ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ- ಶರಣ್ ಪ್ರಕಾಶ್ ಪಾಟೀಲ್ ಆರೋಪ
ರಾಯಚೂರು ಜೂನ್ 22: ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹು ದೊಡ್ಡ ಹಗರಣ ಇದಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೀಟ್ - ಯುಜಿ ಹಾಗೂ ಯುಜಿಸಿ - ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.
ಕೇಂದ್ರ ಸರ್ಕಾರದ ನಡವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಂತಿದೆ. ಇದರಲ್ಲಿ ಪಕ್ಷ ರಾಜಕಾರಣ ಬೇಡವೇ ಬೇಡ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಡಗಿರುವುದರಿಂದ ಸಿಬಿಐ ತನಿಖೆಗೆ ವಹಿಸಬೇಕು, ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದ ನಿಲುವುಗಳು ಬಹಳ ಅನುಮಾನಾಸ್ಪದವಾಗಿ ಕಾಣುತ್ತಿದೆ. ದೊಡ್ಡ ಮಟ್ಟದ ಹಗರಣವಾಗಿದೆ ಎಂದು ಪಕ್ಷಾತೀತವಾಗಿ ಬೀದಿಗಿಳಿದು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಹೋರಾಟ ಮಾಡುತ್ತಿದ್ದಾರೆ.

ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೆಂಬುದು ಬಹುತೇಕ ರಾಜ್ಯಗಳ ಒಕ್ಕೊರಲಿನ ಬೇಡಿಯಾಗಿದೆ. ಈ ಮನವಿಯನ್ನು ಪರಿಷ್ಕರಿಸದೆ ಮೌನಕ್ಕೆ ಜಾರಿಯಾಗಿರುವುದನ್ನು ಗಮನಿಸಿದರೆ ಕೇಂದ್ರದ ಮೇಲೆ ಸಂಶಯವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ತಿರಸ್ಕಾರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ನೀಟ್ ನಡೆಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಇದೆ. ಕೇಂದ್ರ ಸರ್ಕಾರದ ಕಾಯಿದೆಯಿಂದ ನೀಟ್ ಬಂದಿದೆ. ಹಾಗಾಗಿ ನೀಟ್ ರದ್ದು ಮಾಡಲು ಸುಪ್ರೀಂ ಕೋರ್ಟ್ ತೀರ್ಪು ಆಗಬೇಕು ಎಂದು ಹೇಳಿದರು.
ತಮಿಳುನಾಡು ಸರ್ಕಾರ ಅದರ ಭಾವನೆ ಹೇಳಿದೆ. ನಾವು ಕರ್ನಾಟಕದಲ್ಲಿ ಇದೇ ರೀತಿ ಮಾಡಬೇಕಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಸುಪ್ರೀಂ ಕೋರ್ಟ್ ಸಹ ಕೇಂದ್ರ ಸರ್ಕಾರಕ್ಕೆ ನಿಮ್ಮ ತಪ್ಪು ಇದ್ದರೆ ಒಪ್ಪಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಸ್ಪಷ್ಟಪಡಿಸಿದರು.
ಜೂನ್ 4 ರಂದು ಹೊರ ಬಿದ್ದ ನೀಟ್ ಪರೀಕ್ಷಾ ಫಲಿತಾಂಶದ ವೇಳೆ ಸಾಕಷ್ಟು ಅನುಮಾನಗಳು ಮೂಡಿದ್ದವು. ಕೃಪಾಂಕ ನೀಡಿಕೆಗೆ ಆಕ್ಷೇಪ ವ್ಯಕ್ತವಾಗಿದೆ. ಇದೇ ವೇಳೆ ಪೊಲೀಸರ ತನಿಖೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅನುಮಾನವೂ ವ್ಯಕ್ತವಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications