ರಾಯಚೂರು: ಮೂಳೆ ಮುರಿತಕ್ಕೆ ಉಚಿತ ಚಿಕಿತ್ಸೆ ನೀಡುವ ನಾಟಿ ವೈದ್ಯ
ರಾಯಚೂರು, ಅಕ್ಟೋಬರ್ 16: ಮೂಳೆ ಮುರಿದಾಗ ಖಾಸಗಿ ವೈದ್ಯರ ಬಳಿ ಹೋದರೆ ಲಕ್ಷಾಂತರ ರೂಪಾಯಿ ಹಣ ಪೀಕುತ್ತಾರೆ. ಆದರೆ, ರಾಯಚೂರಿನ ನಾಟಿ ವೈದ್ಯ ಕೇವಲ ಉಚಿತವಾಗಿ ಚಿಕಿತ್ಸೆ ನೀಡುವ ಮೂಲಕ ಎಲ್ಲರಿಗೆ ನೆರವಾಗುತ್ತಿದ್ದಾರೆ.
ದೇಹದ ಯಾವುದೇ ಭಾಗದ ಮೂಳೆ ಮುರಿದರೂ, ರಾಯಚೂರಿನ ಈ ನಾಟಿ ವೈದ್ಯರು ಕೇವಲ ಮೂರು-ನಾಲ್ಕು ವಾರಗಳಲ್ಲಿ ಸರಳ ಚಿಕಿತ್ಸೆ ಮೂಲಕ ಗುಣಮುಖರನ್ನಾಗಿ ಮಾಡುತ್ತಾರೆ. ಇವರ ಚಿಕಿತ್ಸೆಯಿಂದ ಅನೇಕರು ಗುಣಮುಖರಾಗಿದ್ದಾರೆ.
ಆಯುರ್ವೇದ ಚಿಕಿತ್ಸೆ ಎನ್ನುವುದು ಕೆಲವೇ ಕೆಲ ವ್ಯಕ್ತಿಗಳಿಗೆ ತಿಳಿದಿರುತ್ತದೆ. ಈ ರೀತಿ ತಮ್ಮ ಹಿರೀಕರಿಂದ ಕಲಿತ ವಿದ್ಯೆಯನ್ನು ಉರುಕುಂದಪ್ಪ ಬಡಿಗೇರ್ ಎನ್ನುವವರು ಬಡವರಿಗೆ ಸಹಾಯವಾಗಲಿ ಎಂದು ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ.

ಮೂಳೆ ಮುರಿತಕ್ಕೆ ಉಚಿತ ಚಿಕಿತ್ಸೆ
ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದ ಉರುಕುಂದಪ್ಪ ಬಡಿಗೇರ್ ಎಂಬುವರು ತಮ್ಮ ಉಚಿತ ಸೇವೆಯಿಂದ ಹೆಸರುವಾಸಿಯಾಗಿದ್ದಾರೆ. ಬಡವರ ಪಾಲಿಗೆ ದೇವರಂತೆ ಕೆಲಸ ಮಾಡುತ್ತಿರುವ ಉರುಕುಂದಪ್ಪ ಬಡಿಗೇರ್, ಮೂಳೆ ಮುರಿತಕ್ಕೆ ಚಿಕಿತ್ಸೆ ನೀಡುತ್ತಾರೆ. ಗಿಡಮೂಲಿಕೆಗಳಿಂದ ಔಷಧ ನೀಡುವ ಇವರು, ನಿಗದಿತ ಸಮಯದಲ್ಲೇ ಮೂಳೆ ಮುರಿತವನ್ನು ಗುಣ ಮಾಡುತ್ತಾರೆ. ತಮಗೆ ಪಾರಂಪರಿಕವಾಗಿ ಬಂದ ಈ ಕಲೆಯನ್ನು ಜನರಿಗೆ ಉಪಯೋಗವಾಗಲು ಉರುಕುಂದಪ್ಪ ಬಡಿಗೇರ್ ಬಳಸಿಕೊಳ್ಳುತ್ತಿದ್ದಾರೆ.

ವೃತ್ತಿಯಲ್ಲಿ ಬಡಗಿ ಪ್ರವೃತ್ತಿಯಲ್ಲಿ ನಾಟಿ ವೈದ್ಯ
ಉರುಕುಂದಪ್ಪ ಬಡಿಗೇರ್ ಇವರು ವೃತ್ತಿಯಲ್ಲಿ ಬಡಗಿಯಾಗಿದ್ದಾರೆ. ಜೊತೆಗೆ ಕಳೆದ ಮೂವತ್ತು ವರ್ಷಗಳಿಂದ ವಂಶ ಪರಂಪರಾಗತವಾಗಿ ನಾಟಿ ಚಿಕಿತ್ಸೆ ನೀಡುತ್ತಿದ್ದಾರೆ. ತಮ್ಮ ಚಿಕಿತ್ಸೆ ಮೂಲಕ ಉರುಕುಂದಪ್ಪ ಬಡಿಗೇರ್ ರಾಯಚೂರು ಸೇರಿದಂತೆ ತೆಲಂಗಾಣ ರಾಜ್ಯದ ವಿವಿಧ ಗ್ರಾಮಗಳ ಜನರಿಗೆ ಸಂಜೀವಿನಿಯಾಗಿದ್ದಾರೆ. ಬೇರೆ ಬೇರೆ ಊರುಗಳಿಂದ ಇವರ ಚಿಕಿತ್ಸೆಗಾಗಿ ಜನ ಹುಡುಕಿಕೊಂಡು ಬರುತ್ತಾರೆ.

ಉರುಕುಂದಪ್ಪ ಬಡಿಗೇರ್ ಕೈಗುಣಕ್ಕೆ ಜನ ಮೆಚ್ಚುಗೆ
ಉರುಕುಂದಪ್ಪ ಬಡಿಗೇರ್ ಅವರು ಕೇವಲ ಎಣ್ಣೆಯಿಂದ ಮಸಾಜ್ ಮಾಡಿ ಮುರಿದಂತಹ ಕೈ ಕಾಲುಗಳಿಗೆ ಕೈಕಟ್ಟು ಕಟ್ಟುವುದರ ಮೂಲಕ ಸರಿಪಡಿಸುತ್ತಾರೆ. ಬಳಿಕ ಮೂಳೆ ಮುರಿತ ಪರೀಕ್ಷಿಸಿ, ಮೂಳೆ ಜೋಡಣೆ ಮಾಡುತ್ತಾರೆ. ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗದ ಜನರೂ ಇವರ ಬಳಿ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಉರುಕುಂದಪ್ಪ ಬಡಿಗೇರ್ ಅವರು ತಾವು ಬಳಸುವ ಎಣ್ಣೆಯ ಹಣವನ್ನು ಪಡೆಯದೇ ಜನರಿಗೆ ಚಿಕಿತ್ಸೆ ನೀಡುತ್ತಾರೆ.

ಎಣ್ಣೆ ಮಸಾಜ್ನಿಂದಲೇ ಉಳುಕು ಗುಣಮುಖ
ಕೈಕಾಲು ಮುರಿದರೆ, ಉಳುಕಿದರೆ ಎಣ್ಣೆಯಿಂದ ಮಸಾಜ್ ಮಾಡುವಂತಹ ಕೆಲಸದ ಮೂಲಕ ಚಿಕಿತ್ಸೆ ನೀಡುತ್ತಿದ್ದಾರೆ . ಉರುಕುಂದಪ್ಪ ಬಡಿಗೇರ್ ಅವರು ತಮ್ಮ ದೊಡ್ಡಪ್ಪನವರಿಂದ ಈ ಚಿಕಿತ್ಸೆ ನೀಡುವುದನ್ನು ಕಲಿತು ಮುಂದುವರಿಸಿದ್ದಾರೆ. ಇವರು ತಮ್ಮ ಸೇವೆಗೆ ಯಾವುದೇ ಹಣ ಪಡೆಯುವುದಿಲ್ಲ. ಯಾವುದೇ ಔಷದ ಬಳಸದೆ ಕೇವಲ ಎಣ್ಣೆಯಿಂದ ಮಸಾಜ್ ಮಾಡಿ ಮುರಿದಂತಹ ಕೈ ಕಾಲುಗಳಿಗೆ ಕೈಕಟ್ಟು ಕಟ್ಟುವುದರ ಮೂಲಕ ಸರಿಪಡಿಸುತ್ತಾರೆ. ಸುತ್ತಮುತ್ತಲಿನ ಗ್ರಾಮಗಳಿಂದ ಅನೇಕ ಜನರು ಇಲ್ಲಿಗೆ ಬಂದು ಚಿಕಿತ್ಸೆ ಪಡೆದು ಸರಿ ಹೋದಂತಹ ಸಾಕಷ್ಟು ಉದಾಹರಣೆಗಳು ಇವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications