ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಂಧನೂರು ಬಳಿ ಅಪಘಾತ; ಗರ್ಭಿಣಿ ಸೇರಿ ಮೂವರ ಸಾವು

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಏಪ್ರಿಲ್ 24: ರಾಯಚೂರು ಜಿಲ್ಲೆಯ ಸಿಂಧನೂರಿನ ಉಮಲೂಟಿ ಸಮೀಪ ನಡೆದ ಅಪಘಾತದಲ್ಲಿ ಚಿಕ್ಕ ಮಗು ಮತ್ತು ಗರ್ಭಿಣಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಚಿಕ್ಕಬೇರ್ಗಿಯ ಪರಸಣ್ಣ, ಕನಕಮ್ಮ ದಂಪತಿ ಹಾಗೂ ಅವರ ಮಗಳು ನಾಗಮ್ಮ ಎಂಬುವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗರ್ಭಿಣಿಯ ಆರೋಗ್ಯ ಪರಿಶೀಲನೆಗಾಗಿ ಚಿಕ್ಕಬೇರ್ಗಿ ಗ್ರಾಮದಿಂದ ಮೊಪೆಡ್ ‍ನಲ್ಲಿ ಬಾಗಲಕೋಟೆಯ ಇಳಕಲ್ ಗೆ ಹೊರಟಿದ್ದ ಸಂದರ್ಭ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಉಡುಪಿಯಲ್ಲಿ ರಸ್ತೆ ಅಪಘಾತ: ಲಾರಿ ಚಾಲಕ ಸ್ಥಳದಲ್ಲೇ ಸಾವುಉಡುಪಿಯಲ್ಲಿ ರಸ್ತೆ ಅಪಘಾತ: ಲಾರಿ ಚಾಲಕ ಸ್ಥಳದಲ್ಲೇ ಸಾವು

Three People Including Pregnant Died In Accident Near Sindhanuru

ಪರಸಣ್ಣ ಹಾಗೂ ಮಗಳು ನಾಗಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗರ್ಭಿಣಿ ಕನಕಮ್ಮ ಸಿಂಧನೂರು ತಾಲೂಕು ಆಸ್ಪತ್ರೆ ರವಾನಿಸುವಾಗ ಸಾವನ್ನಪ್ಪಿದ್ದಾರೆ. ಇಳಕಲ್ ಹತ್ತಿರವಾಗುತ್ತದೆ ಎಂದು ಮೊಪೆಡ್ ನಲ್ಲೇ ಪತ್ನಿಯನ್ನು ಆಸ್ಪತ್ರೆಗೆ ಪರಸಣ್ಣ ಕರೆದೊಯ್ಯುತ್ತಿದ್ದ ವೇಳೆ ಅಪಘಾತವಾಗಿದೆ. ಘಟನೆ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Three people including pregnant died in lorry moped accident near sindhanuru of raichur district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X