ಉಷ್ಣ ವಿದ್ಯುತ್ ಉತ್ಪಾದನೆ ಹೆಚ್ಚಳ, ಬೇಸಿಗೆಯಲ್ಲೂ ರಾಜ್ಯ ನಿರಾಳ
ಬೆಂಗಳೂರು, ಏಪ್ರಿಲ್ 26: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎಲ್ಲ ಎಂಟು ಘಟಕಗಳು ಉತ್ಪಾದನೆಯಲ್ಲಿ ತೊಗಡಿದ್ದು, ಬೇಸಿಗೆ ಬವಣೆ ತಪ್ಪಿಸಲು ಹರಸಾಹಸ ಪಡುತ್ತಿದೆ.
ಕಳೆದ ಆರು ತಿಂಗಳಲ್ಲಿ ಆರ್ಟಿಪಿಎಸ್ ನ ಎಲ್ಲ ಘಟಕಗಳು ವಿದ್ಯುತ್ ಉತ್ಪಾದಿಸುತ್ತಿರುವುದು ಇದೇ ಮೊದಲು, ಬಿರುಬಿಸಿಲ ಬೇಸಿಗೆಯ ದಿನಗಳಲ್ಲಿ ರಾಜ್ಯದ ಬೇಡಿಕೆಯ ವಿದ್ಯುತ್ ಒದಗಿಸಲು ಹೆಣಗಾಡುತ್ತಿದ್ದ ಕರ್ನಾಟಕ ವಿದ್ಯುತ್ ನಿಗಮ ಸದ್ಯ ನಿಟ್ಟುಸಿರು ಬಿಟ್ಟಿದೆ.
ರಾಜ್ಯದಲ್ಲಿ ಗರಿಷ್ಠ ತಾಪಮಾನ 40ರ ಗಡಿ ದಾಟಿ ಆಗಲೇ ಒಂದು ತಿಂಗಳು ಕಳೆದಿದೆ. ವಿದ್ಯುತ್ ಉತ್ಪಾದನೆ ಕೊರತೆ ಹಿನ್ನೆಲೆಯಲ್ಲಿ ಈಗಾಗಲೇ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿಯಲ್ಲಿದೆ. ವಿದ್ಯುತ್ ಕಾಮಗಾರಿ ದುರಸ್ತಿ ನೆಪದಲ್ಲಿ ಎಸ್ಕಾಂಗಳು ರಾಜ್ಯದ ನಾನಾ ಕಡೆ ದಿನವಿಡೀ ವಿದ್ಯುತ್ ಕಡಿತಗೊಳಿಸಿ ಪೂರೈಸಿ ಸರಿದೂಗಿಸುತ್ತಿವೆ.

ಫೆಬ್ರವರಿಯಿಂದ ಹೆಚ್ಚಿದ ಬೇಡಿಕೆ: ಕಳೆದ ಫೆಬ್ರವರಿಯಿಂದಲೇ ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆ ಪ್ರಮಾಣ 10,200 ಮೆಗಾ ವ್ಯಾಟ್ ತಲುಪಿದೆ. ಇದುವರೆಗಿನ ಅತೀ ಹೆಚ್ಚಿನ ವಿದ್ಯುತ್ ಬೇಡಿಕೆಯ ದಾಖಲೆ ಕೂಡ ಈ ವರ್ಷದ್ದೇ ಆಗಿದೆ.
ದಿನದ ಗರಿಷ್ಠ ಸಾರ್ವಕಾಲಿಕ ದಾಖಲೆ 10,881 ಮೆಗಾ ವ್ಯಾಟ್ ಕಳೆದ ತಿಂಗಳಾಂತ್ಯಕ್ಕೆ ದಾಖಲಾಗಿ ಕೆಪಿಸಿ ಅಧಿಕಾರಿಗಳ ನಿದ್ದೆಗೆಡಿಸಿತ್ತು. ಆದರೆ ಅನಂತರ ರಾಜ್ಯದ ನಾನಾ ಕಡೆ ಬಿದ್ದ ಮಳೆ ಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications