ಮಂತ್ರಾಲಯ ಗುರುರಾಯರ ಅನುಗ್ರಹ ಬೇಡಿದ ರಜನಿಕಾಂತ್
Recommended Video

ರಾಯಚೂರು, ನವೆಂಬರ್ 21: ರಾಯಚೂರು ಸಮೀಪದ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುರಾಯರ ಅನುಗ್ರಹ ಬೇಡಿದರು.
ಆಂಧ್ರಪ್ರದೇಶದ ಕರ್ನೂರು ಜಿಲ್ಲೆಯ ವಿಶ್ವವಿಖ್ಯಾತ ಪುಣ್ಯಕ್ಷೇತ್ರ ಮಂತ್ರಾಲಯ ಗ್ರಾಮಕ್ಕೆ ರಜನಿಕಾಂತ್ ಅವರು ಮಂಗಳವಾರ ಬೆಳಗ್ಗೆ ಭೇಟಿ ನೀಡಿದರು.
ಬೆಳಿಗ್ಗೆ 7.30ಕ್ಕೆ ಮಂತ್ರಾಲಯಕ್ಕೆ ಬಂದ ರಜನಿಕಾಂತ್, ನೇರವಾಗಿ ಮಂತ್ರಾಲಯದ ಮಂಚಾಲಮ್ಮ ದೇವಿಯ ದರ್ಶನ ಪಡೆದರು. ನಂತರ ರಾಘವೇಂದ್ರ ಸ್ವಾಮಿ, ಆಂಜನೇಯ ಸ್ವಾಮಿ ದರ್ಶನ ಪಡೆದರು. ರಾಯರ ಸನ್ನಿಧಿಯಲ್ಲಿ ಕೆಲ ಹೊತ್ತು ಧ್ಯಾನ ಮಾಡಿದರು.
ಹತ್ತು ನಿಮಿಷಗಳ ಕಾಲ ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರ ಜತೆ ಮಾತುಕತೆ ನಡೆಸಿ, ಪ್ರಸಾದ ಸ್ವೀಕರಿಸಿ ತೆರಳಿದರು.
ಈ ಹಿಂದೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 10 ಕೋಟಿ ರೂಪಾಯಿಗಳನ್ನು ದಾನವಾಗಿ ನೀಡಿದ್ದಾರೆ. ಈ ಹಣವನ್ನು ಮಠದ ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಮಾಡಿಕೊಳ್ಳಲಾಗಿದೆ.

ರಜನಿ ಅಂದು ನೀಡಿದ್ದ ದಾನ, ಸದ್ವಿನಿಯೋಗ
ರಜನಿಕಾಂತ್ ಅವರು ಈ ಹಿಂದೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 10 ಕೋಟಿ ರೂಪಾಯಿಗಳನ್ನು ದಾನವಾಗಿ ನೀಡಿದ್ದರು. ಈ ದಾನ ರೂಪದ ಮೊತ್ತದಲ್ಲಿ ಹಳೆಯ ಕಟ್ಟಡವನ್ನು ಜೀರ್ಣೋದ್ಧಾರ ಕಾರ್ಯ ಮಾಡಲಾಗಿದೆ. 25 ಕೊಠಡಿಗಳಿಗೆ ಹವಾನಿಯಂತ್ರಣ ಸೌಲಭ್ಯ ಹಾಗೂ 100 ಸಾಮಾನ್ಯ ಕೊಠಡಿಗಳನ್ನು ನಿರ್ಮಿಸಲಾಗಿದೆ.

ಪ್ರವಾಹದಿಂದ ಹಾಳಾಗಿದ್ದ ಮಠದ ಆಸ್ತಿ ಪಾಸ್ತಿ
2009ರಲ್ಲಿ ಉಂಟಾದ ಪ್ರವಾಹದ ಕಾರಣ ಮಠದ ಕೋಟ್ಯಾಂತರ ಆಸ್ತಿಪಾಸ್ತಿ ನಾಶವಾಗಿತ್ತು. ಅಲ್ಲಿನ ಲಾಡ್ಜ್ಗಳು, ಅಡುಗೆ ಮನೆ, ರಸ್ತೆ ಸೇರಿದಂತೆ ಸುಮಾರು ರು.100 ಕೋಟಿಯಷ್ಟು ಆಸ್ತಿಪಾಸ್ತಿ ನಾಶವಾಗಿದ್ದ ಘಟನೆಯನ್ನು ಮಂತ್ರಾಲಯಕ್ಕೆ ಆಗಮಿಸುವ ಭಕ್ತರು ಇನ್ನೂ ಮರೆತಿಲ್ಲ. ಮಂತ್ರಾಲಯ ಗ್ರಾಮದ ಅಭಿವೃದ್ಧಿಗಾಗಿ ರಜನಿಕಾಂತ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ದಾನ ನೀಡಿದ್ದಾರೆ.

ರಜನಿಕಾಂತ್ ಅವರು ಆಗಾಗ ಭೇಟಿ ನೀಡುತ್ತಾರೆ
ರಾಯರ ಸನ್ನಿಧಾನಕ್ಕೆ ಕುಟುಂಬ ಸಮೇತರಾಗಿ ಆಗಾಗ ರಜನಿಕಾಂತ್ ಅವರು ಭೇಟಿ ನೀಡುತ್ತಿರುತ್ತಾರೆ. ವರನಟ ಡಾ.ರಾಜ್ ಕುಮಾರ್ ಅವರಂತೆಯೇ ರಜನಿಕಾಂತ್ ಸಹ ರಾಯರ ಮಹಾನ್ ಆರಾಧಕರು. ರಜನಿ ಅವರು 'ಶ್ರೀರಾಘವೇಂದ್ರ' (1985) ಎಂಬ ಚಿತ್ರದಲ್ಲಿ ರಾಯರ ಭಕ್ತನಾಗಿ ಅಭಿನಯಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ರಾಯರ ಫೋಟೋ ಉಡುಗೊರೆ ನೀಡುವ ರಜನಿ
ರಜನಿಕಾಂತ್ ಅವರ ಮನೆಗೆ ಆಗಾಗ ಭೇಟಿ ನೀಡುವ ಅತಿಥಿಗಳಿಗೆ ರಾಯರ ಫೋಟೋಗಳನ್ನು ಉಡುಗೊರೆಯಾಗಿ ನೀಡುತ್ತಾ ಬರುತ್ತಿದ್ದಾರೆ. ಯಾವುದೇ ಶುಭ ಕಾರ್ಯಕ್ಕೂ ಮುನ್ನ ರಾಯರ ಅನುಗ್ರಹ ಬೇಡುವುದು ರಜನಿ ಅವರಿಗೆ ರೂಢಿಯಾಗಿದೆ. ಅದರಂತೆ, ಮುಂದಿನ ಎಲ್ಲಾ ಕಾರ್ಯಗಳಿಗೆ ಶುಭವಾಗಲೆಂದು ರಾಯರಲ್ಲಿ ರಜನಿ ಅವರು ಬೇಡಿಕೊಂಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications