ಭಾರೀ ಮಳೆ: ನಾರಾಯಣಪುರ ಜಲಾಶಯ ಭರ್ತಿ, ಕೃಷ್ಣಾ ನದಿಗೆ ನೀರು ಬಿಡುಗಡೆ
ಯಾದಗಿರಿ, ಆಗಸ್ಟ್ 09: ನೆರೆರಾಜ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾರಾಯಣಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಯಿತು.
ನಾರಾಯಣಪುರ ಜಲಾಶಯದಿಂದ 2 ಲಕ್ಷ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಇಷ್ಟು ನೀರು ಬಿಟ್ಟರೂ ಜನರು ತಮ್ಮ ಪ್ರಾಣ ಪಣಕ್ಕಿಟ್ಟು ತೆಪ್ಪದಲ್ಲಿ ಓಡಾಡುತ್ತಿದ್ದಾರೆ.
ಇದು ಲಿಂಗಸೂಗೂರು ತಾಲೂಕಿನ ಕಡದರಗಡ್ಡಿ ಗ್ರಾಮಸ್ಥರ ನಿತ್ಯದ ಗೋಳಾಗಿದೆ. ಗೋನವಾಟ್ಲ ಗ್ರಾಮದಿಂದ ಕಡದರಗಡ್ಡಿಗೆ ತೆಪ್ಪದಲ್ಲಿಯೇ ಓಡಾಟ ನಡೆಸಬೇಕಾಗಿದೆ. ಸೇತುವೆ ಇಲ್ಲದಿರುವುದಕ್ಕೆ ಜನರು ಹಿಡಿಶಾಪ ಹಾಕುತ್ತಾ ಜೀವಪಣಕ್ಕೆ ಇಟ್ಟು ತೆಪ್ಪದಲ್ಲಿ ಓಡಾಟ ನಡೆಸುತ್ತಿದ್ದಾರೆ.

ಶೀಲಹಳ್ಳಿ ಸೇತುವೆ ಮುಳುಗಡೆಯಿಂದ ಕಡದರಗಡ್ಡಿ ಗ್ರಾಮದ ಸಂಪರ್ಕ ರಸ್ತೆ ಕಡಿತಗೊಂಡಿದ್ದು, ಕಡದರಗಡ್ಡಿಯಿಂದ ಲಿಂಗಸೂಗೂರಿಗೆ ಸುತ್ತಿಕೊಂಡು ಹೋಗುವ ಬದಲು ಜೀವದ ಹಂಗು ತೊರೆದು ತೆಪ್ಪದಲ್ಲಿ ಕುಳಿತು ತುಂಬು ನದಿಯಲ್ಲಿಯೇ ಹರಸಾಹಸ ಪಡುತ್ತಿದ್ದಾರೆ.
ಕಡದರಗಡ್ಡಿ ಹಾಗೂ ಗೋನವಾಟ್ಲಗೆ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು, ಕೊಟ್ಟ ಭರವಸೆಯಂತೆ 4 ಕೋಟಿ ರೂ. ಹಣ ಸಹ ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಿಂದ ಬಿಡುಗಡೆಯೂ ಆಗಿದೆ. ಆದರೆ ಸೇತುವೆ ನಿರ್ಮಾಣಕ್ಕೆ 18 ಕೋಟಿ ರುಪಾಯಿ ವೆಚ್ಚ ಸಾಧ್ಯತೆ ಹಿನ್ನಲೆಯಲ್ಲಿ ಸೇತುವೆ ನಿರ್ಮಾಣ ಕಾರ್ಯ ಆರಂಭವಾಗಿಲ್ಲ.
ಇನ್ನು ನಾರಾಯಣಪುರ ಜಲಾಶದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದರ ಪರಿಣಾಮ, ಪ್ರವಾಹದ ತಪ್ಪಲು ನಡುಗಡ್ಡೆಯಲ್ಲಿ ಕುರಿಗಾಹಿ 230 ಕುರಿಗಳೊಂದಿಗೆ ಸಿಲುಕಿಕೊಂಡಿದ್ದಾನೆ.
ಕುರಿಗಾಹಿಯ ರಕ್ಷಣೆಗೆ ನದಿ ತೀರಕ್ಕೆ ಕೇಂದ್ರದ ಎನ್.ಡಿ.ಆರ್.ಎಫ್ ನ 16 ಜನರ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯ ತೀವ್ರ ಗತಿಯಲ್ಲಿ ಸಾಗಿದೆ. ಸದ್ಯಕ್ಕೆ ಜಲಾಶಯದಿಂದ ನದಿಗೆ ಹರಿವು 2.20 ಲಕ್ಷ ಕ್ಯೂಸೆಕ್ ನಿಂದ 1.79 ಲಕ್ಷ ಕ್ಯೂಸೆಕ್ ಗೆ ಇಳಿಕೆ ಮಾಡಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications