ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಒತ್ತಾಯ: ಸಿಎಂ ಪತ್ರ
ರಾಯಚೂರು, ಡಿಸೆಂಬರ್ 15 : ಮುಂಬರುವ ಕರ್ನಾಟಕ ರಾಜ್ಯದ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಪ್ರಕಾರ ನಡೆಸಬೇಕು ಎಂದು ಚುನಾವಣೆ ಆಯೋಗಕ್ಕೆ ಒತ್ತಾಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾನ್ವಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಮತ್ತು ಖುದ್ದಾಗಿ ಭೇಟಿಯಾಗಿ ಮನವಿ ಮಾಡಲಾಗುವುದು ಎಂದರು.

ಇವಿಎಂ ಯಂತ್ರದಲ್ಲಿ ಮತದಾನ ವಿಚಾರ. ಟ್ಯಾಂಪರ ಆಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಬಳಸಿಯೇ ಚುನಾವಣೆ ನಡೆಸುವಂತೆ ಆಯೋಗಕ್ಕೆ ಪತ್ರ ಬರೆದು ಒತ್ತಾಯ ಮಾಡುತ್ತೇನೆ.
ಗುಜರಾತ್ ಹಿಮಾಚಲ ಪ್ರದೇಶ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಅನೇಕ ಎಕ್ಸಿಟ್ ಪೋಲ್ ಗಳ ಸರ್ವೆ ತಪ್ಪಾಗಿ ಬಂದಿರುವ ಉದಾಹರಣೆ ಇದೆ. ಯಡಿಯೂರಪ್ಪನವರು ಹತಾಶರಾಗಿದ್ದಾರೆ. ಸೋಲಿನ ಭೀತಿಯಿಂದ ಕೆಟ್ಟ ಪದಗಳನ್ನ ಬಳಸುತಿದ್ದಾರೆ.

ಅದಕ್ಕಿಂತಕಲೂ ಕೆಟ್ಟ ಪದ ನಾನು ಬಳಸಬಲ್ಲೆ. ನಾನು ಹಳ್ಳಿಯಿಂದ ಬಂದವನು.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಸತ್ಯ. 42 ಪ್ರಕರಣಗಳಲ್ಲಿ ಅವರು ಬಾಗಿಯಾಗಿದ್ದಾರೆ.ಇಂದಿರಾಗಾಂಧಿ ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದರು ಯಡಿಯೂರಪ್ಪ ಅವರ ಹಾಗೆ ಚೆಕ್, ಲಂಚ ಪಡೆದು ಜೈಲಿಗೆ ಹೋಗಿರಲಿಲ್ಲ ಎಂದು ಹೇಳಿದರು.
ಮೈಸೂರು ಮಿನರಲ್ ಮೂಲಕ ಮೈನಿಂಗ್ ವಿಚಾರ ಎಚ್.ಡಿ.ಕೆ ಆರೋಪ ಸುಳ್ಳು. ಅವರದು ಹಿಟ್ ಆಂಡ್ ರನ್ ಆರೋಪ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ನಾಲ್ಕು ವರ್ಷವಾದರೂ ಅಚ್ಛೆ ದಿನ ಬರಲೇ ಇಲ್ಲ. 'ಕಬ್ ಆಯೇಗಾ ಮಾಲೂಮ್ ನಹಿ' ಎಂದು ವ್ಯಂಗ್ಯವಾಡಿದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications