡಿತರದಾರರು ಬ್ಯಾಂಕ್ ಖಾತೆ ಹೊಂದಿಲ್ಲ. 1,741 ಖಾತೆಗಳು ಸಕ್ರಿಯವಾಗಿಲ್ಲ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.
ಪಡಿತರ ಚೀಟಿದಾರರು ನಗದು ವರ್ಗಾವಣೆ ಸೌಲಭ್ಯ ಪಡೆಯಲು ರಾಷ್ಟ್ರೀಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಇ-ಕೆವೈಸಿ ಮಾಡಿಕೊಳ್ಳಬೇಕು. ಪ್ರಸ್ತುತ ಬ್ಯಾಂಕ್ ಖಾತೆ ಮಾಹಿತಿ ಸರಿಯಿರುವ ಪಡಿತರದಾರರಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಹೇಳಿದರು.
ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ಮಾಡದಿರುವ ಪಡಿತರ ಚೀಟಿದಾರರ ಮಾಹಿತಿ ತೆಗೆದುಕೊಂಡು ಅಂಚೆ ಇಲಾಖೆ ಮೂಲಕ ಶಿಬಿರ ನಡೆಸಿ ಪಡಿತರ ಚೀಟಿದಾರರ ಖಾತೆ ತೆರೆಯಲು ಅಭಿಯಾನ ನಡೆಸಲಾಗುತ್ತಿದೆ. ಹಳ್ಳಿಗರು ವಂಚಿತರಾಗಬಾರದು ಎಂಬ ಕಾರಣಕ್ಕೆ ವೈವಿಧ್ಯಮವಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಶಾವಂತಗೇರಿ ಹೇಳಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications