ಉದ್ಭವ ಮಹಾಲಕ್ಷ್ಮಿಯ ಪುಣ್ಯಕ್ಷೇತ್ರ ರಾಯಚೂರಿಗೆ ಹರಿದು ಬಂದ ಭಕ್ತಸಾಗರ
ರಾಯಚೂರು, ಆಗಸ್ಟ್.24: ರಾಯಚೂರು ಉದ್ಬವ ಮಹಾಲಕ್ಷ್ಮಿಯ ಪುಣ್ಯಕ್ಷೇತ್ರ. ಇಲ್ಲಿ ಅಪರೂಪದ ಮಹಾಲಕ್ಷ್ಮಿ ಮೂರ್ತಿ ಇದೆ. ಭಕ್ತರ ದರ್ಶನಕ್ಕಾಗಿ ಸಾಣಿಕಲ್ಲಿನಲ್ಲಿ ದೇವಿ ಪ್ರತ್ಯಕ್ಷಳಾದಳು ಎಂಬ ಪ್ರತೀತಿ ಇದೆ. ಈ ಕ್ಷೇತ್ರಕ್ಕೆ ಬಂದು 'ತಾಯಿ ನೀ ಕಾಯಿ...' ಎಂದು ಎರಡು ಕಾಯಿ ಕಟ್ಟಿದರೆ ಕರುಣಿಸುತ್ತಾಳೆ ವರ.
ಅಂದಹಾಗೆ ವರಮಹಾಲಕ್ಷ್ಮಿ ಹಬ್ಬದಂದು ಭಕ್ತಸಾಗರವೇ ಇಲ್ಲಿಗೆ ಹರಿದು ಬರುತ್ತದೆ. ಎಲ್ಲಿದೆಯಪ್ಪಾ ಈ ದೇವಸ್ಥಾನ ಅಂತೀರಾ? ಬನ್ನಿ ನಾವು ಆ ತಾಯಿಯ ದರ್ಶನ ಪಡೆಯೋಣ.
ಇಂದು ಶುಕ್ರವಾರ ವರಮಹಾ ಲಕ್ಷ್ಮಿ ಹಬ್ಬ. ಮಹಿಳೆಯರು ಸಂಭ್ರಮ, ಸಡಗರದಿಂದ ತಾಯಿಯ ಆರಾಧನೆ ಮಾಡುತ್ತಾ ಅಲಂಕಾರ ಮಾಡಿ ಪೂಜೆ ಮಾಡುತ್ತಾರೆ. ಹಬ್ಬದ ಹಿನ್ನೆಲೆಯಲ್ಲಿ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಉದ್ಭವ ಮೂರ್ತಿ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

450 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೂರಿನ ಉದ್ಭವ ಮೂರ್ತಿ ಮಹಾಲಕ್ಷ್ಮಿ ದರ್ಶನಕ್ಕೆ ಸಾಕಷ್ಟು ಭಕ್ತರು ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುತ್ತಾರೆ. ಪುಟ್ಟ ಸ್ಥಳದಲ್ಲಿ ದೇವಸ್ಥಾನ ಹೊಂದಿರುವ ಈ ತಾಯಿಯ ಶಕ್ತಿ ಅಗಾಧ.
ವರಮಹಾಲಕ್ಷ್ಮಿ ಹಬ್ಬದ ನಿಮಿತ್ಯ ಬೆಳಗ್ಗೆಯಿಂದ ದೇವಿಗೆ ತುಪ್ಪದ ಅಭಿಷೇಕ, ಹಾಲಿನ ಅಭಿಷೇಕ, ವಿವಿಧ ಪುಷ್ಪ ಹಣ್ಣುಗಳಿಂದ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಈ ದೇವಸ್ಥಾನ ಒಂದು ವಿಶೇಷತೆಯಿಂದ ಕೂಡಿದೆ. ಭಕ್ತರು ತಮ್ಮ ಬೇಡಿಕೆ ಈಡೇರಿಕೆಗೆಗಾಗಿ ಕಲ್ಲೂರು ಮಹಾಲಕ್ಷ್ಮಿ ದರ್ಶನ ಮಾಡಿ ಹರಕೆ ಹೊತ್ತು ತೆಂಗಿನಕಾಯಿ ಕಟ್ಟಿ ಹೋಗುತ್ತಾರೆ.
ಇದರಿಂದ ತಾಯಿ ತಮ್ಮ ಇಷ್ಟರ್ಥ ನೆರವೇರಿಸುತ್ತಾಳೆ ಎಂಬ ಬಲವಾದ ನಂಬಿಕೆ ಭಕ್ತರಲ್ಲಿದೆ. ಇಷ್ಟಾರ್ಥ ಸಿದ್ದಿ ನಂತರ ಬಳಿಕ ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಹರಕೆ ತೀರಿಸುತ್ತಾರೆ. ಪೂಜೆ ಸಲ್ಲಿಸಿದ ನಂತರ ಇಲ್ಲಿ ಬಂದ ಮಹಿಳೆಯರಿಗೆ ಉಡಿ ತುಂಬುವುದು ವಿಶೇಷ ಆಚರಣೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications