Raichur: ಮನೆಯಲ್ಲಿ ಮಂದಿ ಇದ್ದಾಗಲೇ ಕೈಚಳಕ ತೋರಿಸಿದ ಕಳ್ಳರು
ರಾಯಚೂರು ಏಪ್ರಿಲ್ 8: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕಳ್ಳತನವನ್ನು ಮಾಡುವುದು ಸಾಮಾನ್ಯ. ಆದರೆ ಇಲ್ಲೊಂದು ಘಟನೆ ವಿಚಿತ್ರವಾಗಿ ನಡೆದಿದೆ. ಮನೆಯಲ್ಲಿ ಜನರಿದ್ದಾಗಲೇ ಚಾಲಾಕಿ ಕಳ್ಳ ತನ್ನ ಕೈಚಳಕವನ್ನು ತೋರಿಸಿದ್ದಾನೆ.
ಹೌದು ರಾಯಚೂರು ನಗರದ ಪ್ರಶಾಂತ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕಳ್ಳ ವೀರೇಶ್ ಎಂಬುವವರ ಮನೆಯಲ್ಲಿ 760 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು ಹಣವನ್ನು ದೋಚಿದ್ದಾನೆ. ತೆರೆದ ಕಿಟಕಿ ಮೂಲಕ ಬಾಗಿಲಿನ ಚಿಲಕ ತೆರೆದು ಒಳನುಗ್ಗಿದ ಕಳ್ಳ ಚಿನ್ನ ಹಣ ದೋಚಿ ಪರಾರಿಯಾಗಿದ್ದಾನೆ. ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಣವನ್ನ ವೀರೇಶ್ ಬೆಡ್ ರೂಂನಲ್ಲಿ ಇಟ್ಟಿದ್ದರು. ಬೇಸಿಗೆ ಇದ್ದ ಕಾರಣ ರೂಂ ನಿಂದ ಹೊರಗಡೆ ಮಲಿಗಿದ್ದರು. ಹಾಲ್ನಲ್ಲಿ ಮಲಗಿದ್ದಾಗ ಕಿಟಕಿಗಳನ್ನು ತೆರೆಯಲಾಗಿತ್ತು. ಆದರೆ ಕಳ್ಳ ಮನೆಯವರೆಲ್ಲಾ ಗಾಢನಿದ್ದೆಯಲ್ಲಿ ಇದ್ದಾಗ ಕಿಟಕಿಯ ಮೂಲಕ ಕೈ ಹಾಕಿ ಬಾಗಿಲು ತೆಗೆದು ಒಳಬಂದಿದ್ದಾನೆ.
ಯಾರಿಗೂ ಗೊತ್ತಾಗದಂತೆ ತನ್ನ ಕೆಲಸ ಮುಗಿಸಿ ಎಸ್ಕೇಪ್ ಆಗಿದ್ದಾನೆ. ಬೆಳಗ್ಗೆ ಎಚ್ಚರವಾದಾಗಲೇ ಕಳ್ಳತನವಾಗಿರುವ ಬಗ್ಗೆ ಮನೆಯವರಿಗೆ ಗೊತ್ತಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ತೆರಳಿ ವೀರೇಶ್ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಮನೆ ಬಳಿ ಇದ್ದ ಸಿಸಿಟಿವಿ ಕ್ಯಾಮರಾಗಳ ಮೂಲಕ ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.
ಬಿಸಿಲಿಗೆ ತತ್ತರಿಸಿದ ರಾಯಚೂರು
ರಾಯಚೂರಿನಲ್ಲಿ ಜನ ಭಾರೀ ಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ. ಕಳೆದ ಕೆಲ ದಿನಗಳಿಂದ 41 ಡಿಗ್ರಿ ಸೆಲ್ಸಿಯಸ್ಗೂ ಅಧಿಕ ತಾಪಮಾನ ರಾಯಚೂರಿನಲ್ಲಿ ದಾಖಲಾಗಿದೆ. ಮಾರ್ಚ್ ತಿಂಗಳಲ್ಲಿ ರಾಯಚೂರಿನಲ್ಲಿ ತಾಪಮಾನ ಅಧಿಕವಾಗಿತ್ತು. ಇದೀಗ ಏಪ್ರಿಲ್ ತಿಂಗಳ ಆರಂಭದಲ್ಲಿ ರಾಜ್ಯದ ಹಲವೆಡೆ ವರ್ಷಧಾರೆಯಾದ ಕಾರಣ ಕೊಂಚ ಬಿಸಿಲಿನ ಝಳ ಕಡಿಮೆಯಾಗಿತ್ತು. ಇದೀಗ ತಾಪಮಾನ ಮತ್ತೆ ಏರಿಕೆಯಾಗುತ್ತಿದೆ. ಇದರಿಂದ ಜನ ಕಂಗೆಟ್ಟು ಹೋಗಿದ್ದಾರೆ.
ಮಡಿಕೆ ನೀರಿಗೆ ಜನ ಹೆಚ್ಚು ಮೊರೆ ಹೋಗುತ್ತಿದ್ದಾರೆ. ವೈದ್ಯರೂ ಕೂಡ ವಿನಾಕಾರಣ ಹೊರ ಬರದಾರಂತೆ ಜನರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಬೇಸಿಗೆಯಲ್ಲಿ ದೇಹವನ್ನು ತಂಪಾಡಿಗಲು ಹೆಚ್ಚು ನೀರು ಕುಡಿಯುವುದು ಮುಖ್ಯ. ತಂಪಾದ ಪಾನೀಯಗಳನ್ನು ಕುಡಿಯುವುದು ಅವಶ್ಯಕ ಎಂದಿದ್ದಾರೆ.
ಅಲ್ಲದೆ ಈ ಸಮಯದಲ್ಲಿ ಕೆಲ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಚರ್ಮ ರೋಗ, ಸನ್ ಸ್ಟ್ರೋಕ್, ಡಿಹೈಡ್ರೆಷನ್, ನೀರಿನ ಇನ್ಫೆಕ್ಷನ್ ಕಂಡು ಬರುತ್ತದೆ. ಹೀಗಾಗಿ ಆರೋಗ್ಯ ವಿಚಾರದಲ್ಲಿ ತುಂಬಾ ಜಾಗರೂಕರಾಗಿರಲು ವೈದ್ಯರು ಸಲಹೆಗಳನ್ನು ನೀಡಿದ್ದಾರೆ.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications