ಚುನಾವಣೋತ್ತರ ಸಮೀಕ್ಷೆ; ಮಸ್ಕಿಯಲ್ಲಿ ಪ್ರಬಲ ಪೈಪೋಟಿ!
ರಾಯಚೂರು, ಏಪ್ರಿಲ್ 29; ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕುತೂಹಲವನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ಉಪ ಚುನಾವಣೆ ಎದುರಾಗಿತ್ತು. ಏಪ್ರಿಲ್ 17ರಂದು ಚುನಾವಣೆ ನಡೆದಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಮಸ್ಕಿಯಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್ನಿಂದ ಬಸನಗೌಡ ತುರ್ವಿಹಾಳ ಅಭ್ಯರ್ಥಿಗಳು. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸದೇ ಚುನಾವಣೆಯಿಂದ ದೂರ ಉಳಿದಿದೆ. ಈ ಇಬ್ಬರೂ ನಾಯಕರು 2018ರ ಚುನಾವಣೆಯಲ್ಲಿಯೂ ಎದುರಾಳಿಗಳಾಗಿದ್ದರು. ಆದರೆ ಉಪ ಚುನಾವಣೆಯಲ್ಲಿ ಇಬ್ಬರೂ ಸಹ ಪಕ್ಷ ಬದಲಾಯಿಸಿದ್ದಾರೆ.
ಗುರುವಾರ ಮಸ್ಕಿ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಟಿವಿ 9 ವಾಹಿನಿ ನಡೆಸಿದ ಸಮೀಕ್ಷೆಯ ಪ್ರಕಾರ ಕ್ಷೇತ್ರದಲ್ಲಿ ನೇರ ಪೈಪೋಟಿ ನಡೆಯಲಿದೆ. ಬಿಜೆಪಿಗಿಂತ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆಯುವ ಸಾಧ್ಯತೆ ಇದೆ.

ಸಮೀಕ್ಷೆಯ ಸಮಯದಲ್ಲಿ ಈಗ ನೀವು ಯಾರಿಗೆ ಮತ ಹಾಕಿದ್ದೀರಿ? ಎಂದು ಜನರನ್ನು ಪ್ರಶ್ನೆ ಮಾಡಲಾಗಿತ್ತು. ಶೇ 47ರಷ್ಟು ಜನರು ಬಿಜೆಪಿ, ಶೇ 48ರಷ್ಟು ಜನರು ಕಾಂಗ್ರೆಸ್, ಶೇ 5ರಷ್ಟು ಜನರು ಇತರರಿಗೆ ಮತ ಹಾಕಿದ್ದೇವೆ ಎಂದು ಹೇಳಿದ್ದಾರೆ.
ಪಕ್ಷ ಬಿಟ್ಟಿದ್ದು ಹಿನ್ನಡೆ?: ಶಾಸಕರಾಗಿದ್ದ ಪ್ರತಾಪಗೌಡ ಪಾಟೀಲ ಪಕ್ಷ ಬದಲಿಸಿದ್ದನ್ನು ನೀವು ಒಪ್ಪಿಕೊಳ್ಳುತ್ತೀರಾ? ಎಂದು ಪ್ರಶ್ನಿಸಲಾಗಿತ್ತು. ಬದಲಿಸಿದ್ದು ತಪ್ಪು ಎಂದು ಶೇ 41ರಷ್ಟು ಜನರು ಹೇಳಿದ್ದಾರೆ. ಬದಲಿಸಿದ್ದು ಸರಿ ಎಂದು ಶೇ 27 ಜನರು ಅಭಿಪ್ರಾಯಪಟ್ಟಿದ್ದಾರೆ. ಹೇಳೋಕಾಗಲ್ಲ ಎಂದು ಶೇ 32ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ.
2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ ಕಾಂಗ್ರೆಸ್ನಲ್ಲಿದ್ದರು. ಬಸನಗೌಡ ತುರ್ವಿಹಾಳ ಬಿಜೆಪಿಯಲ್ಲಿದ್ದರು. ಈಗ ಇಬ್ಬರ ಪಕ್ಷಗಳು ಅದಲು ಬದಲಾಗಿವೆ. ಆದ್ದರಿಂದ, ಚುನಾವಣೆಯ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
(ಮಾಹಿತಿ; ಟಿವಿ 9 ವೆಬ್ ಸೈಟ್)
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications