Election Icons : ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಚುನಾವಣಾ ರಾಯಭಾರಿಗಳ ನೇಮಕ, ಇಲ್ಲಿದೆ ವಿವರ
ಚುನಾವಣಾ ಆಯೋಗವು ಜಿಲ್ಲಾವಾರು ಚುನಾವಣಾ ರಾಯಭಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಹಾಗಾದರೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಚುನಾವಣಾ ರಾಯಭಾರಿಗಳಾಗಿ ಆಯ್ಕೆಯಾದವರು ಯಾರು ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ರಾಯಚೂರು, ಮಾರ್ಚ್, 09: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು, ಈಗಾಗಲೇ ಚುನಾವಣಾ ಆಯೋಗವು ಜಿಲ್ಲಾವಾರು ಚುನಾವಣಾ ರಾಯಭಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಯಚೂರು ಚುನಾವಣೆ ರಾಯಭಾರಿಯಾಗಿ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿಯವರನ್ನು ಆಯ್ಕೆ ಮಾಡಿದರೆ, ಕೊಪ್ಪಳ ಜಿಲ್ಲೆಗೆ ಗಂಗಾವತಿ ಪ್ರಾಣೇಶ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಬಿಸಿಲಿನ ನಾಡು ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ತೆಲುಗು ಸ್ಟಾರ್ ನಿರ್ದೇಶಕ ರಾಜಮೌಯನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲದೇ ಹಲವು ಜಿಲ್ಲೆಗಳಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಆಯೋಗ ಆದೇಶ ಹೊರಡಿಸಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವುದು ಈ ರಾಯಭಾರಿಗಳ ಆಯ್ಕೆಯ ಉದ್ದೇಶ ಆಗಿದೆ.

ಚುನಾವಣಾ ರಾಯಭಾರಿಗಳ ನೇಮಕ
ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಹೀಗೆ ರಾಯಭಾರಿಗಳನ್ನು ನೇಮಕ ಮಾಡಲಾಗಿದೆ. 10 ಜಿಲ್ಲೆಗಳ ಮನವಿ ಪುರಸ್ಕರಿಸಿದ ಚುನಾವಣಾ ಆಯೋಗ ವಿವಿಧ ಕ್ಷೇತ್ರಗಳ ಸಾಧಕರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಅಭಿಮಾನಿಗಳ ಕ್ರೇಜ್ ಹೆಚ್ಚಿದೆ. ಆದ್ದರಿಂದ ಜಿಲ್ಲಾಡಳಿತಕ್ಕೆ ರಾಯಭಾರಿಯ ಆಯ್ಕೆ ಕುರಿತು ಮನವಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಮೌಳಿ ಅವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.
ಇನ್ನು ಮಂಡ್ಯಕ್ಕೆ ಕನ್ನಡ ನಟ ನೀನಾಸಂ ಸತೀಶ್, ಕೊಪ್ಪಳಕ್ಕೆ ಗಂಗಾವತಿ ಪ್ರಾಣೇಶ್, ವಿಜಯಪುರಕ್ಕೆ ಸೈಕ್ಲಿಂಗ್ ಚಾಂಪಿಯನ್ ಸಹನಾ ಕೂಡಿಗನೂರು, ಬಳ್ಳಾರಿಗೆ ಗೊಂಬೆಯಾಟ ಕಲಾವಿಧ ಬೆಳಗಲ್ಲು ವೀರಣ್ಣ, ಕೊಡಗಿಗೆ ಸಾಮಾಜಿಕ ಕಾರ್ಯಕರ್ತ ಕೆ.ಯು ಮುತ್ತಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಹಾಗೆಯೇ ಬೆಂಗಳೂರಿನ ಮೂರು ವಿಭಾಗಗಳಿಗೆ ಬ್ಯಾಡ್ಮಿಂಟನ್ ಚಾಂಪಿಯನ್ ಅನೂಪ್ ಶ್ರೀಧರ್, ಕಬ್ಬಡಿ ಆಟಗಾರ್ತಿ ತೇಜಸ್ವಿನಿ ಬಾಯಿ, ಪ್ಯಾರಾ ಸ್ವಿಮ್ಮರ್ ಶರತ್ ಗಾಯಕ್ವಾಡ್ ಜಾನಪದ ಗಾಯಕ ಮೋಹನ್ ಕುಮಾರ್.ಎನ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.
ಹೀಗೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾವಾರು ಚುನಾವಣಾ ರಾಯಭಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications