Raichur: ಆರ್ಟಿಪಿಎಸ್, ವೈಟಿಪಿಎಸ್, ಕುಗ್ಗಿದ ವಿದ್ಯುತ್ ಬೇಡಿಕೆ
ರಾಯಚೂರು ಜು.04: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆರ್ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಬೇಡಿಕೆ ಕುಸಿತವಾಗಿದೆ. ಇದರಿಂದಾಗಿ ಆರ್ಟಿಪಿಎಸ್ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.
ರಾಜ್ಯದ ಎಲ್ಲೆಡೆ ಮಳೆಯಾಗುತ್ತಿರುವುದರಿಂದ ಜಲ ವಿದ್ಯುತ್ ಘಟಕಗಳ ಉತ್ಪಾದನೆ ಮತ್ತು ಪವನ್ ಗಾಳಿ (ವಿಂಡೋ)ಯಿಂದ ವಿದ್ಯುತ್ ಹೆಚ್ಚಳವಾಗಿರುವುದರಿಂದ, ಬೇಸಿಗೆಯಲ್ಲಿ ಆರ್ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಮೇಲಿದ್ದ ಒತ್ತಡ ಈಗ ಕಡಿಮೆಯಾಗಿದೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಒಟ್ಟು ಎಂಟು ವಿದ್ಯುತ್ ಘಟಕಗಳ ಪೈಕಿ ಆರು ವಿದ್ಯುತ್ ಘಟಕಗಳಿಂದ ಉತ್ಪಾದನೆ ಮಾಡಲಾಗುತ್ತಿದೆ. 210 ಮೆಗಾವ್ಯಾಟ್ ಸಾಮರ್ಥ್ಯದ 7ನೇ ವಿದ್ಯುತ್ ಘಟಕ ವಾರ್ಷಿಕ ನಿರ್ವಹಣೆಗಾಗಿ ಬಂದ್ ಮಾಡಲಾಗಿದೆ. ಒಟ್ಟು 1720ಮೆಗಾವ್ಯಾಟ್ ಸಾಮರ್ಥ್ಯದಲ್ಲಿ ಈಗ ಇನ್ನೂಳಿದ ವಿದ್ಯುತ್ ಘಟಕಗಳಿಂದ ಒಟ್ಟು 853 ಮೆಗಾವ್ಯಾಟ್ ಉತ್ಪಾದನೆ ಆಗುತ್ತಿದೆ.
ಮೂರು ವರ್ಷಗಳಿಂದ 210 ಮೆಗಾವ್ಯಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದ ಉತ್ಪಾದನೆ ಬಂದ್ ಮಾಡಲಾಗಿದೆ. ಯರಮರಸ್ ಶಾಖೋತ್ಪನ್ನ ವಿದ್ಯುತ್ (ವೈಟಿಪಿಎಸ್) 800 ಮೆಗಾವ್ಯಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದಿಂದ 400 ಮೆಗಾವ್ಯಾಟ್ ಮತ್ತು 2ನೇ ವಿದ್ಯುತ್ ಘಟಕದಿಂದ 405 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ರಾಜ್ಯದ ಬೇಡಿಕೆಗೆ ತಕ್ಕಂತೆ ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿದ್ದ ಆರ್ಟಿಪಿಎಸ್, ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯಲ್ಲಿ ತೊಡಗಿವೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಮಾಣದಲ್ಲಿ ಶಾಖೋತ್ಪನ್ನ ವಿದ್ಯುತ್ ಘಟಕಗಳ ಉತ್ಪಾದನೆ ಬೇಡಿಕೆ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವರುಣಾ ಕೃಪೆಯಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ಬತ್ತಿ ಬರಡಾಗಿದ್ದ ಕೆರೆಗಳು, ಹಳ್ಳಗಳು , ಕೃಷ್ಣಾನದಿ ಮತ್ತು ತುಂಗಾಭದ್ರ ನದಿಗಳಿಗೆ ಮತ್ತೆ ಜೀವಕಳೆ ಬಂದಿದೆ.
ರಾಜ್ಯದ ಎಲ್ಲೆಡೆ ಮಳೆಯಾಗುತ್ತಿರುವುದರಿಂದ ಜಲ ವಿದ್ಯುತ್ ಘಟಕಗಳ ಉತ್ಪಾದನೆ ಮತ್ತು ಪವನ್ ಗಾಳಿ (ವಿಂಡೋ)ಯಿಂದ ಆರು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿರುವುದರಿಂದ, ಆರ್ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಮೇಲಿದ್ದ ಒತ್ತಡ ಈಗ ಕಡಿಮೆಯಾಗಿದೆ ಎಂದು ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಸುರೇಶ್ ಬಾಬು ಅವರು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications