ರಾಯಚೂರಿನಲ್ಲಿ ಯುಗಾದಿ ಸಂಭ್ರಮ: ಮಂಗಳವಾರ ಬಣ್ಣದೋಕುಳಿ, ದೇಗುಲಗಳಲ್ಲಿ ವಿಶೇಷ ಪೂಜೆ
ರಾಯಚೂರು ಏಪ್ರಿಲ್ 8: ರಾಯಚೂರು ಜಿಲ್ಲೆ ಹಲವು ಸಂಸ್ಕೃತಿ ಹಾಗೂ ಸಂಪ್ರದಾಯ ಮೇಳೈಸಿಕೊಂಡಿದೆ. ಹೀಗಾಗಿ ಇಲ್ಲಿ ಆಚರಣೆಗಳೂ ಭಿನ್ನವಾಗಿದೆ. ವೈವಿಧ್ಯತೆಯಲ್ಲಿನ ಏಕತೆಯೇ ಇಲ್ಲಿಯ ವಿಶೇಷತೆಯಾಗಿದೆ.
ಹೊಸ ಯುಗದ ಆರಂಭ ಸೂಚಿಸುವ ಯುಗಾದಿ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ ಪಡೆದಿದೆ. ಮರಾಠರು ಗುಡಿ ಪಾಡ್ವಾ, ತೆಲುಗು ಹಾಗೂ ಕನ್ನಡಿಗರು ಯುಗಾದಿ ಹೆಸರಲ್ಲೇ ಹಬ್ಬ ಆಚರಿಸಿಕೊಂಡು ಬಂದಿದ್ದಾರೆ. ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಹೋಳಿ ಹುಣ್ಣಿಮೆಯ ದಿನ ಬಣ್ಣ ಆಡುವುದಿಲ್ಲ. ಯುಗಾದಿಗೆ ಬಣ್ಣದೋಕುಳಿ ನಡೆಯುತ್ತದೆ.

ಈ ದಿನ ವಸಂತ ಋತುವಿನ ಚೈತ್ರ ಮಾಸ ಭೂಮಿಯಲ್ಲಿ ನವೋಲ್ಲಾಸ ನೀಡುತ್ತದೆ ಎನ್ನುವ ನಂಬಿಕೆ ರೈತರಲ್ಲಿ ಇದೆ. ಹೀಗಾಗಿ ನವ ಸಂವತ್ಸರದ ಯುಗಾದಿಗೆ ರೈತರು ಎತ್ತುಗಳಿಗೆ ಹಾಗೂ ಭೂತಾಯಿಗೆ ಪೂಜೆ ಸಲ್ಲಿಸಿ ಮುಂಗಾರಿನ ಸಿದ್ಧತೆ ಆರಂಭಿಸುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕಪತ್ರ ಆರಂಭಿಸಲು ವಹಿಗಳಿಗೆ ಪೂಜೆ ಸಲ್ಲಿಸುತ್ತಾರೆ. ಇನ್ನು ದೇಗುಲಗಳಲ್ಲಿ ಹೊಸ ಪಂಚಾಂಗಕ್ಕೆ ಪೂಜೆ ಸಲ್ಲಿಸಿ, ಹಳೆಯ ಪಂಚಾಂಗ ವಿಸರ್ಜನೆ ಮಾಡಲಾಗುತ್ತದೆ. ದೇಗುಲಗಳಲ್ಲಿ ವಿಶೇಷ ಪೂಜೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.
ಸಿರವಾರ ತಾಲ್ಲೂಕಿನ ಕಲ್ಲೂರಿನಲ್ಲಿರುವ ಮಾರಟೇಶ್ವರ ದೇಗುಲದಲ್ಲಿ ಯುಗಾದಿಯ ದಿನ ಸೂರ್ಯನ ಕಿರಣಗಳು ಸ್ಪರ್ಶಿಸುತ್ತವೆ. 7ನೇ ಶತಮಾನದಲ್ಲಿ ಸೂರ್ಯನ ಪಥ ಚಲನೆ ಮೇಲೆ ನಿರ್ಮಿಸಿರುವ ದೇಗುಲದಲ್ಲಿ ಯುಗಾದಿ ಹಬ್ಬದಂದು ಸೂರ್ಯ ರಶ್ಮಿ ಸ್ಪರ್ಶವಾಗುವುದು ವಿಶೇಷ. ರಾಯಚೂರು ತಾಲ್ಲೂಕಿನ ದೇವಸೂಗೂರಿನ ಸೂಗೂರೇಶ್ವರ ಸ್ವಾಮಿಯ ದೇವಸ್ಥಾನದಲ್ಲೂ ವಿಶೇಷ ಪೂಜೆ ಹಾಗೂ ಗೋಪೂಜೆ ಮಾಡಲಾಗುತ್ತದೆ.
ರೈತರಲ್ಲಿ ಹೊಸ ವರ್ಷದ ಸಂಭ್ರಮ
ಲಿಂಗಸುಗೂರು: ಯುಗಾದಿ ಪಾಡ್ಯದ ದಿನ ರೈತರು ಭೂತಾಯಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆಗೆ ಚಾಲನೆ ನೀಡುತ್ತಾರೆ. ಹಬ್ವದ ಪ್ರಯುಕ್ತ ಗ್ರಾಮೀಣ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಸಂಭ್ರಮಿಸುತ್ತಾರೆ.
ದೇವಸ್ಥಾನ, ಮಠ, ಚಾವಡಿ ಕಟ್ಟೆಗಳಲ್ಲಿ ಗ್ರಾಮದ ಪ್ರಮುಖರ ಸಮಕ್ಷಮ ಸಭೆ ಸೇರಿ ಹಳೆ ಪಂಚಾಗಕ್ಕೆ ವಿದಾಯ ಹೇಳಿ ಹೊಸ ಪಂಚಾಂಗಕ್ಕೆ ಪೂಜೆ ಸಲ್ಲಿಸಿ ಮಳೆ, ಬೆಳೆ ಇತರೆ ಮಾಹಿತಿ ಹಂಚಿಕೊಳ್ಳುವುದು ರೂಢಿಗತವಾಗಿ ಬಂದಿದೆ. ಪಾಡ್ಯದ ಮರುದಿನ ಕರಿ ಆಚರಣೆ ಹೆಸರಲ್ಲಿ ಬೇಟೆಯಾಡಿ ಬಂದು ಗ್ರಾಮದಲ್ಲಿ ಮೆರವಣಿಗೆ ಮೂಲಕ ಬಣ್ಣ ಎರಚುತ್ತ ಸಂಭ್ರಮಿಸಿ ಹೊಸ ವರ್ಷಕ್ಕೆ ಸ್ವಾಗತ ಕೋರುತ್ತಾರೆ.
ಯುಗಾದಿಗೆ ಬಣ್ಣದಾಟ
ಜಾಲಹಳ್ಳಿcಪಟ್ಟಣದಲ್ಲಿ ಯುಗಾದಿಗೆ ಬಣ್ಣದಾಟ ಅಡುವುದೇ ವಿಶೇಷವಾಗಿದೆ. ಎಲ್ಲೆಡೆ ಹೋಳಿ ಹುಣ್ಣಿಮೆ ಬಣ್ಣ ಆಡಿದರೆ, ಜಾಲಹಳ್ಳಿಯಲ್ಲಿ ಯುಗಾದಿ ದಿನ ಬಣ್ಣದೋಕುಳಿ ನಡೆಯುತ್ತದೆ. ಹಬ್ಬದ ದಿನವೇ ಶ್ರೀ ಲಕ್ಷ್ಮಿ ರಂಗನಾಥ ದೇವಸ್ಥಾನದ ಜಾತ್ರೆ ನಡೆಸಲು ರಥೋತ್ಸವ ಕ್ಕೆ ದಿನಾಂಕ ನಿಗದಿ ಪಡಿಸಲಾಗುತ್ತದೆ. ದೊರೆಗಳ ಮನೆಯವರು, ದೇಸಾಯಿ, ಪೊಲೀಸ್ ಗೌಡರು, ಕುಲಕರ್ಣಿ, ಮಾಲಿ ಗೌಡರು ಗ್ರಾಮಸ್ಥರು ದೇವಸ್ಥಾನದಲ್ಲಿ ಸೇರಿ ಸಭೆ ನಡೆಸಿ ಜಾತ್ರೆಗೆ ಸಿದ್ಧತೆ ಆರಂಭಿಸುವ ಪದ್ಧತಿ ನಡೆದುಕೊಂಡು ಬಂದಿದೆ.

ತ್ರಯಂಭಕೇಶ್ವರ ದೇವಸ್ಥಾನ: ಗರ್ಭ ಗುಡಿ ಪ್ರವೇಶಿಸುವ ಸೂರ್ಯರಶ್ಮಿ
ಕವಿತಾಳ ಪಟ್ಟಣದಲ್ಲಿರುವ 12ನೇ ಶತಮಾನದ ಪ್ರಾಚೀನ ತ್ರಯಂಭಕೇಶ್ವರ ದೇವಸ್ಥಾನವು ಹಲವು ವಿಶೇಷತೆಗಳಿಂದ ಕೂಡಿದೆ. ಪ್ರತಿವರ್ಷ ಯುಗಾದಿ ದಿನ ಸೂರ್ಯ ರಶ್ಮಿ ನೇರವಾಗಿ ದೇವಸ್ಥಾನದ ಗರ್ಭಗುಡಿ ಪ್ರವೇಶಿಸುತ್ತದೆ.
ಈ ಕೌತುಕ ನೋಡುವುದಕ್ಕೆ ಪ್ರತಿವರ್ಷವೂ ಭಕ್ತರು ಆಗಮಿತ್ತಾರೆ. ಯುಗಾದಿ ದಿನ ತ್ರಯಂಭಕೇಶ್ವರನ ದರ್ಶನ ಪಡೆಯುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆಯೂ ಇದೆ. ಮುಂಬರುವ ವರ್ಷವೆಲ್ಲವೂ ಒಳ್ಳೆಯದಾಗಲಿ ಎನ್ನುವ ಸಂಕಲ್ಪವನ್ನು ಭಕ್ತರು ಮಾಡುತ್ತಾರೆ.
ಈ ದೇವಸ್ಥಾನಕ್ಕೆ ಅಂದಾಜು ಎಂಟು ನೂರು ವರ್ಷಗಳ ಇತಿಹಾಸ ಇದೆ. ಐತಿಹಾಸಿಕ ಮಹತ್ವ ಹೊಂದಿದ, ಇಡೀ ಭರತ ಖಂಡದಲ್ಲಿಯೇ ಒಂದೇ ಪಾಣಿ ಬಟ್ಟಲಿನಲ್ಲಿ ಮೂರು ಲಿಂಗುಗಳಿರುವ ದೇವಸ್ಥಾನಗಳು ಕೇವಲ ಎರಡು ಇದ್ದು ಒಂದು ಮಹಾರಾಷ್ಟ್ರದ ನಾಸಿಕದಲ್ಲಿ ಇನ್ನೊಂದು ಕವಿತಾಳದಲ್ಲಿ ಎನ್ನುತ್ತವೆ ಇತಿಹಾಸದ ಪುಟಗಳು.
ಯುಗಾದಿ ಪಾಡ್ಯದಿಂದ 9 ದಿನಗಳ ರಾಮ ನವಮಿಯಂದು ಜಾತ್ರಾ ಮಹೋತ್ಸವ ನಡೆಯುತ್ತದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಜನರು ಚಾತ್ರೆಗೆ ಆಗಮಿಸುತ್ತಾರೆ. ಜಾನುವಾರು ಜಾತ್ರೆ ನಡೆಯುತ್ತದೆ. ʼಯುಗಾದಿ ಹಬ್ಬದಂದು ಮಹಾ ರುದ್ರಾಭಿಷೇಕ, ಕುಂಕುಮಾರ್ಚನೆ, ಸಹಸ್ರ ಭಿಲ್ವಾರ್ಚನೆ ಮತ್ತು ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಗುತ್ತದೆʼ ಎಂದು ಪ್ರಧಾನ ಅರ್ಚಕ ಸಿದ್ದಯ್ಯ ಸ್ವಾಮಿ ತಿಳಿಸಿದರು.
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲೂ ಶ್ರೀರಾಘವೇಂದ್ರತೀರ್ಥರ ಮೂಲಬೃಂದಾವನಕ್ಕೆ ವಿಶೇಷ ಪೂಜೆ ಅಲಂಕಾರ ನಡೆಯುತ್ತದೆ. ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಮೂಲರಾಮದೇವರ ಪೂಜೆ ವಿಶೇಷ ಪೂಜೆ ನೆರವೇರಿಸಿ ಅಖನುಗ್ರಹ ಸಂದೇಶ ನೀಡುತ್ತಾರೆ. ನಾಡಿನ ವಿವಿಧೆಡಯಿಂದ ಮಂತ್ರಾಲಯಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಈಗಾಗಲೇ ಯಾತ್ರಿ ನಿವಾಸ ಭರ್ತಿಯಾಗಿವೆ.
ಶ್ರೀಶೈಲಂನಲ್ಲಿ ರಥೋತ್ಸವ ನಾಳೆ
ಏಪ್ರಿಲ್ 9 ರಂದು ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂನಲ್ಲಿ ಜರುಗಲಿರುವ ರಥೋತ್ಸವದಲ್ಲಿ ಪಾಲ್ಗೊಳ್ಳಲಿರುವ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಿಂದಲೂ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications