ಮಳೆಗೆ ಕಮರಿದ ಸೊಪ್ಪು, ತರಕಾರಿ; ಗ್ರಾಹಕರ ಜೇಬಿಗೆ ಕತ್ತರಿ: ಸಂಕಷ್ಟದಲ್ಲಿ ರೈತರು
ರಾಯಚೂರು, ಅಕ್ಟೋಬರ್ 6: ಸತತ ಸುರಿದ ಅಕಾಲಿಕ ಮಳೆ ಹಾಗೂ ಹವಾಮಾನ ವೈಪರೀತ್ಯ ಮತ್ತು ಶೀತಗಾಳಿ ಪ್ರಮಾಣ ಹೆಚ್ಚಾಗಿ ಕೃಷಿ, ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದರಿಂದ ರಾಯಚೂರು ಜಿಲ್ಲೆಯ ರೈತರು ಕಂಲಾಗಿದ್ದಾರೆ.
ಜಿಲ್ಲಾದ್ಯಂತ ಅಂದಾಜು 22 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ತರಕಾರಿ ಬೆಳೆದಿದ್ದು, ಮೆಣಸಿನಕಾಯಿ, ದಾಳಿಂಬೆ, ಹೂ ಕೋಸು, ಈರುಳ್ಳಿ ಸಹ ಬೆಳೆದಿದ್ದಾರೆ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳೆಗಳು ಸಂಪೂರ್ಣ ಕೊಳೆತಿದೆ. ಜಿಲ್ಲಾದ್ಯಂತ ಅಂದಾಜು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾಳಾಗಿವೆ. ಮಳೆಯಿಂದ ಹೂ ಕೋಸು, ಟೊಮೇಟೊ, ಈರುಳ್ಳಿ ಬೆಳೆಗೆ ಬಾರಿ ಪೆಟ್ಟು ಬಿದ್ದಿದೆ.
ಮಳೆಯಿಂದ ಬೆಳೆಗಳು ಕೊಳೆಯುವ ಪರಿಸ್ಥಿತಿ ಬಂದಿದೆ. ಹೂ ಕೋಸು ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಖರೀದಿಗೆ ಮುಂದಾಗುತ್ತಿಲ್ಲ. ಹೀಗಾಗಿ ಬೆಳೆಯೆಲ್ಲ ಹಿಂತಿರುಗಿ ರೈತರ ಮನೆಗೆ ಸೇರಿದ್ದರಿಂದ ರೈತರು ಸಂಪೂರ್ಣ ನಷ್ಟ ಅನುಭವಿಸುತ್ತಿದ್ದಾರೆ.
ಇದು ರೈತರ ಪಾಡಾದರೆ ಉತ್ತಮ ಹೆಚ್ಚಿನ ಪ್ರಮಾಣದ ತರಕಾರಿ ಮಾರುಕಟ್ಟೆಯಲ್ಲಿಲ್ಲದ ಕಾರಣ ಕೆಜಿಗೆ 20-30 ರೂ. ಇದ್ದ ಟೊಮೇಟೊ ಈಗ 70 ರೂ. ಆಗಿದೆ. ಕೆಜಿಗೆ 40 ಇದ್ದ ಬೀನ್ಸ್ ಈಗ 70-80 ರೂ. ಏರಿಕೆಯಾಗಿದೆ. ಸೌತೆಕಾಯಿ, ಹೂ ಕೋಸು ಬೆಲೆಯೂ ಹೆಚ್ಚಾಗಿದ್ದರಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದ್ದು, ತರಕಾರಿ ಕೊಳ್ಳುವುದೇ ದುಸ್ತರವಾಗಿದೆ. ಅದರಲ್ಲೂ ಬಡ, ಮಧ್ಯಮ ವರ್ಗದವರಂತೂ ತರಕಾರಿ ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ರೈತರಿಗೆ ನಷ್ಟ, ಗ್ರಾಹಕರಿಗೆ ಹೊರೆ
ಈರುಳ್ಳಿ 40-50 ರೂ. ಆಗಿದೆ. ಕ್ಯಾರೆಟ್ ಕೆಜಿಗೆ 30 ರೂ. ಇದ್ದಿದ್ದು ಈಗ 50 ರೂ. , ಹಿರೇಕಾಯಿ ಬೆಲೆ ದುಪ್ಪಟ್ಟಾಗಿದ್ದು, ಕೆಜಿಗೆ 60 ರೂ. ಆಗಿದೆ. ಬೆಂಡೆಕಾಯಿ 50 ರೂ.ಗೆ ಏರಿಕೆಯಾಗಿದೆ. ಚವಳಿಕಾಯಿ ಕೆಜಿಗೆ 40 ಇದ್ದಿದ್ದು 60-70 ರೂ.ಗೆ ಏರಿಕೆ ಕಂಡಿದೆ. ಹಾಗಲಕಾಯಿ 50 ರೂ., ಕ್ಯಾಪ್ಸಿಕಮ್ 70 ರೂ. ಗಡಿದಾಟಿದ್ದು, ಕೊಂಡುಕೊಳ್ಳುವುದೇ ಕಷ್ಟವಾಗಿ ಪರಿಣಮಿಸಿದೆ. ಅದರಲ್ಲೂ ಟೊಮೇಟೊ ಬೆಲೆ ಕೇಳಿ ಗ್ರಾಹಕರು ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದು, ಕೆಜಿ ಖರೀದಿಸುತ್ತಿದ್ದ ಗ್ರಾಹಕರು ಅರ್ಧ ಕೆಜಿ ಖರೀದಿಸುತ್ತಿದ್ದಾರೆ. ಬೆಲೆ ಏರಿಕೆಗೆ ತತ್ತರಿಸಿರುವ ಕೆಲವರು ಟೊಮೇಟೊ ಖರೀದಿಸುವುದನ್ನೇ ಬಿಟ್ಟು ಹುಣಿಸೆ ಹಣ್ಣನ್ನೇ ಪರ್ಯಾಯವಾಗಿ ಬಳಸುತ್ತಿದ್ದಾರೆ.

ಮಳೆಯಿಂದ ಕೊಳೆಯುತ್ತಿರುವ ತರಕಾರಿ
ಕೊತ್ತಂಬರಿ, ಪಾಲಕ್, ಮೆಂತೆ ಸೇರಿ ಮುಂತಾದ ಸೊಪ್ಪುಗಳ ಮಳೆಯಿಂದ ಹಾಳಾಗಿದ್ದು, ಇವುಗಳ ಬೆಲೆಯಲ್ಲಿಯೂ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಬೆಳೆ ಹಾಳಾಗಿರುವುದರಿಂದ ದೂರದ ಜಿಲ್ಲೆಗಳಿಂದ ಹಾಗೂ ಆಂಧ್ರ ಹಾಗೂ ತೆಲಂಗಾಣದಿಂದ ತರಕಾರಿ, ಸೊಪ್ಪು ಮಾರುಕಟ್ಟೆಗೆ ಬರುತ್ತಿದೆ ಎನ್ನುತ್ತಾರೆ ತರಕಾರಿ ವ್ಯಾಪಾರಸ್ಥರು. ಜಿಟಿ ಜಿಟಿ ಮಳೆಯಿಂದ ತೇವಾಂಶ ಹೆಚ್ಚಿ ಈರುಳ್ಳಿ ಹಾಳಾಗುತ್ತಿದೆ. ತಾಡಪತ್ರಿ ಹೊದಿಸಿದರೆ, ಗಾಳಿಯಾಡದೇ ದುರ್ನಾತ ಬೀರುತ್ತಿದೆ. ಹೀಗಾಗಿ ಈರುಳ್ಳಿ, ಹೂ ಕೋಸು ಬೆಳೆದವರು ಚಿಂತೆಗೀಡಾಗಿದ್ದಾರೆ.

ಮಾರುಕಟ್ಟೆಯಲ್ಲಿ ಸಿಗದ ಬೆಲೆ
ಮಳೆ ಸ್ವಲ್ಪವೂ ಬಿಡುವು ಕೊಡುತ್ತಿಲ್ಲ. ಕೆಲವೆಡೆ ಈರುಳ್ಳಿ ಹಾಕಿದಲ್ಲೇ ಕೆಡುತ್ತಿವೆ. ಹೂ ಕೋಸು ಮಳೆಯಿಂದ ಹಳದಿ ಬಣ್ಣಕ್ಕೆ ತಿರುಗಿದ್ದರಿಂದ ಕೈಗೆ ಬಂದ ಬೆಳೆ ತಿಪ್ಪೆ ಪಾಲಾಗುತ್ತಿದೆ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹೂ ಕೋಸು ಸಂಪೂರ್ಣ ಹಾಳಾಗಿದೆ. ಮಾರುಕಟ್ಟೆಗೆ ಕಳುಹಿಸಿದರೂ ಬೆಲೆ ಇಲ್ಲದ್ದರಿಂದ ಹಿಂತಿರುಗಿ ಮನೆಗೆ ಬಂದಿದ್ದು, ಕಷ್ಟಪಟ್ಟು ಬೆಳೆಸಿದ ಬೆಳೆ ಹಾಳಾಗಿದೆ ಎಂದು ರೈತ ತಮ್ಮ ನೋವು ತೋಡಿ ಕೊಂಡಿದ್ದಾರೆ.

ಮುಂದುವರೆಗೆ ಬೆಳೆಹಾನಿ ಸಮೀಕ್ಷೆ
ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಳೆಯಿಂದಾಗಿರುವ ಬೆಳೆ ಹಾನಿ ಸಮೀಕ್ಷೆ ನಡೆಸಿದ್ದಾರೆ. 150 ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದ್ದು, ಮತ್ತೆ ಸಮೀಕ್ಷೆ ಮುಂದುವರಿದಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಮಹಮ್ಮದ್ ಅಲಿ ಹೇಳಿದರು.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications