Raichur: ಆರ್ಟಿಪಿಎಸ್, ವೈಟಿಪಿಎಸ್, ಕುಗ್ಗಿದ ವಿದ್ಯುತ್ ಬೇಡಿಕೆ
ರಾಯಚೂರು ಜು.04: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆರ್ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಬೇಡಿಕೆ ಕುಸಿತವಾಗಿದೆ. ಇದರಿಂದಾಗಿ ಆರ್ಟಿಪಿಎಸ್ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.
ರಾಜ್ಯದ ಎಲ್ಲೆಡೆ ಮಳೆಯಾಗುತ್ತಿರುವುದರಿಂದ ಜಲ ವಿದ್ಯುತ್ ಘಟಕಗಳ ಉತ್ಪಾದನೆ ಮತ್ತು ಪವನ್ ಗಾಳಿ (ವಿಂಡೋ)ಯಿಂದ ವಿದ್ಯುತ್ ಹೆಚ್ಚಳವಾಗಿರುವುದರಿಂದ, ಬೇಸಿಗೆಯಲ್ಲಿ ಆರ್ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಮೇಲಿದ್ದ ಒತ್ತಡ ಈಗ ಕಡಿಮೆಯಾಗಿದೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಒಟ್ಟು ಎಂಟು ವಿದ್ಯುತ್ ಘಟಕಗಳ ಪೈಕಿ ಆರು ವಿದ್ಯುತ್ ಘಟಕಗಳಿಂದ ಉತ್ಪಾದನೆ ಮಾಡಲಾಗುತ್ತಿದೆ. 210 ಮೆಗಾವ್ಯಾಟ್ ಸಾಮರ್ಥ್ಯದ 7ನೇ ವಿದ್ಯುತ್ ಘಟಕ ವಾರ್ಷಿಕ ನಿರ್ವಹಣೆಗಾಗಿ ಬಂದ್ ಮಾಡಲಾಗಿದೆ. ಒಟ್ಟು 1720ಮೆಗಾವ್ಯಾಟ್ ಸಾಮರ್ಥ್ಯದಲ್ಲಿ ಈಗ ಇನ್ನೂಳಿದ ವಿದ್ಯುತ್ ಘಟಕಗಳಿಂದ ಒಟ್ಟು 853 ಮೆಗಾವ್ಯಾಟ್ ಉತ್ಪಾದನೆ ಆಗುತ್ತಿದೆ.
ಮೂರು ವರ್ಷಗಳಿಂದ 210 ಮೆಗಾವ್ಯಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದ ಉತ್ಪಾದನೆ ಬಂದ್ ಮಾಡಲಾಗಿದೆ. ಯರಮರಸ್ ಶಾಖೋತ್ಪನ್ನ ವಿದ್ಯುತ್ (ವೈಟಿಪಿಎಸ್) 800 ಮೆಗಾವ್ಯಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದಿಂದ 400 ಮೆಗಾವ್ಯಾಟ್ ಮತ್ತು 2ನೇ ವಿದ್ಯುತ್ ಘಟಕದಿಂದ 405 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ರಾಜ್ಯದ ಬೇಡಿಕೆಗೆ ತಕ್ಕಂತೆ ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿದ್ದ ಆರ್ಟಿಪಿಎಸ್, ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯಲ್ಲಿ ತೊಡಗಿವೆ.

ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಮಾಣದಲ್ಲಿ ಶಾಖೋತ್ಪನ್ನ ವಿದ್ಯುತ್ ಘಟಕಗಳ ಉತ್ಪಾದನೆ ಬೇಡಿಕೆ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವರುಣಾ ಕೃಪೆಯಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ಬತ್ತಿ ಬರಡಾಗಿದ್ದ ಕೆರೆಗಳು, ಹಳ್ಳಗಳು , ಕೃಷ್ಣಾನದಿ ಮತ್ತು ತುಂಗಾಭದ್ರ ನದಿಗಳಿಗೆ ಮತ್ತೆ ಜೀವಕಳೆ ಬಂದಿದೆ.
ರಾಜ್ಯದ ಎಲ್ಲೆಡೆ ಮಳೆಯಾಗುತ್ತಿರುವುದರಿಂದ ಜಲ ವಿದ್ಯುತ್ ಘಟಕಗಳ ಉತ್ಪಾದನೆ ಮತ್ತು ಪವನ್ ಗಾಳಿ (ವಿಂಡೋ)ಯಿಂದ ಆರು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿರುವುದರಿಂದ, ಆರ್ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳ ಉತ್ಪಾದನೆಯ ಮೇಲಿದ್ದ ಒತ್ತಡ ಈಗ ಕಡಿಮೆಯಾಗಿದೆ ಎಂದು ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಸುರೇಶ್ ಬಾಬು ಅವರು ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications