Raichur: ಭತ್ತದ ಬೆಳೆಯಲ್ಲಿ ಮೂಡಿದ ದೊಡ್ಮನೆ ಹುಡುಗ- ಅಪ್ಪು ಅಭಿಮಾನಿಯಿಂದ ವಿಭಿನ್ನ ಕಲೆ
ಅಪ್ಪು.... ಈ ಹೆಸರಲ್ಲಿ ಅದೇನೋ ಶಕ್ತಿ ಇದೆ. ಅಪ್ಪು.... ಅಂತ ಕರೆದರೆ ಪ್ರೀತಿ ತೋರಿಸುವ ಮನಸ್ಸಾಗುತ್ತದೆ. ಗಟ್ಟಿಯಾಗಿ ತಬ್ಬಿಕೊಂಡು ನಗು ನಗುತಾ ಮಾತನಾಡುವ ಆಸೆಯಾಗುತ್ತದೆ. ಇದೇ ಈ ಹೆಸರಿನಲ್ಲಿರುವ ತಾಕತ್ತು. ಚಂದನವನದ ಚಂದದ ಗುಡಿ, ದೊಡ್ಮನೆಯ ಕಣ್ಮಣಿ ಪುನೀತ್ ರಾಜಕುಮಾರ್ ಅವರು ಅಗಲಿ ಅಕ್ಟೋಬರ್ಗೆ ಎರಡು ವರ್ಷಗಳು ಕಳೆಯುತ್ತವೆ. ಆದರೆ ಅವರ ಮೇಲಿರುವ ಅಭಿಮಾನ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ. ಇದಕ್ಕೆ ಸಾಕ್ಷಿ ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ ಅಪ್ಪುವಿನ ಚಿತ್ರ.
ಹೌದು... ಅಪ್ಪುವಿನ ಅಪ್ಪಟ ಅಭಿಮಾನಿ ರೈತ ಹಾಗೂ ಕಲಾವಿದರಾದ ಸತ್ಯನಾರಾಯಣ ಅವರು ವಿಭಿನ್ನ ಕಲೆಯ ಮೂಲಕ ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸಿದ್ದಾರೆ. ಸಿರವಾರ ತಾಲೂಕಿನ ಡೋಣಿ ಬಸವಣ್ಣ ಕ್ಯಾಂಪ್ನ ರೈತನಾಗಿರುವ ಅಭಿಮಾನಿ ಸತ್ಯನಾರಾಯಣ ಅವರು ತಮ್ಮ ಭತ್ತದ ಗದ್ದೆಯಲ್ಲಿ ಅಪ್ಪುವಿನ ವಿತ್ರವನ್ನು ಬಿಡಿಸುವ ಮೂಲಕ ಮುನ್ನಲೆಗೆ ಬಂದಿದ್ದಾರೆ.

ಸತ್ಯನಾರಾಯಣ ಅವರು ತಮ್ಮ ಎರಡು ಎಕರೆ ಗದ್ದೆಯಲ್ಲಿ ಜಪಾನ್ ತಂತ್ರಜ್ಞಾನ ಮೂಲಕ ವಿವಿಧ ಭತ್ತದ ತಳಿಗಳನ್ನು ಬೆಳೆದು ಅಪ್ಪುವಿನ ಚಿತ್ರ ಬಿಡಿಸುವ ಮೂಲಕ ಅಪ್ಪು ಅಭಿಮಾನಿಗಳ ಕಣ್ಣಂಚಲ್ಲಿ ನೀರು ತರಿಸಿದ್ದಾರೆ. ಸತ್ಯನಾರಾಯಣ ಅವರ ಅಪ್ಪು ಮೇಲಿನ ಅಭಿಮಾನಕ್ಕೆ ನೋಡುಗರ ಕಣ್ತುಂಬಿ ಬಂದಿದೆ.
ರಾಜ್ಯದಲ್ಲಿ ಅದರಲ್ಲೂ ರಾಯಚೂರು ಜಿಲ್ಲೆಯಲ್ಲಿ ಮಳೆಯ ಅಭಾವ ಹೆಚ್ಚಾಗಿದೆ. ರೈತರು ಬೆಳೆ ಬೆಳೆಯಲು ಕಷ್ಟದ ಅವಧಿ ಇದಾಗಿದೆ. ಹೀಗಿರುವಾಗ ಟ್ಯಾಂಕರ್ ಮೂಲಕ ಗದ್ದೆಗೆ ನೀರು ಹಾಯಿಸಿ ಸುಮಾರು ಮೂರು ಲಕ್ಷ ರೂ. ಖರ್ಚು ಮಾಡಿ, ನಿತ್ಯ ನಿಗಾವಹಿಸಿ 90 ದಿನದ ಬೆಳೆಯಲ್ಲಿ ಈ ಕಲಾಚಿತ್ರವನ್ನು ಸತ್ಯನಾರಾಯಣ ಮೂಡಿಸಿದ್ದಾರೆ. ತೆಲಂಗಾಣ, ಗುಜರಾತ್ನಿಂದ ತಂದ ಕಾವೇರಿ, ಗೋಲ್ಡನ್ ರೋಸ್, ಕಾಲ ಭಟ್ಟಿ ಹೆಸರಿನ 100 ಕೆ.ಜಿ ಭತ್ತದ ಬೀಜಗಳನ್ನು ನೆಟ್ಟು ಸಾವಯವ ಪದ್ಧತಿಯಲ್ಲಿ ಬೆಳೆದು ಅಪ್ಪು ಮೇಲಿನ ಅಭಿಮಾನ ಮೆರೆದಿದ್ದಾರೆ.
ಭಾವಚಿತ್ರದ ಕೆಳಗೆ 'ಕರ್ನಾಟಕ ರತ್ನ' ಅನ್ನೋ ಅಕ್ಷರಗಳನ್ನೂ ಬೆಳೆಯಲ್ಲೇ ಬರೆದಿದ್ದಾರೆ. ಒಂದೊಂದು ಅಕ್ಷರ 40 ಅಡಿ ಇದೆ. ತನ್ನ ಅಂಗವೈಕಲ್ಯ ಮೆಟ್ಟಿ ನಿಂತು ಉತ್ತಮ ಬೆಳೆ ಬೆಳೆಯುವ ಮೂಲಕ ಅಪ್ಪು ದ್ವಿತೀಯ ಪುಣ್ಯಸ್ಮರಣೆಗೆ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ ಸತ್ಯನಾರಾಯಣ.
ಸತ್ಯನಾರಾಯಣ ಅವರು ಅಪ್ಪು ಮೇಲಿಟ್ಟಿರುವ ಅಭಿಮಾನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಡೀ ಗ್ರಾಮವೇ ಅವರ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದೆ. ಚಪ್ಪಲಿ ಹಾಕದೆ ಬರಿಗಾಲಲ್ಲೇ ಉಳುಮೆ ಮಾಡಿರುವ ರೈತ ಗದ್ದೆಗೆ ಪೂಜೆ ಮಾಡುವ ಮೂಲಕ ಅಪ್ಪು ಮೇಲೆ ಅಭಿಮಾನದ ಭಕ್ತಿ ತೋರಿದ್ದಾರೆ. ಸಾಮಾಣ್ಯ ಕಣ್ಣಿಗೆ ಕಪ್ಪು, ಹಸಿರು ಬೆಳೆ ಮಾತ್ರ ಕಾಣುತ್ತಿದ್ದರೂ ಡ್ರೋನ್ ಕ್ಯಾಮೆರಾ ಕಣ್ಣಲ್ಲಿ ಅಪ್ಪು ಚಿತ್ರ ಆಕರ್ಷಕವಾಗಿ ಮೂಡಿಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications