ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌಡರ ಕುಟುಂಬದ ಜನಪ್ರಿಯತೆಗೆ ಸಿದ್ರಾಮಯ್ಯಗೆ ಭಯ: ಅನಿತಾ ಕುಮಾರಸ್ವಾಮಿ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಮಾರ್ಚ್ 22 : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಹಾಗೂ ರೇವಣ್ಣ ಇಬ್ಬರು ಮಾತ್ರ ಸ್ಪರ್ಧೆ ಮಾಡುತ್ತಾರೆ. ನಮ್ಮ ಕುಟುಂಬದಿಂದ ಆಕಾಂಕ್ಷಿಗಳು ಇದ್ದೇವೆ. ಆದರೆ ಇಬ್ಬರು ಮಾತ್ರ ಸ್ಪರ್ಧಿಸುತ್ತಾರೆ ಎಂದು ಅನಿತಾ ಕುಮಾರಸ್ವಾಮಿ ಅವರು ಸಿಂಧನೂರಿನಲ್ಲಿ ಗುರುವಾರ ಹೇಳಿದ್ದಾರೆ.

ಇಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತಿದ್ದರಿಂದ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ. ಹಾಗೆ ನೋಡಿದರೆ ನಮ್ಮ ಕುಟುಂಬದಿಂದ ಆಕಾಂಕ್ಷಿಗಳು ಇದ್ದೇವೆ. ಆದರೆ ಅಂತಿಮವಾಗಿ ಇಬ್ಬರೇ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ, ರಾಮನಗರದಲ್ಲಿ ಸ್ಪರ್ಧೆ : ಕುಮಾರಸ್ವಾಮಿ ಘೋಷಣೆಚನ್ನಪಟ್ಟಣ, ರಾಮನಗರದಲ್ಲಿ ಸ್ಪರ್ಧೆ : ಕುಮಾರಸ್ವಾಮಿ ಘೋಷಣೆ

ಸಿದ್ದರಾಮಯ್ಯ ಹಾಗೂ ಮಂಜೇಗೌಡ ಮಧ್ಯದ ಫೋನ್ ಸಂಭಾಷಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೊಳೆನರಸೀಪುರದಲ್ಲಿ ದೇವೇಗೌಡರ ಕುಟುಂಬಕ್ಕಿರುವ ಜನಪ್ರೀತಿಯ ಬಗ್ಗೆ ಭಯ ಇದೆ. ಹೀಗಾಗಿಯೇ ದೇವೇಗೌಡರ ಕುಟುಂಬವನ್ನು ಸೋಲಿಸಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದರು.

Siddaramaiah afraid of Deve Gowdas family: Anitha Kumaraswamy

ಈಗ ರಾಜ್ಯದಲ್ಲಿ ಮಹಿಳೆಯರಿಗೆ ಟಿಕೆಟ್ ಕಡಿಮೆ ಸಂಖ್ಯೆಯಲ್ಲಿ ನೀಡಲಾಗುತ್ತಿದೆ. ಶೇಕಡಾ 33ರಷ್ಟು ಮಹಿಳಾ ಮೀಸಲಾತಿ ಬಂದರೆ ಹೆಚ್ಚಿನ ಸ್ಥಾನ ಮಹಿಳೆಯರಿಗೆ ಸಿಗಲಿದೆ. ಈಗ ಯಾವ ಪಕ್ಷವೂ ಮಹಿಳೆಯರಿಗೆ ಟಿಕೆಟ್ ನೀಡಿಲ್ಲ. ಗೆಲ್ಲುವುದೇ ಎಲ್ಲ ಪಕ್ಷಗಳಿಗೆ ಆದ್ಯತೆ ಆಗಿದೆ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.

ರಾಯಚೂರು ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯರಾಯಚೂರು ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಪರಿಚಯ

ಇನ್ನು ಜೆಡಿಎಸ್ ನ ಮಹಿಳಾ ಸಮಾವೇಶಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಕುಳಿತುಕೊಳ್ಳಲು ಕುರ್ಚಿಗಳಿಲ್ಲದೆ ಪರದಾಟವಾಗಿದೆ. ವೇದಿಕೆ ಮುಂಭಾಗದ ನೆಲದ ಮೇಲೆ ಮಹಿಳೆಯರು ಕುಳಿತುಕೊಂಡಿದ್ದರು.

English summary
Karnataka chief minister Siddaramaiah afraid of JDS supremo Deve Gowda family, says Anitha Kumaraswamy in woman convention at Sindhanur, Raichur district on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X